ಬ್ರೇಕಿಂಗ್ ನ್ಯೂಸ್
28-03-26 08:39 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 28: ಐಪಿಎಲ್ 19ನೇ ಆವೃತ್ತಿಯ ಉದ್ಘಾಟನಾ ