ಬ್ರೇಕಿಂಗ್ ನ್ಯೂಸ್
27-03-26 04:49 pm HK News Staffer ಕರ್ನಾಟಕ
ನವದೆಹಲಿ, ಮಾರ್ಚ್ 27: ಅಮೆರಿಕ-ಇರಾನ್ ಯುದ್ಧದ ಪರಿಣಾಮ ಜಾಗತಿಕವಾಗಿ ತೈಲ ಬೆಲೆಯಲ್ಲಿ ಏರಿಕೆಯಾಗಿರುವುದು, ಪೂರೈಕೆಯಲ್ಲಿ ಅಡಚಣೆ ಉಂಟಾಗಿರುವುದು, ಇದರ ಬೆನ್ನಲ್ಲೇ ಅನೇಕ ದೇಶಗಳಲ್ಲಿ ಅಸ್ಥಿರತೆ ಕಾಣಿಸಿಕೊಂಡಿರುವುದು ಹಲವು ರೀತಿಯ ಚರ್ಚೆಗಳನ್ನು ಹುಟ್ಟುಹಾಕಿದೆ. ಇದೇ ವೇಳೆ, ಪ್ರಧಾನಿ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಕೋವಿಡ್ ರೀತಿಯ ಸ್ಥಿತಿ ಬರಬಹುದು ಎಂದಿರುವುದು ಆತಂಕಕ್ಕೂ ಕಾರಣವಾಗಿದೆ. ಇದೇ ವೇಳೆ, ಶ್ರೀಲಂಕಾ, ಪಾಕಿಸ್ತಾನ ಸೇರಿದಂತೆ ಹಲವು ರಾಷ್ಟ್ರಗಳು ತಮ್ಮಲ್ಲಿ ಇಂಧನ ಬಳಕೆಯ ಮೇಲೂ ಕಡಿವಾಣ ಹಾಕಿದೆ.
ಪಾಕಿಸ್ತಾನದಲ್ಲಿ ಸರ್ಕಾರಿ ಇಲಾಖೆಗಳಿಗೆ ಇಂಧನ ಹಂಚಿಕೆಯನ್ನು ಶೇಕಡಾ 50 ರಷ್ಟು ಕಡಿತಗೊಳಿಸಲಾಗಿದೆ. ವಿಯೆಟ್ನಾಂ ಮತ್ತು ಫಿಲಿಪೈನ್ಸ್ನಲ್ಲಿ, ಉದ್ಯೋಗಿಗಳನ್ನು ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗಿದೆ. ನ್ಯೂಜಿಲೆಂಡ್ ಸರ್ಕಾರವು 1970 ರ ದಶಕದಲ್ಲಿ ಇದ್ದಂತಹ ‘ಕಾರು ರಹಿತ ದಿನಗಳು’ ಯೋಜನೆಯನ್ನು ಮತ್ತೆ ತರಲು ಪರಿಗಣಿಸುತ್ತಿದೆ. ಶ್ರೀಲಂಕಾದಲ್ಲಿ ರಾಷ್ಟ್ರೀಯ ಇಂಧನ ಪಾಸ್ ವ್ಯವಸ್ಥೆಯನ್ನು ಮತ್ತೆ ಕಡ್ಡಾಯ ಮಾಡಿದೆ.
ಜಾಗತಿಕವಾಗಿ ಪರಿಸ್ಥಿತಿ ಹದಗೆಡುತ್ತಿದ್ದಂತೆ, ಭಾರತದಲ್ಲಿ ಲಾಕ್ಡೌನ್ ವಿಧಿಸಬಹುದು ಎಂಬ ವದಂತಿಗಳು ಹರಡತೊಡಗಿವೆ. ‘ಲಾಕ್ಡೌನ್ 2026’ ಎನ್ನುವುದು ಭಾರತದಲ್ಲಿ ಟ್ರೆಂಡಿಂಗ್ ಆಗಿದೆ. ಇದೇ ವೇಳೆ, ಇಂಧನ ದಾಸ್ತಾನು, ವಿತರಣೆ ಇತ್ಯಾದಿಗಳ ಕುರಿತು ಪ್ರಧಾನಿ ಮೋದಿ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿದ್ದು ಮತ್ತೆ ಲಾಕ್ಡೌನ್ ಎನ್ನುವ ಚರ್ಚೆಗಳು ಹುಟ್ಟಿಕೊಂಡಿವೆ.
