ಬ್ರೇಕಿಂಗ್ ನ್ಯೂಸ್
21-03-26 08:29 pm HK News Staffer ಕರ್ನಾಟಕ
ದಾವಣಗೆರೆ, ಮಾ 21: ರಂಜಾನ್ ಹಬ್ಬದ ಪ್ರಯುಕ್ತ ಪ್ರಾರ್ಥನೆ ಸಲ್ಲಿಸುವ ವೇಳೆ ಜನರ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ತಾಲೂಕಿನ ಆನಗೋಡು ಗ್ರಾಮದಲ್ಲಿ ನಡೆದಿದೆ.
ನಮಾಜ್ ಮಾಡುವ ವೇಳೆ ಹೆಜ್ಜೇನು ಗೂಡಿಗೆ ಯಾರೋ ಕಲ್ಲಿನಿಂದ ಹೊಡೆದ ಪರಿಣಾಮ ಅವಾಂತರ ಸೃಷ್ಟಿಯಾಗಿದೆ. ಈ ವೇಳೆ ನಮಾಜ್ ಮಾಡ್ತಿದ್ದ ಮುಸ್ಲಿಂ ಬಾಂಧವರ ಮೇಲೆ ಹೆಜ್ಜೇನು ಏಕಾಏಕಿ ದಾಳಿ ಮಾಡಿದ್ದು, ಜನ ಧಿಕ್ಕಾಪಾಲಾಗಿ ಓಡಿರುವ ಘಟನೆ ನಡೆದಿದೆ.
ಸುಮಾರು 25 ಜನರ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಗಾಯಗೊಂಡವರನ್ನು ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಐವರು ಎನ್ಐಸಿಯುನಲ್ಲಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಹೆಚ್ಚಾಗಿ ಯುವಕರು, ಮಕ್ಕಳು, ಹೆಣ್ಣುಮಕ್ಕಳ ಮೇಲೆ ಜೇನುನೊಣಗಳು ದಾಳಿ ನಡೆಸಿವೆ ಎಂದು ಗ್ರಾಮ ಪಂಚಾಯತ್ ಸದಸ್ಯರು ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದು ಮಾಯಕೊಂಡ ಶಾಸಕ ಬಸವಂತಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಬಳಿಕ ಈ ಕುರಿತು ಮಾತನಾಡಿದ ಅವರು, 'ವೃದ್ಧರು, ಮಕ್ಕಳು, ಯುವಕರ ಮೇಲೆ ಜೇನು ದಾಳಿ ಮಾಡಿದ್ದು, ಅವರೀಗ ತೊಂದರೆಯಲ್ಲಿದ್ದಾರೆ. ಈಗಾಗಲೇ ಚಿಕಿತ್ಸೆ ಕೊಡಿಸಿ ಅವರನ್ನು ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ. ಕೆಲ ಗಾಯಾಳುಗಳನ್ನು ಕರೆತರಲಾಗುತ್ತಿದೆ. ಮತ್ತಷ್ಟು ಜನರಿಗೆ ಆನಗೋಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಹೇಳಿದ್ದೇನೆ. ಹೆಜ್ಜೇನು ದಾಳಿ ಮಾಡಿದ್ದರಿಂದ ವೃದ್ಧರ ಪರಿಸ್ಥಿತಿ ಚಿಂತಾಜನಕವಾಗಿದೆ. ಈದ್ ನ ನಮಾಜ್ ಮಾಡುವ ವೇಳೆ ಮಕ್ಕಳು ಹೆಜ್ಜೇನನ್ನು ಏಳಿಸಿ ಬಿಟ್ಟಿದ್ದಾರೆ. ಹೀಗಾಗಿ, ಅಲ್ಲಿದ್ದ ಜನರ ಮೇಲೆ ಹೆಜ್ಜೇನು ದಾಳಿ ಮಾಡಿವೆ. ಐದಾರು ಜನರು ಹೆಚ್ಚು ಸೀರಿಯಸ್ ಇದ್ದಾರೆ. ವೃದ್ಧರು ತಡೆದುಕೊಳ್ಳುತ್ತಿಲ್ಲ' ಎಂದು ತಿಳಿಸಿದರು.
ಗ್ರಾ. ಪಂ. ಸದಸ್ಯ ನಸ್ರುಲ್ಲಾ ಅವರು ಮಾತನಾಡಿ, 'ಹೆಜ್ಜೇನಿಗೆ ಯಾರೋ ಹುಡುಗರು ಕಲ್ಲು ಹೊಡೆದಿದ್ದಾರೆ. ಏನ್ ಆಗಿದೆ ಗೊತ್ತಿಲ್ಲ. ಅಚಾನಕ್ ಆಗಿದೆ, ನಮಗೆ ಗೊತ್ತಿದ್ದರೆ ಏನಾದರೂ ಮಾಡ್ತಿದ್ದೆವು. ಈಗಾಗಲೇ ಆನಗೋಡು ಆಸ್ಪತ್ರೆಯಲ್ಲಿ ತೋರಿಸಿದ್ದೇವೆ. ಒಬ್ಬೊಬ್ಬರೆ ಆಸ್ಪತ್ರೆಗೆ ಬರುತ್ತಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದೆ. ಪೊಲೀಸರಿಗೂ ಕಚ್ಚಿದ್ದರಿಂದಾಗಿ ಅವರು ಓಡಿಹೋಗಿದ್ದಾರೆ' ಎಂದು ತಿಳಿಸಿದರು.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm