ಬ್ರೇಕಿಂಗ್ ನ್ಯೂಸ್
21-03-26 08:29 pm HK News Staffer ಕರ್ನಾಟಕ
ದಾವಣಗೆರೆ, ಮಾ 21: ರಂಜಾನ್ ಹಬ್ಬದ ಪ್ರಯುಕ್ತ ಪ್ರಾರ್ಥನೆ ಸಲ್ಲಿಸುವ ವೇಳೆ ಜನರ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ತಾಲೂಕಿನ ಆನಗೋಡು ಗ್ರಾಮದಲ್ಲಿ ನಡೆದಿದೆ.
ನಮಾಜ್ ಮಾಡುವ ವೇಳೆ ಹೆಜ್ಜೇನು ಗೂಡಿಗೆ ಯಾರೋ ಕಲ್ಲಿನಿಂದ ಹೊಡೆದ ಪರಿಣಾಮ ಅವಾಂತರ ಸೃಷ್ಟಿಯಾಗಿದೆ. ಈ ವೇಳೆ ನಮಾಜ್ ಮಾಡ್ತಿದ್ದ ಮುಸ್ಲಿಂ ಬಾಂಧವರ ಮೇಲೆ ಹೆಜ್ಜೇನು ಏಕಾಏಕಿ ದಾಳಿ ಮಾಡಿದ್ದು, ಜನ ಧಿಕ್ಕಾಪಾಲಾಗಿ ಓಡಿರುವ ಘಟನೆ ನಡೆದಿದೆ.
ಸುಮಾರು 25 ಜನರ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಗಾಯಗೊಂಡವರನ್ನು ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಐವರು ಎನ್ಐಸಿಯುನಲ್ಲಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಹೆಚ್ಚಾಗಿ ಯುವಕರು, ಮಕ್ಕಳು, ಹೆಣ್ಣುಮಕ್ಕಳ ಮೇಲೆ ಜೇನುನೊಣಗಳು ದಾಳಿ ನಡೆಸಿವೆ ಎಂದು ಗ್ರಾಮ ಪಂಚಾಯತ್ ಸದಸ್ಯರು ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದು ಮಾಯಕೊಂಡ ಶಾಸಕ ಬಸವಂತಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಬಳಿಕ ಈ ಕುರಿತು ಮಾತನಾಡಿದ ಅವರು, 'ವೃದ್ಧರು, ಮಕ್ಕಳು, ಯುವಕರ ಮೇಲೆ ಜೇನು ದಾಳಿ ಮಾಡಿದ್ದು, ಅವರೀಗ ತೊಂದರೆಯಲ್ಲಿದ್ದಾರೆ. ಈಗಾಗಲೇ ಚಿಕಿತ್ಸೆ ಕೊಡಿಸಿ ಅವರನ್ನು ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ. ಕೆಲ ಗಾಯಾಳುಗಳನ್ನು ಕರೆತರಲಾಗುತ್ತಿದೆ. ಮತ್ತಷ್ಟು ಜನರಿಗೆ ಆನಗೋಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಹೇಳಿದ್ದೇನೆ. ಹೆಜ್ಜೇನು ದಾಳಿ ಮಾಡಿದ್ದರಿಂದ ವೃದ್ಧರ ಪರಿಸ್ಥಿತಿ ಚಿಂತಾಜನಕವಾಗಿದೆ. ಈದ್ ನ ನಮಾಜ್ ಮಾಡುವ ವೇಳೆ ಮಕ್ಕಳು ಹೆಜ್ಜೇನನ್ನು ಏಳಿಸಿ ಬಿಟ್ಟಿದ್ದಾರೆ. ಹೀಗಾಗಿ, ಅಲ್ಲಿದ್ದ ಜನರ ಮೇಲೆ ಹೆಜ್ಜೇನು ದಾಳಿ ಮಾಡಿವೆ. ಐದಾರು ಜನರು ಹೆಚ್ಚು ಸೀರಿಯಸ್ ಇದ್ದಾರೆ. ವೃದ್ಧರು ತಡೆದುಕೊಳ್ಳುತ್ತಿಲ್ಲ' ಎಂದು ತಿಳಿಸಿದರು.
ಗ್ರಾ. ಪಂ. ಸದಸ್ಯ ನಸ್ರುಲ್ಲಾ ಅವರು ಮಾತನಾಡಿ, 'ಹೆಜ್ಜೇನಿಗೆ ಯಾರೋ ಹುಡುಗರು ಕಲ್ಲು ಹೊಡೆದಿದ್ದಾರೆ. ಏನ್ ಆಗಿದೆ ಗೊತ್ತಿಲ್ಲ. ಅಚಾನಕ್ ಆಗಿದೆ, ನಮಗೆ ಗೊತ್ತಿದ್ದರೆ ಏನಾದರೂ ಮಾಡ್ತಿದ್ದೆವು. ಈಗಾಗಲೇ ಆನಗೋಡು ಆಸ್ಪತ್ರೆಯಲ್ಲಿ ತೋರಿಸಿದ್ದೇವೆ. ಒಬ್ಬೊಬ್ಬರೆ ಆಸ್ಪತ್ರೆಗೆ ಬರುತ್ತಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದೆ. ಪೊಲೀಸರಿಗೂ ಕಚ್ಚಿದ್ದರಿಂದಾಗಿ ಅವರು ಓಡಿಹೋಗಿದ್ದಾರೆ' ಎಂದು ತಿಳಿಸಿದರು.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm