ಬ್ರೇಕಿಂಗ್ ನ್ಯೂಸ್
28-03-26 02:54 pm HK News Staffer ಕರ್ನಾಟಕ
ವಿಜಯಪುರ, ಮಾರ್ಚ್ 28: ಜಿಲ್ಲೆಯ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ತಾಯಿ ತನ್ನ ಮೂವರು ಅಪ್ರಾಪ್ತ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ರಾಜಶ್ರೀ ಶಂಕ್ರಪ್ಪ ಹಳ್ಳೂರ (28) ಎಂಬ ಮಹಿಳೆ ತನ್ನ ಮಕ್ಕಳಾದ ಅನುಶ್ರೀ (6), ತನು (3) ಮತ್ತು ಕೇವಲ 1 ವರ್ಷದ ಸಂತೋಷ್ ಅವರನ್ನು ಬಾವಿಗೆ ತಳ್ಳಿ ಬಳಿಕ ತಾನೂ ಸಹ ಅದೇ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಬಳಿಕ ಇಡೀ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಘಟನೆ ನಡೆದ ವೇಳೆ ರಾಜಶ್ರೀ ಅವರ ಪತಿ ಶಂಕ್ರಪ್ಪ ಖಾಸಗಿ ಬಸ್ ಚಾಲಕರಾಗಿ ಕೆಲಸಕ್ಕೆ ತೆರಳಿದ್ದರಿಂದ ಊರಲ್ಲಿ ಇರಲಿಲ್ಲ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಕುಟುಂಬ ಸದಸ್ಯರ ಸಮ್ಮುಖದಲ್ಲಿ ಬಾವಿಯಿಂದ ನಾಲ್ವರ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಇಂಡಿ ತಾಲೂಕು ಆಸ್ಪತ್ರೆಯಲ್ಲಿ ಪೋಸ್ಟ್ ಮಾರ್ಟಂ ನಡೆಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಪತಿ ಶಂಕ್ರಪ್ಪ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನ್ನ ಮೂವರು ಮಕ್ಕಳ ಸಾವಿಗೆ ಪತ್ನಿ ರಾಜಶ್ರೀಯೇ ನೇರ ಕಾರಣ ಎಂದು ಆರೋಪಿಸಿದ್ದಾರೆ.
ಘಟನೆ ಇದೀಗ ಹಲವು ತಿರುವುಗಳನ್ನು ಪಡೆದುಕೊಂಡಿದ್ದು, ಸಾವಿನ ನಿಖರ ಕಾರಣ ಇನ್ನೂ ನಿಗೂಢವಾಗಿದೆ. ಗ್ರಾಮಸ್ಥರ ಪ್ರಕಾರ ಕುಟುಂಬದಲ್ಲಿ ಆಸ್ತಿ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ಕಲಹ ನಡೆಯುತ್ತಿತ್ತು ಎನ್ನಲಾಗಿದ್ದು, ಇದೇ ಮನಸ್ತಾಪದಿಂದ ರಾಜಶ್ರೀ ತೀವ್ರ ನಿರ್ಧಾರ ಕೈಗೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm