ಬ್ರೇಕಿಂಗ್ ನ್ಯೂಸ್
22-03-26 11:44 am HK News Staffer ಕರ್ನಾಟಕ
ನವದೆಹಲಿ, ಮಾರ್ಚ್ 21: ಗ್ಯಾಸ್ ಸಿಲಿಂಡರ್ ಗಳಿಲ್ಲದೆ ಪರದಾಡುತ್ತಿದ್ದ ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಾಣಿಜ್ಯ ಬಳಕೆ LPG ಸಿಲಿಂಡರ್ ಹಂಚಿಕೆಯನ್ನು ಶೇ. 50ಕ್ಕೆ ಹೆಚ್ಚಿಸಿದೆ. ಇರಾನ್ ಅಧ್ಯಕ್ಷರ ಜೊತೆಗೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ ಬೆನ್ನಲ್ಲೇ ಎಲ್ ಪಿಜಿ ಹೆಚ್ಚಳದ ಆದೇಶ ಹೊರಬಿದ್ದಿದೆ.
ಮನೆಗಳಿಗೆ ಪೂರೈಸುವ ಅಡುಗೆ ಅನಿಲ ಉತ್ಪಾದನೆಯಲ್ಲಿ ಹೆಚ್ಚಳವಾಗಿದ್ದು, ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ತರಲು ಸಹಾಯವಾಗುತ್ತಿದೆ. ಹೀಗಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿಯಾಗಿ ಶೇ. 20 ರಷ್ಟು ವಾಣಿಜ್ಯ ಎಲ್ಪಿಜಿ ಹಂಚಿಕೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದರೊಂದಿಗೆ ಒಟ್ಟು ಹಂಚಿಕೆಯನ್ನು ಶೇ. 50ಕ್ಕೆ ಹೆಚ್ಚಿಸಲಾಗಿದೆ. ಕಳೆದ ಮೂರು ವಾರಗಳಿಂದ ನಡೆಯುತ್ತಿರುವ ಗಲ್ಫ್ ಯುದ್ಧದಿಂದಾಗಿ ಭಾರತಕ್ಕೆ ಇಂಧನ ಸರಬರಾಜಿನಲ್ಲಿ ವ್ಯತ್ಯಯವಾಗಿದೆ. ಇದರಿಂದಾಗಿ ಮನೆಗಳಿಗೆ ಎಲ್ ಪಿಜಿ ಸರಬರಾಜು ಮಾಡಲು ಆದ್ಯತೆ ನೀಡಲು ಹೋಟೆಲ್ಗಳಂತಹ ವಾಣಿಜ್ಯ ಸಂಸ್ಥೆಗಳಿಗೆ ಎಲ್ಪಿಜಿ ಸರಬರಾಜಿನಲ್ಲಿ ಕಡಿತ ಮಾಡಲಾಗಿತ್ತು.
ಇದೀಗ ರಾಜ್ಯಗಳಿಗೆ ಹೆಚ್ಚುವರಿಯಾಗಿ ಶೇ. 20ರಷ್ಟು ಅನಿಲ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು, ಇದರಿಂದ ಒಟ್ಟು ಹಂಚಿಕೆ ಪ್ರಮಾಣ ಶೇಕಡಾ 50ಕ್ಕೆ ತಲುಪಲಿದೆ. ಮಾರ್ಚ್ 23ರಿಂದ (ಸೋಮವಾರ) ಜಾರಿಗೆ ಬರುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿಯಾಗಿ ಶೇ. 20ರಷ್ಟು ವಾಣಿಜ್ಯ ಬಳಕೆ LPG ಹಂಚಿಕೆ ಮಾಡಲಾಗುವುದು. ಮುಂದಿನ ಆದೇಶದ ವರೆಗೆ ಈ ವ್ಯವಸ್ಥೆ ಜಾರಿಯಲ್ಲಿರುತ್ತದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಿಳಿಸಿದೆ.
ಹೆಚ್ಚುವರಿ ಅನಿಲವನ್ನು ಪ್ರಮುಖವಾಗಿ ರೆಸ್ಟೋರೆಂಟ್, ಢಾಬಾ, ಹೋಟೆಲ್, ಕೈಗಾರಿಕಾ ಕ್ಯಾಂಟೀನ್, ಆಹಾರ ಸಂಸ್ಕರಣೆ ಮತ್ತು ಡೈರಿ ಕ್ಷೇತ್ರಗಳಿಗೆ ಆದ್ಯತೆಯ ಮೇಲೆ ನೀಡಲು ಸೂಚಿಸಲಾಗಿದೆ. ರಾಜ್ಯ ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳು ನಡೆಸುವ ಸಬ್ಸಿಡಿ ಊಟದ ಕೇಂದ್ರಗಳು ಮತ್ತು ಸಮುದಾಯ ಅಡುಗೆ ಮನೆಗಳಿಗೆ ತಡೆರಹಿತ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೆಟ್ರೋಲಿಯಂ ಇಲಾಖೆ ಕಾರ್ಯದರ್ಶಿ ರಾಜ್ಯಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm