ಬ್ರೇಕಿಂಗ್ ನ್ಯೂಸ್
27-03-26 04:04 pm HK News Staffer ಕರ್ನಾಟಕ
ವಿಜಯಪುರ, ಮಾರ್ಚ್ 27: ಹತ್ತಿರದ ದಾರಿಯೆಂದು ಚಾಲಕನೊಬ್ಬ ಟ್ರ್ಯಾಕ್ಟರ್'ನ್ನು ತುಂಗಭದ್ರಾ ನದಿಗೆ ನುಗ್ಗಿಸಿದ್ದು, ಪರಿಣಾಮ ಅದರಲ್ಲಿದ್ದ 10ಕ್ಕೂ ಹೆಚ್ಚು ಮಂದಿ ನದಿ ಮಧ್ಯೆ ಸಿಲುಕಿ ಜೀವ ಭಯದಲ್ಲಿ ಪರದಾಡಿದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ವಿಜಯಪುರ ಮೂಲದ ಭಕ್ತರಿದ್ದ ವಾಹನ ತುಂಗಭದ್ರಾ ನದಿ ದಾಟಿ ಸಿಂಗಟಾಳೂರು ವೀರಭದ್ರೇಶ್ವರ ಜಾತ್ರೆಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹಡಗಲಿ ತಾಲ್ಲೂಕಿನ ನವಲಿ ಗ್ರಾಮದ ಭಕ್ತರು ಹೀಗೆ ಹೋದರೆ ತಡವಾಗುತ್ತೆ ಎಂದು ಶಾರ್ಟ್ಕಟ್ ಆಯ್ಕೆ ಮಾಡಿಕೊಂಡಿದ್ದಾರೆ. ಚಾಲಕನೂ ನೀರಿನ ಮಟ್ಟ ಕಡಿಮೆ ಇದೆ ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ, ಎಲ್ಲರೂ ಟ್ರ್ಯಾಕ್ಟರ್ ಮೂಲಕ ನದಿಯನ್ನು ದಾಟಲು ಮುಂದಾಗಿದ್ದರು.

ಆದರೆ, ಟ್ರ್ಯಾಕ್ಟರ್ ನದಿ ಮಧ್ಯ ತಲುಪಿದಾಗ ಚಾಲಕ ಗಾಬರಿಗೊಂಡಿದ್ದಾನೆ. ಇದೇ ವೇಳೆ ನೀರಿನ ಮಟ್ಟ ಹೆಚ್ಚಾಗಿ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಮುಳುಗಲು ಆರಂಭಿಸಿತ್ತು. ನೀರು ಕುತ್ತಿಗೆಯ ಮಟ್ಟಕ್ಕೆ ತಲುಪುತ್ತಿದ್ದಂತೆ ಭಕ್ತರು ಭಯದಿಂದ ಸಹಾಯಕ್ಕಾಗಿ ಮೊರೆ ಇಟ್ಟಿದ್ದಾರೆ.
ಈ ಸಂದರ್ಭ ಸ್ಥಳದಲ್ಲಿದ್ದ ಮೀನುಗಾರರು ತಕ್ಷಣ ಧಾವಿಸಿ, ತಮ್ಮ ಜೀವದ ಹಂಗು ತೊರೆದು ಎಲ್ಲ ಭಕ್ತರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ನಂತರ ಕ್ರೇನ್ ಸಹಾಯದಿಂದ ಟ್ರ್ಯಾಕ್ಟರ್ ಅನ್ನು ನದಿಯಿಂದ ಹೊರಕ್ಕೆಳೆದಿದ್ದಾರೆ. ಘಟನೆ ಕುರಿತು ಟ್ರ್ಯಾಕ್ಟರ್ ನಲ್ಲಿದ್ದ ಭಕ್ತನೋರ್ವ ಪ್ರತಿಕ್ರಿಯಿಸಿ, ಚಾಲಕನ ಮಾತು ನಂಬಿ ನಾವು ಒಪ್ಪಿದ್ದೆವು. ನಮಗೆ ಅಪಾಯ ಇದೆ ಎಂದು ತಿಳಿದಿದ್ದರೂ ಹೋಗಿದ್ದೆವು. ದೇವರ ಕೃಪೆಯಿಂದ ಬದುಕಿದ್ದೇವೆ. ನಮ್ಮನ್ನು ರಕ್ಷಿಸಿದ ಮೀನುಗಾರರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 03:14 pm
HK News Staffer
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm