ಬ್ರೇಕಿಂಗ್ ನ್ಯೂಸ್
27-03-26 04:04 pm HK News Staffer ಕರ್ನಾಟಕ
ವಿಜಯಪುರ, ಮಾರ್ಚ್ 27: ಹತ್ತಿರದ ದಾರಿಯೆಂದು ಚಾಲಕನೊಬ್ಬ ಟ್ರ್ಯಾಕ್ಟರ್'ನ್ನು ತುಂಗಭದ್ರಾ ನದಿಗೆ ನುಗ್ಗಿಸಿದ್ದು, ಪರಿಣಾಮ ಅದರಲ್ಲಿದ್ದ 10ಕ್ಕೂ ಹೆಚ್ಚು ಮಂದಿ ನದಿ ಮಧ್ಯೆ ಸಿಲುಕಿ ಜೀವ ಭಯದಲ್ಲಿ ಪರದಾಡಿದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ವಿಜಯಪುರ ಮೂಲದ ಭಕ್ತರಿದ್ದ ವಾಹನ ತುಂಗಭದ್ರಾ ನದಿ ದಾಟಿ ಸಿಂಗಟಾಳೂರು ವೀರಭದ್ರೇಶ್ವರ ಜಾತ್ರೆಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹಡಗಲಿ ತಾಲ್ಲೂಕಿನ ನವಲಿ ಗ್ರಾಮದ ಭಕ್ತರು ಹೀಗೆ ಹೋದರೆ ತಡವಾಗುತ್ತೆ ಎಂದು ಶಾರ್ಟ್ಕಟ್ ಆಯ್ಕೆ ಮಾಡಿಕೊಂಡಿದ್ದಾರೆ. ಚಾಲಕನೂ ನೀರಿನ ಮಟ್ಟ ಕಡಿಮೆ ಇದೆ ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ, ಎಲ್ಲರೂ ಟ್ರ್ಯಾಕ್ಟರ್ ಮೂಲಕ ನದಿಯನ್ನು ದಾಟಲು ಮುಂದಾಗಿದ್ದರು.

ಆದರೆ, ಟ್ರ್ಯಾಕ್ಟರ್ ನದಿ ಮಧ್ಯ ತಲುಪಿದಾಗ ಚಾಲಕ ಗಾಬರಿಗೊಂಡಿದ್ದಾನೆ. ಇದೇ ವೇಳೆ ನೀರಿನ ಮಟ್ಟ ಹೆಚ್ಚಾಗಿ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಮುಳುಗಲು ಆರಂಭಿಸಿತ್ತು. ನೀರು ಕುತ್ತಿಗೆಯ ಮಟ್ಟಕ್ಕೆ ತಲುಪುತ್ತಿದ್ದಂತೆ ಭಕ್ತರು ಭಯದಿಂದ ಸಹಾಯಕ್ಕಾಗಿ ಮೊರೆ ಇಟ್ಟಿದ್ದಾರೆ.
ಈ ಸಂದರ್ಭ ಸ್ಥಳದಲ್ಲಿದ್ದ ಮೀನುಗಾರರು ತಕ್ಷಣ ಧಾವಿಸಿ, ತಮ್ಮ ಜೀವದ ಹಂಗು ತೊರೆದು ಎಲ್ಲ ಭಕ್ತರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ನಂತರ ಕ್ರೇನ್ ಸಹಾಯದಿಂದ ಟ್ರ್ಯಾಕ್ಟರ್ ಅನ್ನು ನದಿಯಿಂದ ಹೊರಕ್ಕೆಳೆದಿದ್ದಾರೆ. ಘಟನೆ ಕುರಿತು ಟ್ರ್ಯಾಕ್ಟರ್ ನಲ್ಲಿದ್ದ ಭಕ್ತನೋರ್ವ ಪ್ರತಿಕ್ರಿಯಿಸಿ, ಚಾಲಕನ ಮಾತು ನಂಬಿ ನಾವು ಒಪ್ಪಿದ್ದೆವು. ನಮಗೆ ಅಪಾಯ ಇದೆ ಎಂದು ತಿಳಿದಿದ್ದರೂ ಹೋಗಿದ್ದೆವು. ದೇವರ ಕೃಪೆಯಿಂದ ಬದುಕಿದ್ದೇವೆ. ನಮ್ಮನ್ನು ರಕ್ಷಿಸಿದ ಮೀನುಗಾರರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am