ಬ್ರೇಕಿಂಗ್ ನ್ಯೂಸ್
27-03-26 04:04 pm HK News Staffer ಕರ್ನಾಟಕ
ವಿಜಯಪುರ, ಮಾರ್ಚ್ 27: ಹತ್ತಿರದ ದಾರಿಯೆಂದು ಚಾಲಕನೊಬ್ಬ ಟ್ರ್ಯಾಕ್ಟರ್'ನ್ನು ತುಂಗಭದ್ರಾ ನದಿಗೆ ನುಗ್ಗಿಸಿದ್ದು, ಪರಿಣಾಮ ಅದರಲ್ಲಿದ್ದ 10ಕ್ಕೂ ಹೆಚ್ಚು ಮಂದಿ ನದಿ ಮಧ್ಯೆ ಸಿಲುಕಿ ಜೀವ ಭಯದಲ್ಲಿ ಪರದಾಡಿದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ವಿಜಯಪುರ ಮೂಲದ ಭಕ್ತರಿದ್ದ ವಾಹನ ತುಂಗಭದ್ರಾ ನದಿ ದಾಟಿ ಸಿಂಗಟಾಳೂರು ವೀರಭದ್ರೇಶ್ವರ ಜಾತ್ರೆಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹಡಗಲಿ ತಾಲ್ಲೂಕಿನ ನವಲಿ ಗ್ರಾಮದ ಭಕ್ತರು ಹೀಗೆ ಹೋದರೆ ತಡವಾಗುತ್ತೆ ಎಂದು ಶಾರ್ಟ್ಕಟ್ ಆಯ್ಕೆ ಮಾಡಿಕೊಂಡಿದ್ದಾರೆ. ಚಾಲಕನೂ ನೀರಿನ ಮಟ್ಟ ಕಡಿಮೆ ಇದೆ ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ, ಎಲ್ಲರೂ ಟ್ರ್ಯಾಕ್ಟರ್ ಮೂಲಕ ನದಿಯನ್ನು ದಾಟಲು ಮುಂದಾಗಿದ್ದರು.

ಆದರೆ, ಟ್ರ್ಯಾಕ್ಟರ್ ನದಿ ಮಧ್ಯ ತಲುಪಿದಾಗ ಚಾಲಕ ಗಾಬರಿಗೊಂಡಿದ್ದಾನೆ. ಇದೇ ವೇಳೆ ನೀರಿನ ಮಟ್ಟ ಹೆಚ್ಚಾಗಿ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಮುಳುಗಲು ಆರಂಭಿಸಿತ್ತು. ನೀರು ಕುತ್ತಿಗೆಯ ಮಟ್ಟಕ್ಕೆ ತಲುಪುತ್ತಿದ್ದಂತೆ ಭಕ್ತರು ಭಯದಿಂದ ಸಹಾಯಕ್ಕಾಗಿ ಮೊರೆ ಇಟ್ಟಿದ್ದಾರೆ.
ಈ ಸಂದರ್ಭ ಸ್ಥಳದಲ್ಲಿದ್ದ ಮೀನುಗಾರರು ತಕ್ಷಣ ಧಾವಿಸಿ, ತಮ್ಮ ಜೀವದ ಹಂಗು ತೊರೆದು ಎಲ್ಲ ಭಕ್ತರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ನಂತರ ಕ್ರೇನ್ ಸಹಾಯದಿಂದ ಟ್ರ್ಯಾಕ್ಟರ್ ಅನ್ನು ನದಿಯಿಂದ ಹೊರಕ್ಕೆಳೆದಿದ್ದಾರೆ. ಘಟನೆ ಕುರಿತು ಟ್ರ್ಯಾಕ್ಟರ್ ನಲ್ಲಿದ್ದ ಭಕ್ತನೋರ್ವ ಪ್ರತಿಕ್ರಿಯಿಸಿ, ಚಾಲಕನ ಮಾತು ನಂಬಿ ನಾವು ಒಪ್ಪಿದ್ದೆವು. ನಮಗೆ ಅಪಾಯ ಇದೆ ಎಂದು ತಿಳಿದಿದ್ದರೂ ಹೋಗಿದ್ದೆವು. ದೇವರ ಕೃಪೆಯಿಂದ ಬದುಕಿದ್ದೇವೆ. ನಮ್ಮನ್ನು ರಕ್ಷಿಸಿದ ಮೀನುಗಾರರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm