ಬ್ರೇಕಿಂಗ್ ನ್ಯೂಸ್
27-03-26 04:04 pm HK News Staffer ಕರ್ನಾಟಕ
ವಿಜಯಪುರ, ಮಾರ್ಚ್ 27: ಹತ್ತಿರದ ದಾರಿಯೆಂದು ಚಾಲಕನೊಬ್ಬ ಟ್ರ್ಯಾಕ್ಟರ್'ನ್ನು ತುಂಗಭದ್ರಾ ನದಿಗೆ ನುಗ್ಗಿಸಿದ್ದು, ಪರಿಣಾಮ ಅದರಲ್ಲಿದ್ದ 10ಕ್ಕೂ ಹೆಚ್ಚು ಮಂದಿ ನದಿ ಮಧ್ಯೆ ಸಿಲುಕಿ ಜೀವ ಭಯದಲ್ಲಿ ಪರದಾಡಿದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ವಿಜಯಪುರ ಮೂಲದ ಭಕ್ತರಿದ್ದ ವಾಹನ ತುಂಗಭದ್ರಾ ನದಿ ದಾಟಿ ಸಿಂಗಟಾಳೂರು ವೀರಭದ್ರೇಶ್ವರ ಜಾತ್ರೆಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹಡಗಲಿ ತಾಲ್ಲೂಕಿನ ನವಲಿ ಗ್ರಾಮದ ಭಕ್ತರು ಹೀಗೆ ಹೋದರೆ ತಡವಾಗುತ್ತೆ ಎಂದು ಶಾರ್ಟ್ಕಟ್ ಆಯ್ಕೆ ಮಾಡಿಕೊಂಡಿದ್ದಾರೆ. ಚಾಲಕನೂ ನೀರಿನ ಮಟ್ಟ ಕಡಿಮೆ ಇದೆ ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ, ಎಲ್ಲರೂ ಟ್ರ್ಯಾಕ್ಟರ್ ಮೂಲಕ ನದಿಯನ್ನು ದಾಟಲು ಮುಂದಾಗಿದ್ದರು.

ಆದರೆ, ಟ್ರ್ಯಾಕ್ಟರ್ ನದಿ ಮಧ್ಯ ತಲುಪಿದಾಗ ಚಾಲಕ ಗಾಬರಿಗೊಂಡಿದ್ದಾನೆ. ಇದೇ ವೇಳೆ ನೀರಿನ ಮಟ್ಟ ಹೆಚ್ಚಾಗಿ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಮುಳುಗಲು ಆರಂಭಿಸಿತ್ತು. ನೀರು ಕುತ್ತಿಗೆಯ ಮಟ್ಟಕ್ಕೆ ತಲುಪುತ್ತಿದ್ದಂತೆ ಭಕ್ತರು ಭಯದಿಂದ ಸಹಾಯಕ್ಕಾಗಿ ಮೊರೆ ಇಟ್ಟಿದ್ದಾರೆ.
ಈ ಸಂದರ್ಭ ಸ್ಥಳದಲ್ಲಿದ್ದ ಮೀನುಗಾರರು ತಕ್ಷಣ ಧಾವಿಸಿ, ತಮ್ಮ ಜೀವದ ಹಂಗು ತೊರೆದು ಎಲ್ಲ ಭಕ್ತರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ನಂತರ ಕ್ರೇನ್ ಸಹಾಯದಿಂದ ಟ್ರ್ಯಾಕ್ಟರ್ ಅನ್ನು ನದಿಯಿಂದ ಹೊರಕ್ಕೆಳೆದಿದ್ದಾರೆ. ಘಟನೆ ಕುರಿತು ಟ್ರ್ಯಾಕ್ಟರ್ ನಲ್ಲಿದ್ದ ಭಕ್ತನೋರ್ವ ಪ್ರತಿಕ್ರಿಯಿಸಿ, ಚಾಲಕನ ಮಾತು ನಂಬಿ ನಾವು ಒಪ್ಪಿದ್ದೆವು. ನಮಗೆ ಅಪಾಯ ಇದೆ ಎಂದು ತಿಳಿದಿದ್ದರೂ ಹೋಗಿದ್ದೆವು. ದೇವರ ಕೃಪೆಯಿಂದ ಬದುಕಿದ್ದೇವೆ. ನಮ್ಮನ್ನು ರಕ್ಷಿಸಿದ ಮೀನುಗಾರರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am