ಯುದ್ಧದ ಪರಿಣಾಮ ಜಗತ್ತಿನ ಹಲವು ದೇಶಗಳಲ್ಲಿ ಪೆಟ್ರೋಲ್, ಡೀಸಲ್ ಮತ್ತು ಅನಿಲದ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಹೀಗಾಗಿ ಅನೇಕ ದೇಶಗಳು ಇಂಧನ ಬಳಕೆಯ ಮೇಲೆ ನಿರ್ಬಂಧಗಳನ್ನು ವಿಧಿಸುತ್ತಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಲಾಕ್ ಡೌನ್ ಎಂಬುದು ಟ್ರೆಂಡಿಂಗ್ ಆಗಿದೆ. ಆದರೆ ಕೇಂದ್ರ ಸರ್ಕಾರ ಈ ವದಂತಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದೆ.
ಈ ಬಗ್ಗೆ ವಿವರಣೆ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ‘ಮತ್ತೊಂದು ಲಾಕ್ಡೌನ್ ಇರುತ್ತದೆ ಎಂಬ ಕೆಲವು ನಾಯಕರ ಹೇಳಿಕೆಗಳು ಆಧಾರರಹಿತ. ರಾಜಕೀಯ ಕಾರಣಗಳಿಗಾಗಿ ಲಾಕ್ಡೌನ್ ಬಗ್ಗೆ ಮಾತನಾಡುವುದು ಆತಂಕಕಾರಿ. ಕೊರೊನಾ ಅವಧಿಯಲ್ಲಿ ಇದ್ದಂತೆ ಭಾರತದಲ್ಲಿ ಮತ್ತೊಂದು ಲಾಕ್ಡೌನ್ ಇರುವುದಿಲ್ಲ. ಮತ್ತೊಂದು ಲಾಕ್ಡೌನ್ನ ಹೇಳಿಕೆ ಕೇವಲ ವದಂತಿ. ಜನರು ವದಂತಿಗಳನ್ನು ನಂಬಬಾರದು. ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ ಎಂದು ಹೇಳಿದ್ದಾರೆ.
ಇದಕ್ಕು ಮುನ್ನ, ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ, ಭಾರತದಲ್ಲಿ ಲಾಕ್ಡೌನ್ ಹೇರುವ ಯಾವುದೇ ಯೋಜನೆಯನ್ನು ಸರ್ಕಾರ ಪರಿಗಣಿಸುತ್ತಿಲ್ಲ ಮತ್ತು ಜನರು ಭಯಭೀತರಾಗುವ ಅಗತ್ಯವೂ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ರಾಷ್ಟ್ರವ್ಯಾಪಿ ಲಾಕ್ಡೌನ್ಗೆ ಸಂಬಂಧಿಸಿದ ಎಲ್ಲಾ ವದಂತಿಗಳು ಸಂಪೂರ್ಣ ಆಧಾರ ರಹಿತವಾಗಿವೆ ಎಂದು ಅವರು ಸ್ಪಷ್ಟಪಡಿಸಿದರು.
ಸರ್ಕಾರವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಪ್ರಸ್ತುತ ರಾಷ್ಟ್ರವ್ಯಾಪಿ ಲಾಕ್ಡೌನ್ ಹೇರುವ ಯಾವುದೇ ಯೋಜನೆಗಳಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ತಮ್ಮ ಎಕ್ಸ್ ಪೋಸ್ಟ್ನಲ್ಲಿ ಹರ್ದೀಪ್ ಸಿಂಗ್ ಪುರಿ, ಇಂತಹ ವದಂತಿಗಳನ್ನು ಹರಡುವುದು ಬೇಜವಾಬ್ದಾರಿ ಮತ್ತು ಸಾರ್ವಜನಿಕರಲ್ಲಿ ಅನಗತ್ಯ ಭಯವನ್ನು ಉಂಟುಮಾಡುತ್ತದೆ ಎಂದು ಹೇಳಿದ್ದಾರೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಸರ್ಕಾರ ಸಂಪೂರ್ಣ ಸಿದ್ಧವಾಗಿದೆ ಎಂದು ಅವರು ಹೇಳಿದರು.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm