ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬಸ್ ; ಬಜರಂಗದಳ ಆಕ್ರೋಶ, ಬಸ್ ಪೊಲೀಸ್ ವಶಕ್ಕೆ !

26-03-26 10:27 pm       HK News Staffer   ಕರ್ನಾಟಕ

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹೆಸರನ್ನ ಖಾಸಗಿ ಬಸ್ ಗೆ ಇಟ್ಟಿರುವುದು ಚಿಕ್ಕಮಗಳೂರಿನಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. “Underworld Dawood – The Real Don” ಎಂಬ ಬರಹ ಹೊಂದಿದ್ದ ಈ ಬಸ್ ಸ್ಥಳೀಯರ ಗಮನ ಸೆಳೆದಿದ್ದು, ಪ್ರತಿಭಟನೆಗೆ ಕಾರಣವಾಯಿತು.

ಚಿಕ್ಕಮಗಳೂರು, ಮಾರ್ಚ್ 26: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹೆಸರನ್ನ ಖಾಸಗಿ ಬಸ್ ಗೆ ಇಟ್ಟಿರುವುದು ಚಿಕ್ಕಮಗಳೂರಿನಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. “Underworld Dawood – The Real Don” ಎಂಬ ಬರಹ ಹೊಂದಿದ್ದ ಈ ಬಸ್ ಸ್ಥಳೀಯರ ಗಮನ ಸೆಳೆದಿದ್ದು, ಪ್ರತಿಭಟನೆಗೆ ಕಾರಣವಾಯಿತು.

ತಮಿಳುನಾಡಿನಿಂದ ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆತಂದಿದ್ದ ಖಾಸಗಿ ಬಸ್ ಮೇಲೆ ಇಂತಹ ವಿವಾದಾತ್ಮಕ ಬರಹ ಕಂಡುಬಂದ ಹಿನ್ನೆಲೆಯಲ್ಲಿ, ಬಜರಂಗದಳ ಕಾರ್ಯಕರ್ತರು ಹಾಗೂ ಸ್ಥಳೀಯರು ಬಸ್‌ನ್ನು ತಡೆದು, ವಿಷಯವನ್ನು ಪೊಲೀಸರ ಗಮನಕ್ಕೆ ತಂದರು.

ಘಟನೆಯ ನಂತರ, ಬಸ್ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬಂದಿದ್ದು, ಪೊಲೀಸರು ತಕ್ಷಣವೇ ಬಸ್ ಅನ್ನು ವಶಕ್ಕೆ ಪಡೆದು ಬಸವನಹಳ್ಳಿ ಪೊಲೀಸ್ ಠಾಣೆಗೆ ಕರೆದೊಯ್ದು ಪರಿಶೀಲನೆ ನಡೆಸಿದರು.
ಈ ಘಟನೆ ನಗರದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ವಿವಾದಾತ್ಮಕ ಬರಹಗಳನ್ನು ಪ್ರದರ್ಶಿಸುವ ಬಗ್ಗೆ ಕಠಿಣ ನಿಯಂತ್ರಣ ಅಗತ್ಯವಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಪ್ರಕರಣ ಸಂಬಂಧ ಮುಂದಿನ ತನಿಖೆ ಮುಂದುವರಿದಿದೆ.