ಬ್ರೇಕಿಂಗ್ ನ್ಯೂಸ್
21-03-26 08:29 pm HK News Staffer ಕರ್ನಾಟಕ
ದಾವಣಗೆರೆ, ಮಾ 21: ರಂಜಾನ್ ಹಬ್ಬದ ಪ್ರಯುಕ್ತ ಪ್ರಾರ್ಥನೆ ಸಲ್ಲಿಸುವ ವೇಳೆ ಜನರ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ತಾಲೂಕಿನ ಆನಗೋಡು ಗ್ರಾಮದಲ್ಲಿ ನಡೆದಿದೆ.
ನಮಾಜ್ ಮಾಡುವ ವೇಳೆ ಹೆಜ್ಜೇನು ಗೂಡಿಗೆ ಯಾರೋ ಕಲ್ಲಿನಿಂದ ಹೊಡೆದ ಪರಿಣಾಮ ಅವಾಂತರ ಸೃಷ್ಟಿಯಾಗಿದೆ. ಈ ವೇಳೆ ನಮಾಜ್ ಮಾಡ್ತಿದ್ದ ಮುಸ್ಲಿಂ ಬಾಂಧವರ ಮೇಲೆ ಹೆಜ್ಜೇನು ಏಕಾಏಕಿ ದಾಳಿ ಮಾಡಿದ್ದು, ಜನ ಧಿಕ್ಕಾಪಾಲಾಗಿ ಓಡಿರುವ ಘಟನೆ ನಡೆದಿದೆ.
ಸುಮಾರು 25 ಜನರ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಗಾಯಗೊಂಡವರನ್ನು ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಐವರು ಎನ್ಐಸಿಯುನಲ್ಲಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಹೆಚ್ಚಾಗಿ ಯುವಕರು, ಮಕ್ಕಳು, ಹೆಣ್ಣುಮಕ್ಕಳ ಮೇಲೆ ಜೇನುನೊಣಗಳು ದಾಳಿ ನಡೆಸಿವೆ ಎಂದು ಗ್ರಾಮ ಪಂಚಾಯತ್ ಸದಸ್ಯರು ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದು ಮಾಯಕೊಂಡ ಶಾಸಕ ಬಸವಂತಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಬಳಿಕ ಈ ಕುರಿತು ಮಾತನಾಡಿದ ಅವರು, 'ವೃದ್ಧರು, ಮಕ್ಕಳು, ಯುವಕರ ಮೇಲೆ ಜೇನು ದಾಳಿ ಮಾಡಿದ್ದು, ಅವರೀಗ ತೊಂದರೆಯಲ್ಲಿದ್ದಾರೆ. ಈಗಾಗಲೇ ಚಿಕಿತ್ಸೆ ಕೊಡಿಸಿ ಅವರನ್ನು ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ. ಕೆಲ ಗಾಯಾಳುಗಳನ್ನು ಕರೆತರಲಾಗುತ್ತಿದೆ. ಮತ್ತಷ್ಟು ಜನರಿಗೆ ಆನಗೋಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಹೇಳಿದ್ದೇನೆ. ಹೆಜ್ಜೇನು ದಾಳಿ ಮಾಡಿದ್ದರಿಂದ ವೃದ್ಧರ ಪರಿಸ್ಥಿತಿ ಚಿಂತಾಜನಕವಾಗಿದೆ. ಈದ್ ನ ನಮಾಜ್ ಮಾಡುವ ವೇಳೆ ಮಕ್ಕಳು ಹೆಜ್ಜೇನನ್ನು ಏಳಿಸಿ ಬಿಟ್ಟಿದ್ದಾರೆ. ಹೀಗಾಗಿ, ಅಲ್ಲಿದ್ದ ಜನರ ಮೇಲೆ ಹೆಜ್ಜೇನು ದಾಳಿ ಮಾಡಿವೆ. ಐದಾರು ಜನರು ಹೆಚ್ಚು ಸೀರಿಯಸ್ ಇದ್ದಾರೆ. ವೃದ್ಧರು ತಡೆದುಕೊಳ್ಳುತ್ತಿಲ್ಲ' ಎಂದು ತಿಳಿಸಿದರು.
ಗ್ರಾ. ಪಂ. ಸದಸ್ಯ ನಸ್ರುಲ್ಲಾ ಅವರು ಮಾತನಾಡಿ, 'ಹೆಜ್ಜೇನಿಗೆ ಯಾರೋ ಹುಡುಗರು ಕಲ್ಲು ಹೊಡೆದಿದ್ದಾರೆ. ಏನ್ ಆಗಿದೆ ಗೊತ್ತಿಲ್ಲ. ಅಚಾನಕ್ ಆಗಿದೆ, ನಮಗೆ ಗೊತ್ತಿದ್ದರೆ ಏನಾದರೂ ಮಾಡ್ತಿದ್ದೆವು. ಈಗಾಗಲೇ ಆನಗೋಡು ಆಸ್ಪತ್ರೆಯಲ್ಲಿ ತೋರಿಸಿದ್ದೇವೆ. ಒಬ್ಬೊಬ್ಬರೆ ಆಸ್ಪತ್ರೆಗೆ ಬರುತ್ತಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದೆ. ಪೊಲೀಸರಿಗೂ ಕಚ್ಚಿದ್ದರಿಂದಾಗಿ ಅವರು ಓಡಿಹೋಗಿದ್ದಾರೆ' ಎಂದು ತಿಳಿಸಿದರು.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am