ಬ್ರೇಕಿಂಗ್ ನ್ಯೂಸ್
27-03-26 03:52 pm HK News Staffer ಕರ್ನಾಟಕ
ಕಲಬುರಗಿ, ಮಾರ್ಚ್ 27: ನಗರದಲ್ಲಿ ಹಾಡುಹಗಲೇ ನಡೆದ ಭೀಕರ ಕೊಲೆ ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. ಅಫಜಲಪುರ ತಾಲ್ಲೂಕಿನ ಬಳುರಗಿ ಬಳಿ ಪತಿಯೊಬ್ಬ ತನ್ನ ಪತ್ನಿಯನ್ನೇ ಅತ್ಯಂತ ಕ್ರೂರವಾಗಿ ದಾರಿ ಮಧ್ಯೆ ಕೊಲೆ ಮಾಡಿ ಬಳಿಕ ಶವದ ಮೇಲೆ ಕಾರು ಹತ್ತಿಸಿ ಭೀಕರತೆ ಮೆರೆದಿದ್ದಾನೆ.
ಪತ್ನಿಯನ್ನು ಕಾರಿನಿಂದ ಹೊರಗೆಳೆದ ಪತಿ ನಡುರಸ್ತೆಯಲ್ಲೇ ಆಕೆಯನ್ನು ಭಾರೀವಾಗಿ ಹತ್ಯೆ ಮಾಡಿದ್ದಾನೆ. ರಸ್ತೆಯಲ್ಲಿ ಹೋಗುವವರೆಲ್ಲಾ ಮೂಕಪ್ರೇಕ್ಷಕರಾಗಿ ನೋಡುತ್ತಿದ್ದರೂ ಆತ ಯಾವುದೇ ಅಳುಕಿಲ್ಲದೆ ತನ್ನ ಕ್ರೂರ ಅಟ್ಟಹಾಸ ಮೆರೆದಿದ್ದಾನೆ. ನೋಡುಗರು ಮೊಬೈಲ್ ನಲ್ಲಿ ಈ ಕೃತ್ಯ ಚಿತ್ರೀಕರಿಸಿಕೊಂಡಿದ್ದಾರೆಯೇ ಹೊರತು ಯಾರೊಬ್ಬರೂ ಮಹಿಳೆಯ ರಕ್ಷಣೆಗೆ ಧಾವಿಸಿಲ್ಲ ಎಂಬುದು ವಿಪರ್ಯಾಸ.
ಕುಡುಗೋಲಿನಿಂದ ಕತ್ತು ಕತ್ತರಿಸಿದ ಭೂಪ!
ಪತ್ನಿಯನ್ನು ಕಾರಿನಿಂದ ಹೊರಗೆಳೆದ ಪತಿ ಆಕೆಯ ತಲೆಗೂದಲು ಹಿಡಿದು ಕುಡುಗೋಲಿನಿಂದ ಕತ್ತನ್ನು ಕತ್ತರಿಸಿದ್ದಾನೆ. ನೆಲಕ್ಕೆ ಬಿದ್ದು ಆತನಿಂದ ಬಿಡಿಸಿಕೊಳ್ಳಲು ಯತ್ನಿಸಿದ ಮಹಿಳೆ ನೋಡ ನೋಡುತ್ತಲೇ ಪ್ರಾಣಿ ಬಿಟ್ಟಿದ್ದಾಳೆ. ಈ ಭೀಕರ ಹತ್ಯೆ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಬಳುರಗಿ ಗ್ರಾಮದ ಬಳಿ ಮಾರ್ಚ್ 26ರ ಮಧ್ಯಾಹ್ನ ಸುಮಾರು 11:30 ರ ಸುಮಾರಿಗೆ ನಡೆದಿದೆ.
ಪತ್ನಿಯನ್ನು ಕೊಂದ ಬಳಿಕವೂ ಸುಮ್ಮನಾಗದ ಕಿರಾತಕ ರಕ್ತದ ಮಡುವಿನಲ್ಲಿ ಬಿದ್ದಿದ್ದ ಪತ್ನಿಯ ಮೇಲೆ ತನ್ನ ಕಾರು ಹತ್ತಿಸಿ ವಿಕೃತಿ ಮೆರೆದಿದ್ದಾನೆ.
ಕಾರಲ್ಲಿ ಸಂಬಂಧಿಕರಿದ್ದರೂ ಸುಮ್ಮನೆ ಕುಳಿತಿದ್ದರು!
ಮಹಾರಾಷ್ಟ್ರದ ಬಾರಾಮತಿಯಿಂದ ಕಲಬುರಗಿಯ ಗಾಣಗಾಪೂರಕ್ಕೆ ಬಂದಿದ್ದರು. ಪತ್ನಿಯನ್ನು ದತ್ತನ ದರ್ಶನಕ್ಕೆ ಹೋಗೋಣ ಅಂತ ಕರೆತಂದಿದ್ದನಂತೆ, ಆದರೆ ಅಫಜಲಪುರ ಹೊರವಲಯದ ಬಳುರಗಿ ಬಳಿ ಏಕಾಏಕಿ ಕಾರು ನಿಲ್ಲಿಸಿದ ಪತಿ ಅಕ್ಷಯ್ ಜಾಧವ್, ಪತ್ನಿಯ ಕೂದಲನ್ನು ಹಿಡಿದು ನೆಲಕ್ಕೆ ಬೀಳಿಸಿದ್ದಾನೆ. ಬಳಿಕ ತನ್ನ ಬಳಿಯಿದ್ದ ಕುಡುಗೋಲಿನಿಂದ ಆಕೆಯ ಕತ್ತನ್ನು ಸೀಳಿ ಭಾರೀವಾಗಿ ಹತ್ಯೆ ಮಾಡಿದ್ದಾನೆ.
ಘಟನೆ ನಡೆದ ವೇಳೆ ಕಾರಿನಲ್ಲಿ ಅಕ್ಷಯ್ ತಂದೆ ತಾಯಿ ಸಂಬಂಧಿಕರು ಸೇರಿ ಐವರು ಇದ್ದರು, ಯಾರು ಕೂಡ ಮೃತ ಶೈಲಾ ಸಹಾಯಕ್ಕೆ ಧಾವಿಸಿಲ್ಲ ಅನ್ನೋದು ವಿಪರ್ಯಾಸ. ಘಟನೆ ನಡೆದ ಸ್ಥಳಕ್ಕೆ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೂಡಲೇ ಕಾರ್ಯಾಚರಣೆ ನಡೆಸಿ ಕೊಲೆ ಆರೋಪಿ ಅಕ್ಷಯ್ ಜಾಧವನನ್ನು ಅಫಜಲಪುರ ಪೊಲೀಸರ ವಶಕ್ಕೆ ತೆಗೆದುಕೊಂಡಿದ್ದಾರೆ.
ಸದ್ಯ ಕೊಲೆಗೆ ನಿಖರವಾದ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿದ ಪತಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಆದರೆ ಹಾಡುಹಗಲೇ ಹತ್ಯೆ ನಡೆಯುತ್ತಿದ್ದರೂ ಸ್ಥಳೀಯರು ಮಾತ್ರ ಕಂಡು ಕಾಣದಂತೆ ವರ್ತಿಸಿದ್ದು ನಿಜಕ್ಕೂ ವಿಪರ್ಯಾಸ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 03:14 pm
HK News Staffer
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm