ಬ್ರೇಕಿಂಗ್ ನ್ಯೂಸ್
26-03-26 09:21 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 26: ನೆಲಮಂಗಲ ತಾಲೂಕಿನ ಟಿ. ಬೇಗೂರು ಸಮೀಪದ ಮೆಡಿಕಲ್ ಕಾಲೇಜಿನಲ್ಲಿ ಪ್ರಾಧ್ಯಾಪಕರೊಬ್ಬರು ತರಗತಿ ಕೊಠಡಿಯಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆಗಿದ್ದು, ಅಸಭ್ಯ ವರ್ತನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಈ ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
ಮಾರ್ಚ್ 25ರಂದು ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ವಿಡಿಯೋದಲ್ಲಿ ಪ್ರಾಧ್ಯಾಪಕರು ವಿದ್ಯಾರ್ಥಿನಿಗೆ ಪ್ರಪೋಸ್ ಮಾಡುವ ಜೊತೆಗೆ ಬ್ಯಾಚ್ ವಿದ್ಯಾರ್ಥಿಗಳಿಗೆ ಚಾಕೊಲೇಟ್ ಹಂಚುವ ಬಗ್ಗೆ ಹೇಳಿರುವುದು ಕಂಡುಬಂದಿದೆ.
ಘಟನೆಯ ಬಳಿಕ, ವಿದ್ಯಾರ್ಥಿನಿ ಈ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿ ಪ್ರಾಂಶುಪಾಲರ ಬಳಿ ತೆರಳುವುದಾಗಿ ಹೇಳಿದ್ದಾಳೆ. ಈ ವೇಳೆ, “ನೀನೇ ಮೊದಲು ಪ್ರಪೋಸ್ ಮಾಡಿದ್ದೆ” ಎಂದು ಪ್ರಾಧ್ಯಾಪಕ ಹೇಳಿರುವುದು ಹಾಗೂ ಸಿಸಿಟಿವಿ ದೃಶ್ಯಗಳ ಬಗ್ಗೆ ಉಲ್ಲೇಖಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ. ವಿದ್ಯಾರ್ಥಿನಿ ಅದನ್ನು ತಳ್ಳಿಹಾಕಿ ಸಿಸಿಟಿವಿ ದೃಶ್ಯ ತೋರಿಸಲು ಒತ್ತಾಯಿಸಿದಾಗ, “ನಾಳೆ ಮಾತನಾಡೋಣ” ಎಂದು ಪ್ರಾಧ್ಯಾಪಕ ಹೇಳಿ ಸ್ಥಳದಿಂದ ಹೊರಟಿರುವುದು ಕೂಡ ದೃಶ್ಯಗಳಲ್ಲಿ ಕಂಡುಬಂದಿದೆ.
ಈ ಘಟನೆಗೆ ಆಕ್ರೋಶಗೊಂಡ ವಿದ್ಯಾರ್ಥಿನಿ ಹಾಗೂ ಸಹಪಾಠಿಗಳು ತರಗತಿಯಿಂದ ಹೊರಬಂದ ಬಳಿಕ ಪ್ರಾಧ್ಯಾಪಕನನ್ನು ಸುತ್ತುವರೆದು ಪ್ರಶ್ನಿಸಿದ್ದು, ಈ ವೇಳೆ ತುಸು ಗಲಾಟೆ ನಡೆದಿದೆ. ಅಲ್ಲದೆ ಪ್ರಾಧ್ಯಾಪಕನ ಮೇಲೆ ನಲ್ಲೆ ನಡೆದಿದ್ದು ಈ ವೇಳೆ ಪ್ರಾಧ್ಯಾಪಕ ಎಸ್ಕೇಪ್ ಆಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಈ ಘಟನೆ ಶಿಕ್ಷಣ ಸಂಸ್ಥೆಗಳಲ್ಲಿ ಶಿಸ್ತು, ಸುರಕ್ಷತೆ ಮತ್ತು ವಿದ್ಯಾರ್ಥಿಗಳ ಹಕ್ಕುಗಳ ಕುರಿತಾಗಿ ಗಂಭೀರ ಚರ್ಚೆಗೆ ಕಾರಣವಾಗಿದೆ. ತರಗತಿ ಕೊಠಡಿಯಂತಹ ಶೈಕ್ಷಣಿಕ ವಾತಾವರಣದಲ್ಲಿ ನಡೆದ ಈ ರೀತಿಯ ಘಟನೆ ಸಮಾಜದಲ್ಲಿ ಆತಂಕವನ್ನು ಹುಟ್ಟಿಸಿದ್ದು, ಕಾಲೇಜುಗಳಲ್ಲಿ ನೈತಿಕತೆ ಮತ್ತು ಭದ್ರತಾ ಮಾನದಂಡಗಳ ಬಗ್ಗೆ ಪ್ರಶ್ನೆಗಳು ಎದ್ದಿವೆ.
An incident at Siddhartha Medical College in T. Beguru village of Nelamangala taluk has sparked major unrest, leading to a tense situation on campus.
— Hate Detector 🔍 (@HateDetectors) March 26, 2026
The college is owned by Karnataka Home Minister Dr. G. Parameshwara, and the episode has triggered intense public debate.… https://t.co/80mXUGmMtU pic.twitter.com/VBqXiFVMN5
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm