ಬ್ರೇಕಿಂಗ್ ನ್ಯೂಸ್
21-03-26 08:25 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 21: ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಡಿಜಿಪಿ ಕೆ. ರಾಮಚಂದ್ರ ರಾವ್ ಅವರ ವೈರಲ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ತಿರುವು ಲಭಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಈ ವಿಡಿಯೋಗಳು ಸಂಪೂರ್ಣ ನಿಜವಾಗಿದ್ದು, ಅವು ಯಾವುದೇ ರೀತಿಯ ಡೀಪ್ಫೇಕ್, ಕೃತಕ ಬುದ್ಧಿಮತ್ತೆ (AI) ನಿರ್ಮಿತ ಅಥವಾ ಎಡಿಟ್ ಮಾಡಲಾದ ದೃಶ್ಯಗಳಲ್ಲ ಎಂಬುದು ಇದೀಗ ತನಿಖೆಯಲ್ಲಿ ದೃಢಪಟ್ಟಿದೆ. ಆಮೂಲಕ ನಿವೃತ್ತಿ ಅಂಚಿನಲ್ಲಿರುವ ಹಿರಿಯ ಪೊಲೀಸ್ ಅಧಿಕಾರಿಗೆ ತೀವ್ರ ಸಂಕಷ್ಟ ಎದುರಾಗಿದೆ.
ರಾಜ್ಯ ಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಲು ರಾಜ್ಯ ಸರ್ಕಾರವು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್. ಹಿತೇಂದ್ರ ಅವರ ನೇತೃತ್ವದಲ್ಲಿ ನಾಲ್ವರು ಐಪಿಎಸ್ ಅಧಿಕಾರಿಗಳ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಇದೀಗ ಈ ಸಮಿತಿಯು ಸರ್ಕಾರಕ್ಕೆ ಬರೋಬ್ಬರಿ 100 ಪುಟಗಳ ವರದಿಯನ್ನು ಸಲ್ಲಿಸಿದ್ದು, ವಿಡಿಯೋ ಅಸಲಿಯತ್ತನ್ನು ಬಯಲು ಮಾಡಿದೆ.
ವಿಧಿವಿಜ್ಞಾನ ಪ್ರಯೋಗಾಲಯ ತಜ್ಞರು ಈ ವಿವಾದಿತ ವಿಡಿಯೋವನ್ನು ಕೂಲಂಕಷವಾಗಿ ಪರಿಶೀಲಿಸಿದ್ದು, ದೃಶ್ಯಗಳಲ್ಲಿ ಯಾವುದೇ ರೀತಿಯ ತಾಂತ್ರಿಕ ಮಾರ್ಪಾಡುಗಳು ಅಥವಾ ಎಡಿಟಿಂಗ್ ನಡೆದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಕಚೇರಿಯೊಳಗೆ ನಡೆದಿರುವ ಈ ಘಟನೆ ಸಂಪೂರ್ಣ ಸತ್ಯವಾಗಿದೆ. ಕೆ. ರಾಮಚಂದ್ರ ರಾವ್ ಅವರು 2016-17ರ ಅವಧಿಯಲ್ಲಿ ಬೆಳಗಾವಿ ವಲಯದ ಐಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಅವರದೇ ಕಚೇರಿಯಲ್ಲಿ ಈ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ.
ವರದಿಯ ಪ್ರಕಾರ, ರಾವ್ ಅವರ ಬೆಳಗಾವಿ ಕಚೇರಿಯಲ್ಲಿ ಆ ಸಮಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕರು ಮತ್ತು ಕಚೇರಿ ಸಿಬ್ಬಂದಿ ವಿಡಿಯೋದಲ್ಲಿರುವ ಮಹಿಳೆಯರನ್ನು ಗುರುತಿಸಿದ್ದಾರೆ. ಅಷ್ಟೇ ಅಲ್ಲದೆ, ಈ ಇಬ್ಬರು ಮಹಿಳೆಯರು ಆಗಾಗ್ಗೆ ರಾವ್ ಅವರ ಖಾಸಗಿ ಕಚೇರಿಗೆ ಭೇಟಿ ನೀಡುತ್ತಿದ್ದರು ಎಂಬ ಅಂಶವನ್ನೂ ಸಹ ಸಿಬ್ಬಂದಿ ತನಿಖಾ ತಂಡದ ಮುಂದೆ ದೃಢಪಡಿಸಿದ್ದಾರೆ.
ನಾಪತ್ತೆಯಾಗಿರುವ ಮಹಿಳೆಯರು
ಮೂಲಗಳ ಪ್ರಕಾರ, ಕಚೇರಿಗೆ ಬರುತ್ತಿದ್ದ ಇಬ್ಬರು ಮಹಿಳೆಯರಲ್ಲಿ ಒಬ್ಬರು ಉದ್ದೇಶಪೂರ್ವಕವಾಗಿ ತಮ್ಮದೇ ಮೊಬೈಲ್ ಫೋನ್ ಬಳಸಿ ಈ ದೃಶ್ಯಗಳನ್ನು ಚಿತ್ರೀಕರಿಸಿದ್ದಾರೆ ಎನ್ನಲಾಗಿದೆ. ಆದರೆ, ಈ ವಿಡಿಯೋ ಬಹಿರಂಗವಾಗಿ ವಿವಾದ ಭುಗಿಲೇಳುತ್ತಿದ್ದಂತೆ ವಿಡಿಯೋದಲ್ಲಿರುವ ಆ ಇಬ್ಬರೂ ಮಹಿಳೆಯರು ದಿಢೀರ್ ನಾಪತ್ತೆಯಾಗಿದ್ದಾರೆ. ಘಟನೆ ಬೆಳಕಿಗೆ ಬಂದ ಬಳಿಕ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಪ್ರಕರಣದ ಮುಂದಿನ ತನಿಖೆ ಹಾಗೂ ಕಾನೂನು ಪ್ರಕ್ರಿಯೆಗಳಿಗೆ ಈ ಮಹಿಳೆಯರ ಹೇಳಿಕೆ ಅತ್ಯಂತ ನಿರ್ಣಾಯಕವಾಗಿದೆ. ಹೀಗಾಗಿ, ಅವರು ತನಿಖಾ ತಂಡದ ಮುಂದೆ ಖುದ್ದಾಗಿ ಹಾಜರಾಗಬೇಕಾದ ಅನಿವಾರ್ಯತೆ ಇದ್ದು, ಅವರ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm