ಬ್ರೇಕಿಂಗ್ ನ್ಯೂಸ್
28-03-26 08:39 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 28: ಐಪಿಎಲ್ 19ನೇ ಆವೃತ್ತಿಯ ಉದ್ಘಾಟನಾ ಪಂದ್ಯಕ್ಕೂ ಮುನ್ನ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳು ತಮ್ಮ ತಂಡದ ಮೇಲೆ ಇರುವ ಅಭಿಮಾನವನ್ನು ವಿಶಿಷ್ಟ ರೀತಿಯಲ್ಲಿ ವ್ಯಕ್ತಪಡಿಸಿದ್ದಾರೆ. ಗಿರಿನಗರದ ರಾಷ್ಟ್ರೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು ಅಭಿಮಾನಿಗಳು ಸಾಮೂಹಿಕವಾಗಿ ರಕ್ತದಾನ ಮಾಡಿ ತಂಡದ ಗೆಲುವಿಗಾಗಿ ಶುಭ ಹಾರೈಸಿದ್ದಾರೆ.
ಪ್ರತಿ ವರ್ಷ ಆರ್ಸಿಬಿ ಪಂದ್ಯಕ್ಕೂ ಮುನ್ನ ರಕ್ತದಾನ ಮಾಡುವ ಪದ್ಧತಿಯನ್ನು ಮುಂದುವರಿಸಿರುವ ಅಭಿಮಾನಿಗಳು, “ಈ ಬಾರಿ ಉದ್ಘಾಟನಾ ಪಂದ್ಯದಲ್ಲಿ ಜಯ ಸಾಧಿಸುವ ವಿಶ್ವಾಸವಿದೆ. ಜೊತೆಗೆ ಈ ಸೀಸನ್ನಲ್ಲಿ ಕಪ್ ನಮ್ದೇ” ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಆರ್ಸಿಬಿ ಗಾಡ್ ವಿರಾಟ್ ಕೋಹ್ಲಿಯನ್ನು ಮೈದಾನದಲ್ಲಿ ನೋಡುವುದೇ ನಮಗೆ ದೊಡ್ಡ ಸಂತೋಷ” ಎಂದು ಅಭಿಮಾನಿಗಳು ಉತ್ಸಾಹದಿಂದ ತಿಳಿಸಿದ್ದಾರೆ.
ರಕ್ತದಾನ ನಂತರ ಅಭಿಮಾನಿಗಳು ತಂಡದ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿದ್ದು, ಕಳೆದ ಬಾರಿ ನಡೆದ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದ ಅಭಿಮಾನಿಗಳನ್ನು ಸ್ಮರಿಸಿ ಗೌರವ ಸಲ್ಲಿಸಿದರು. “ಆ ಅಭಿಮಾನಿಗಳಿಗೆ ನ್ಯಾಯ ಸಿಗುವಂತೆ ತಂಡ ಆಡಬೇಕು” ಎಂಬ ಭಾವನಾತ್ಮಕ ಮನವಿ ಕೂಡ ಕೇಳಿಬಂದಿದೆ.
ಇದೇ ವೇಳೆ, 18 ವರ್ಷಗಳಿಂದ ಕ್ರಿಕೆಟ್ ಅಭಿಮಾನಿಗಳಿಗೆ ಮನರಂಜನೆ ನೀಡುತ್ತಿರುವ ಐಪಿಎಲ್ ಟೂರ್ನಿಯ 19ನೇ ಆವೃತ್ತಿಗೆ ಇಂದು ಚಾಲನೆ ಸಿಗಲಿದೆ. ಕರ್ನಾಟಕ ಕ್ರಿಕೆಟ್ನ ಹೃದಯಭೂಮಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಬೆಂಗಳೂರಿನಲ್ಲಿ 18 ವರ್ಷಗಳ ಬಳಿಕ ಈ ಗೌರವ ಸಿಕ್ಕಿದೆ. ಮೊದಲ ಪಂದ್ಯದಲ್ಲಿ ಆರ್ಸಿಬಿ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಕಾಲ್ತುಳಿತ ದುರಂತದ ಬಳಿಕ ಇದೇ ಮೊದಲ ಬಾರಿಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟೂರ್ನಿ ನಡೆಯುತ್ತಿರುವ ಹಿನ್ನೆಲೆ, ಭದ್ರತೆಗೆ ವಿಶೇಷ ಒತ್ತು ನೀಡಲಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಸುಮಾರು 2000 ಪೊಲೀಸರನ್ನು ನಿಯೋಜಿಸಲಾಗಿದ್ದು, ಬೆಂಗಳೂರು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm