ಬ್ರೇಕಿಂಗ್ ನ್ಯೂಸ್
22-03-26 11:44 am HK News Staffer ಕರ್ನಾಟಕ
ನವದೆಹಲಿ, ಮಾರ್ಚ್ 21: ಗ್ಯಾಸ್ ಸಿಲಿಂಡರ್ ಗಳಿಲ್ಲದೆ ಪರದಾಡುತ್ತಿದ್ದ ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಾಣಿಜ್ಯ ಬಳಕೆ LPG ಸಿಲಿಂಡರ್ ಹಂಚಿಕೆಯನ್ನು ಶೇ. 50ಕ್ಕೆ ಹೆಚ್ಚಿಸಿದೆ. ಇರಾನ್ ಅಧ್ಯಕ್ಷರ ಜೊತೆಗೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ ಬೆನ್ನಲ್ಲೇ ಎಲ್ ಪಿಜಿ ಹೆಚ್ಚಳದ ಆದೇಶ ಹೊರಬಿದ್ದಿದೆ.
ಮನೆಗಳಿಗೆ ಪೂರೈಸುವ ಅಡುಗೆ ಅನಿಲ ಉತ್ಪಾದನೆಯಲ್ಲಿ ಹೆಚ್ಚಳವಾಗಿದ್ದು, ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ತರಲು ಸಹಾಯವಾಗುತ್ತಿದೆ. ಹೀಗಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿಯಾಗಿ ಶೇ. 20 ರಷ್ಟು ವಾಣಿಜ್ಯ ಎಲ್ಪಿಜಿ ಹಂಚಿಕೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದರೊಂದಿಗೆ ಒಟ್ಟು ಹಂಚಿಕೆಯನ್ನು ಶೇ. 50ಕ್ಕೆ ಹೆಚ್ಚಿಸಲಾಗಿದೆ. ಕಳೆದ ಮೂರು ವಾರಗಳಿಂದ ನಡೆಯುತ್ತಿರುವ ಗಲ್ಫ್ ಯುದ್ಧದಿಂದಾಗಿ ಭಾರತಕ್ಕೆ ಇಂಧನ ಸರಬರಾಜಿನಲ್ಲಿ ವ್ಯತ್ಯಯವಾಗಿದೆ. ಇದರಿಂದಾಗಿ ಮನೆಗಳಿಗೆ ಎಲ್ ಪಿಜಿ ಸರಬರಾಜು ಮಾಡಲು ಆದ್ಯತೆ ನೀಡಲು ಹೋಟೆಲ್ಗಳಂತಹ ವಾಣಿಜ್ಯ ಸಂಸ್ಥೆಗಳಿಗೆ ಎಲ್ಪಿಜಿ ಸರಬರಾಜಿನಲ್ಲಿ ಕಡಿತ ಮಾಡಲಾಗಿತ್ತು.
ಇದೀಗ ರಾಜ್ಯಗಳಿಗೆ ಹೆಚ್ಚುವರಿಯಾಗಿ ಶೇ. 20ರಷ್ಟು ಅನಿಲ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು, ಇದರಿಂದ ಒಟ್ಟು ಹಂಚಿಕೆ ಪ್ರಮಾಣ ಶೇಕಡಾ 50ಕ್ಕೆ ತಲುಪಲಿದೆ. ಮಾರ್ಚ್ 23ರಿಂದ (ಸೋಮವಾರ) ಜಾರಿಗೆ ಬರುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿಯಾಗಿ ಶೇ. 20ರಷ್ಟು ವಾಣಿಜ್ಯ ಬಳಕೆ LPG ಹಂಚಿಕೆ ಮಾಡಲಾಗುವುದು. ಮುಂದಿನ ಆದೇಶದ ವರೆಗೆ ಈ ವ್ಯವಸ್ಥೆ ಜಾರಿಯಲ್ಲಿರುತ್ತದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಿಳಿಸಿದೆ.
ಹೆಚ್ಚುವರಿ ಅನಿಲವನ್ನು ಪ್ರಮುಖವಾಗಿ ರೆಸ್ಟೋರೆಂಟ್, ಢಾಬಾ, ಹೋಟೆಲ್, ಕೈಗಾರಿಕಾ ಕ್ಯಾಂಟೀನ್, ಆಹಾರ ಸಂಸ್ಕರಣೆ ಮತ್ತು ಡೈರಿ ಕ್ಷೇತ್ರಗಳಿಗೆ ಆದ್ಯತೆಯ ಮೇಲೆ ನೀಡಲು ಸೂಚಿಸಲಾಗಿದೆ. ರಾಜ್ಯ ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳು ನಡೆಸುವ ಸಬ್ಸಿಡಿ ಊಟದ ಕೇಂದ್ರಗಳು ಮತ್ತು ಸಮುದಾಯ ಅಡುಗೆ ಮನೆಗಳಿಗೆ ತಡೆರಹಿತ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೆಟ್ರೋಲಿಯಂ ಇಲಾಖೆ ಕಾರ್ಯದರ್ಶಿ ರಾಜ್ಯಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm