ಬ್ರೇಕಿಂಗ್ ನ್ಯೂಸ್
21-03-26 08:29 pm HK News Staffer ಕರ್ನಾಟಕ
ದಾವಣಗೆರೆ, ಮಾ 21: ರಂಜಾನ್ ಹಬ್ಬದ ಪ್ರಯುಕ್ತ ಪ್ರಾರ್ಥನೆ ಸಲ್ಲಿಸುವ ವೇಳೆ ಜನರ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ತಾಲೂಕಿನ ಆನಗೋಡು ಗ್ರಾಮದಲ್ಲಿ ನಡೆದಿದೆ.
ನಮಾಜ್ ಮಾಡುವ ವೇಳೆ ಹೆಜ್ಜೇನು ಗೂಡಿಗೆ ಯಾರೋ ಕಲ್ಲಿನಿಂದ ಹೊಡೆದ ಪರಿಣಾಮ ಅವಾಂತರ ಸೃಷ್ಟಿಯಾಗಿದೆ. ಈ ವೇಳೆ ನಮಾಜ್ ಮಾಡ್ತಿದ್ದ ಮುಸ್ಲಿಂ ಬಾಂಧವರ ಮೇಲೆ ಹೆಜ್ಜೇನು ಏಕಾಏಕಿ ದಾಳಿ ಮಾಡಿದ್ದು, ಜನ ಧಿಕ್ಕಾಪಾಲಾಗಿ ಓಡಿರುವ ಘಟನೆ ನಡೆದಿದೆ.
ಸುಮಾರು 25 ಜನರ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಗಾಯಗೊಂಡವರನ್ನು ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಐವರು ಎನ್ಐಸಿಯುನಲ್ಲಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಹೆಚ್ಚಾಗಿ ಯುವಕರು, ಮಕ್ಕಳು, ಹೆಣ್ಣುಮಕ್ಕಳ ಮೇಲೆ ಜೇನುನೊಣಗಳು ದಾಳಿ ನಡೆಸಿವೆ ಎಂದು ಗ್ರಾಮ ಪಂಚಾಯತ್ ಸದಸ್ಯರು ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದು ಮಾಯಕೊಂಡ ಶಾಸಕ ಬಸವಂತಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಬಳಿಕ ಈ ಕುರಿತು ಮಾತನಾಡಿದ ಅವರು, 'ವೃದ್ಧರು, ಮಕ್ಕಳು, ಯುವಕರ ಮೇಲೆ ಜೇನು ದಾಳಿ ಮಾಡಿದ್ದು, ಅವರೀಗ ತೊಂದರೆಯಲ್ಲಿದ್ದಾರೆ. ಈಗಾಗಲೇ ಚಿಕಿತ್ಸೆ ಕೊಡಿಸಿ ಅವರನ್ನು ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ. ಕೆಲ ಗಾಯಾಳುಗಳನ್ನು ಕರೆತರಲಾಗುತ್ತಿದೆ. ಮತ್ತಷ್ಟು ಜನರಿಗೆ ಆನಗೋಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಹೇಳಿದ್ದೇನೆ. ಹೆಜ್ಜೇನು ದಾಳಿ ಮಾಡಿದ್ದರಿಂದ ವೃದ್ಧರ ಪರಿಸ್ಥಿತಿ ಚಿಂತಾಜನಕವಾಗಿದೆ. ಈದ್ ನ ನಮಾಜ್ ಮಾಡುವ ವೇಳೆ ಮಕ್ಕಳು ಹೆಜ್ಜೇನನ್ನು ಏಳಿಸಿ ಬಿಟ್ಟಿದ್ದಾರೆ. ಹೀಗಾಗಿ, ಅಲ್ಲಿದ್ದ ಜನರ ಮೇಲೆ ಹೆಜ್ಜೇನು ದಾಳಿ ಮಾಡಿವೆ. ಐದಾರು ಜನರು ಹೆಚ್ಚು ಸೀರಿಯಸ್ ಇದ್ದಾರೆ. ವೃದ್ಧರು ತಡೆದುಕೊಳ್ಳುತ್ತಿಲ್ಲ' ಎಂದು ತಿಳಿಸಿದರು.
ಗ್ರಾ. ಪಂ. ಸದಸ್ಯ ನಸ್ರುಲ್ಲಾ ಅವರು ಮಾತನಾಡಿ, 'ಹೆಜ್ಜೇನಿಗೆ ಯಾರೋ ಹುಡುಗರು ಕಲ್ಲು ಹೊಡೆದಿದ್ದಾರೆ. ಏನ್ ಆಗಿದೆ ಗೊತ್ತಿಲ್ಲ. ಅಚಾನಕ್ ಆಗಿದೆ, ನಮಗೆ ಗೊತ್ತಿದ್ದರೆ ಏನಾದರೂ ಮಾಡ್ತಿದ್ದೆವು. ಈಗಾಗಲೇ ಆನಗೋಡು ಆಸ್ಪತ್ರೆಯಲ್ಲಿ ತೋರಿಸಿದ್ದೇವೆ. ಒಬ್ಬೊಬ್ಬರೆ ಆಸ್ಪತ್ರೆಗೆ ಬರುತ್ತಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದೆ. ಪೊಲೀಸರಿಗೂ ಕಚ್ಚಿದ್ದರಿಂದಾಗಿ ಅವರು ಓಡಿಹೋಗಿದ್ದಾರೆ' ಎಂದು ತಿಳಿಸಿದರು.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm