ಬ್ರೇಕಿಂಗ್ ನ್ಯೂಸ್
27-03-26 03:52 pm HK News Staffer ಕರ್ನಾಟಕ
ಕಲಬುರಗಿ, ಮಾರ್ಚ್ 27: ನಗರದಲ್ಲಿ ಹಾಡುಹಗಲೇ ನಡೆದ ಭೀಕರ ಕೊಲೆ ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. ಅಫಜಲಪುರ ತಾಲ್ಲೂಕಿನ ಬಳುರಗಿ ಬಳಿ ಪತಿಯೊಬ್ಬ ತನ್ನ ಪತ್ನಿಯನ್ನೇ ಅತ್ಯಂತ ಕ್ರೂರವಾಗಿ ದಾರಿ ಮಧ್ಯೆ ಕೊಲೆ ಮಾಡಿ ಬಳಿಕ ಶವದ ಮೇಲೆ ಕಾರು ಹತ್ತಿಸಿ ಭೀಕರತೆ ಮೆರೆದಿದ್ದಾನೆ.
ಪತ್ನಿಯನ್ನು ಕಾರಿನಿಂದ ಹೊರಗೆಳೆದ ಪತಿ ನಡುರಸ್ತೆಯಲ್ಲೇ ಆಕೆಯನ್ನು ಭಾರೀವಾಗಿ ಹತ್ಯೆ ಮಾಡಿದ್ದಾನೆ. ರಸ್ತೆಯಲ್ಲಿ ಹೋಗುವವರೆಲ್ಲಾ ಮೂಕಪ್ರೇಕ್ಷಕರಾಗಿ ನೋಡುತ್ತಿದ್ದರೂ ಆತ ಯಾವುದೇ ಅಳುಕಿಲ್ಲದೆ ತನ್ನ ಕ್ರೂರ ಅಟ್ಟಹಾಸ ಮೆರೆದಿದ್ದಾನೆ. ನೋಡುಗರು ಮೊಬೈಲ್ ನಲ್ಲಿ ಈ ಕೃತ್ಯ ಚಿತ್ರೀಕರಿಸಿಕೊಂಡಿದ್ದಾರೆಯೇ ಹೊರತು ಯಾರೊಬ್ಬರೂ ಮಹಿಳೆಯ ರಕ್ಷಣೆಗೆ ಧಾವಿಸಿಲ್ಲ ಎಂಬುದು ವಿಪರ್ಯಾಸ.
ಕುಡುಗೋಲಿನಿಂದ ಕತ್ತು ಕತ್ತರಿಸಿದ ಭೂಪ!
ಪತ್ನಿಯನ್ನು ಕಾರಿನಿಂದ ಹೊರಗೆಳೆದ ಪತಿ ಆಕೆಯ ತಲೆಗೂದಲು ಹಿಡಿದು ಕುಡುಗೋಲಿನಿಂದ ಕತ್ತನ್ನು ಕತ್ತರಿಸಿದ್ದಾನೆ. ನೆಲಕ್ಕೆ ಬಿದ್ದು ಆತನಿಂದ ಬಿಡಿಸಿಕೊಳ್ಳಲು ಯತ್ನಿಸಿದ ಮಹಿಳೆ ನೋಡ ನೋಡುತ್ತಲೇ ಪ್ರಾಣಿ ಬಿಟ್ಟಿದ್ದಾಳೆ. ಈ ಭೀಕರ ಹತ್ಯೆ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಬಳುರಗಿ ಗ್ರಾಮದ ಬಳಿ ಮಾರ್ಚ್ 26ರ ಮಧ್ಯಾಹ್ನ ಸುಮಾರು 11:30 ರ ಸುಮಾರಿಗೆ ನಡೆದಿದೆ.
ಪತ್ನಿಯನ್ನು ಕೊಂದ ಬಳಿಕವೂ ಸುಮ್ಮನಾಗದ ಕಿರಾತಕ ರಕ್ತದ ಮಡುವಿನಲ್ಲಿ ಬಿದ್ದಿದ್ದ ಪತ್ನಿಯ ಮೇಲೆ ತನ್ನ ಕಾರು ಹತ್ತಿಸಿ ವಿಕೃತಿ ಮೆರೆದಿದ್ದಾನೆ.
ಕಾರಲ್ಲಿ ಸಂಬಂಧಿಕರಿದ್ದರೂ ಸುಮ್ಮನೆ ಕುಳಿತಿದ್ದರು!
ಮಹಾರಾಷ್ಟ್ರದ ಬಾರಾಮತಿಯಿಂದ ಕಲಬುರಗಿಯ ಗಾಣಗಾಪೂರಕ್ಕೆ ಬಂದಿದ್ದರು. ಪತ್ನಿಯನ್ನು ದತ್ತನ ದರ್ಶನಕ್ಕೆ ಹೋಗೋಣ ಅಂತ ಕರೆತಂದಿದ್ದನಂತೆ, ಆದರೆ ಅಫಜಲಪುರ ಹೊರವಲಯದ ಬಳುರಗಿ ಬಳಿ ಏಕಾಏಕಿ ಕಾರು ನಿಲ್ಲಿಸಿದ ಪತಿ ಅಕ್ಷಯ್ ಜಾಧವ್, ಪತ್ನಿಯ ಕೂದಲನ್ನು ಹಿಡಿದು ನೆಲಕ್ಕೆ ಬೀಳಿಸಿದ್ದಾನೆ. ಬಳಿಕ ತನ್ನ ಬಳಿಯಿದ್ದ ಕುಡುಗೋಲಿನಿಂದ ಆಕೆಯ ಕತ್ತನ್ನು ಸೀಳಿ ಭಾರೀವಾಗಿ ಹತ್ಯೆ ಮಾಡಿದ್ದಾನೆ.
ಘಟನೆ ನಡೆದ ವೇಳೆ ಕಾರಿನಲ್ಲಿ ಅಕ್ಷಯ್ ತಂದೆ ತಾಯಿ ಸಂಬಂಧಿಕರು ಸೇರಿ ಐವರು ಇದ್ದರು, ಯಾರು ಕೂಡ ಮೃತ ಶೈಲಾ ಸಹಾಯಕ್ಕೆ ಧಾವಿಸಿಲ್ಲ ಅನ್ನೋದು ವಿಪರ್ಯಾಸ. ಘಟನೆ ನಡೆದ ಸ್ಥಳಕ್ಕೆ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೂಡಲೇ ಕಾರ್ಯಾಚರಣೆ ನಡೆಸಿ ಕೊಲೆ ಆರೋಪಿ ಅಕ್ಷಯ್ ಜಾಧವನನ್ನು ಅಫಜಲಪುರ ಪೊಲೀಸರ ವಶಕ್ಕೆ ತೆಗೆದುಕೊಂಡಿದ್ದಾರೆ.
ಸದ್ಯ ಕೊಲೆಗೆ ನಿಖರವಾದ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿದ ಪತಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಆದರೆ ಹಾಡುಹಗಲೇ ಹತ್ಯೆ ನಡೆಯುತ್ತಿದ್ದರೂ ಸ್ಥಳೀಯರು ಮಾತ್ರ ಕಂಡು ಕಾಣದಂತೆ ವರ್ತಿಸಿದ್ದು ನಿಜಕ್ಕೂ ವಿಪರ್ಯಾಸ.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm