ಬ್ರೇಕಿಂಗ್ ನ್ಯೂಸ್
21-03-26 06:57 pm HK News Staffer ಕರ್ನಾಟಕ
ಚಿಕ್ಕಮಗಳೂರು, ಮಾರ್ಚ್ 21: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ 25ಕ್ಕೂ ಹೆಚ್ಚು ಕಡೆ ಬೆಂಕಿ ಹಾಕಲಾಗಿದ್ದು ಕಳೆದ 2-3 ದಿನಗಳಿಂದ ಧಗ ಧಗನೆ ಅರಣ್ಯ ಉರಿಯುತ್ತಿದೆ. ಬಿಸಿಲ ಬೇಗೆಯ ನಡುವೆ ಶೋಲಾ ಹುಲ್ಲುಗಾವಲು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಹೋಗಿದೆ.
ಶೃಂಗೇರಿ ತಾಲೂಕು ವ್ಯಾಪ್ತಿಯ ಕೆರೆಕಟ್ಟೆ ವಲಯದ ಮಾಣಿಕ್ಯ ಬೆಟ್ಟ ಗಿರಿ ಶ್ರೇಣಿ, ವಾಲಿಕುಂಜ, ನರಸಿಂಹ ಪರ್ವತ, ಕಿತ್ಲೆಮನೆಕೊಡಿಗೆ ಸೇರಿದಂತೆ ಬೆಟ್ಟದ ಸಾಲಿನುದ್ದಕ್ಕೂ ಬೆಂಕಿ ಬಿದ್ದಿದೆ. ಮೊದಲಿಗೆ ಸಣ್ಣ ಪ್ರಮಾಣದಲ್ಲಿದ್ದ ಬೆಂಕಿ ದಿನ ಕಳೆದಂತೆ ಬೆಟ್ಟದ ಸಾಲಿನುದ್ದಕ್ಕೂ ಹರಡಿದ್ದು ನೂರಾರು ಪ್ರಾಣಿ, ಪಕ್ಷಿಗಳು ಆಹುತಿಯಾಗಿವೆ. ಬೇಸಿಗೆಯ ಹುಲ್ಲು, ಒಣಗಿದ ತರಗೆಲೆಗಳು, ಭಾರೀ ಬಿಸಿಲು ಬೆಂಕಿ ಮತ್ತಷ್ಟು ಹರಡಲು ಕಾರಣವಾಗಿದೆ.
ಯಾರೋ ಕಿಡಿಗೇಡಿಗಳು ಕಾಡಿಗೆ ಬೆಂಕಿ ಹಚ್ಚಿರುವ ಶಂಕೆಯಿದ್ದು ವಿಷಯ ತಿಳಿದು ಅರಣ್ಯ ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶ ಮಾಡಿದ್ದಾರೆ. ಮಂಗಳೂರು ವಿಭಾಗದ ಅರಣ್ಯಾಧಿಕಾರಿ ಮರಿಯಪ್ಪ ಕರಿಕಳನ್ ಅವರಿಗೆ ತನಿಖೆಗೆ ಸೂಚಿಸಿದ್ದು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.






ನಾಲ್ಕೈದು ದಿನಗಳಿಂದ ಕಾಡು ಉರಿಯುತ್ತಿದ್ದು ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದಾಗಿ ನೆಲದಲ್ಲಿ ಗೂಡುಕಟ್ಟುವ ಪಕ್ಷಿ, ಪ್ರಾಣಿಗಳು, ಅಪರೂಪದ ಸಸ್ಯಸಂಪತ್ತು ಸುಟ್ಟು ಹೋಗಿದೆ. ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ನೂರಾರು ಎಕರೆ ಅರಣ್ಯ ನಾಶವಾಗಿದೆ ಎನ್ನುವ ಆರೋಪವನ್ನು ಪರಿಸರ ಪ್ರೇಮಿಗಳು ಮಾಡಿದ್ದಾರೆ.
ಅರಣ್ಯ ವೀಕ್ಷಕರ ನೇಮಕ ಮಾಡಿಕೊಳ್ಳದೇ ಇರೋದು, ಬೆಂಕಿ ನಿಯಂತ್ರಣ ರೇಖೆ, ವೀಕ್ಷಣಾ ಗೋಪುರ ಮಾಡದೇ ಇರುವುದರಿಂದ ಬೆಂಕಿ ದೊಡ್ಡ ಪ್ರಮಾಣದಲ್ಲಿ ಹರಡಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ವಾರದಿಂದ ಕಾಡು ಹೊತ್ತಿ ಉರಿಯುತ್ತಿದ್ದರೂ ಸ್ಥಳಕ್ಕೆ ಯಾರೂ ಭೇಟಿ ನೀಡಿಲ್ಲ ಎಂದು ಕಾರ್ಕಳ ಡಿಎಫ್ಓ ಶಿವರಾಮ್ ಬಾಬು ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು- ಶಿವಮೊಗ್ಗ- ಉಡುಪಿ ಜಿಲ್ಲೆಯ ಗಡಿಯನ್ನು ಹಂಚಿಕೊಂಡಿರುವ ಕುದುರೆಮುಖ ಅರಣ್ಯದಲ್ಲಿ ಬೆಂಕಿ ಬಿದ್ದರೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ದೊಡ್ಡ ಪ್ರಮಾಣದ ನಾಶಕ್ಕೆ ಕಾರಣವಾಗುತ್ತಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm