ಬ್ರೇಕಿಂಗ್ ನ್ಯೂಸ್
26-03-26 09:21 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 26: ನೆಲಮಂಗಲ ತಾಲೂಕಿನ ಟಿ. ಬೇಗೂರು ಸಮೀಪದ ಮೆಡಿಕಲ್ ಕಾಲೇಜಿನಲ್ಲಿ ಪ್ರಾಧ್ಯಾಪಕರೊಬ್ಬರು ತರಗತಿ ಕೊಠಡಿಯಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆಗಿದ್ದು, ಅಸಭ್ಯ ವರ್ತನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಈ ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
ಮಾರ್ಚ್ 25ರಂದು ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ವಿಡಿಯೋದಲ್ಲಿ ಪ್ರಾಧ್ಯಾಪಕರು ವಿದ್ಯಾರ್ಥಿನಿಗೆ ಪ್ರಪೋಸ್ ಮಾಡುವ ಜೊತೆಗೆ ಬ್ಯಾಚ್ ವಿದ್ಯಾರ್ಥಿಗಳಿಗೆ ಚಾಕೊಲೇಟ್ ಹಂಚುವ ಬಗ್ಗೆ ಹೇಳಿರುವುದು ಕಂಡುಬಂದಿದೆ.
ಘಟನೆಯ ಬಳಿಕ, ವಿದ್ಯಾರ್ಥಿನಿ ಈ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿ ಪ್ರಾಂಶುಪಾಲರ ಬಳಿ ತೆರಳುವುದಾಗಿ ಹೇಳಿದ್ದಾಳೆ. ಈ ವೇಳೆ, “ನೀನೇ ಮೊದಲು ಪ್ರಪೋಸ್ ಮಾಡಿದ್ದೆ” ಎಂದು ಪ್ರಾಧ್ಯಾಪಕ ಹೇಳಿರುವುದು ಹಾಗೂ ಸಿಸಿಟಿವಿ ದೃಶ್ಯಗಳ ಬಗ್ಗೆ ಉಲ್ಲೇಖಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ. ವಿದ್ಯಾರ್ಥಿನಿ ಅದನ್ನು ತಳ್ಳಿಹಾಕಿ ಸಿಸಿಟಿವಿ ದೃಶ್ಯ ತೋರಿಸಲು ಒತ್ತಾಯಿಸಿದಾಗ, “ನಾಳೆ ಮಾತನಾಡೋಣ” ಎಂದು ಪ್ರಾಧ್ಯಾಪಕ ಹೇಳಿ ಸ್ಥಳದಿಂದ ಹೊರಟಿರುವುದು ಕೂಡ ದೃಶ್ಯಗಳಲ್ಲಿ ಕಂಡುಬಂದಿದೆ.
ಈ ಘಟನೆಗೆ ಆಕ್ರೋಶಗೊಂಡ ವಿದ್ಯಾರ್ಥಿನಿ ಹಾಗೂ ಸಹಪಾಠಿಗಳು ತರಗತಿಯಿಂದ ಹೊರಬಂದ ಬಳಿಕ ಪ್ರಾಧ್ಯಾಪಕನನ್ನು ಸುತ್ತುವರೆದು ಪ್ರಶ್ನಿಸಿದ್ದು, ಈ ವೇಳೆ ತುಸು ಗಲಾಟೆ ನಡೆದಿದೆ. ಅಲ್ಲದೆ ಪ್ರಾಧ್ಯಾಪಕನ ಮೇಲೆ ನಲ್ಲೆ ನಡೆದಿದ್ದು ಈ ವೇಳೆ ಪ್ರಾಧ್ಯಾಪಕ ಎಸ್ಕೇಪ್ ಆಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಈ ಘಟನೆ ಶಿಕ್ಷಣ ಸಂಸ್ಥೆಗಳಲ್ಲಿ ಶಿಸ್ತು, ಸುರಕ್ಷತೆ ಮತ್ತು ವಿದ್ಯಾರ್ಥಿಗಳ ಹಕ್ಕುಗಳ ಕುರಿತಾಗಿ ಗಂಭೀರ ಚರ್ಚೆಗೆ ಕಾರಣವಾಗಿದೆ. ತರಗತಿ ಕೊಠಡಿಯಂತಹ ಶೈಕ್ಷಣಿಕ ವಾತಾವರಣದಲ್ಲಿ ನಡೆದ ಈ ರೀತಿಯ ಘಟನೆ ಸಮಾಜದಲ್ಲಿ ಆತಂಕವನ್ನು ಹುಟ್ಟಿಸಿದ್ದು, ಕಾಲೇಜುಗಳಲ್ಲಿ ನೈತಿಕತೆ ಮತ್ತು ಭದ್ರತಾ ಮಾನದಂಡಗಳ ಬಗ್ಗೆ ಪ್ರಶ್ನೆಗಳು ಎದ್ದಿವೆ.
An incident at Siddhartha Medical College in T. Beguru village of Nelamangala taluk has sparked major unrest, leading to a tense situation on campus.
— Hate Detector 🔍 (@HateDetectors) March 26, 2026
The college is owned by Karnataka Home Minister Dr. G. Parameshwara, and the episode has triggered intense public debate.… https://t.co/80mXUGmMtU pic.twitter.com/VBqXiFVMN5
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 03:14 pm
HK News Staffer
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm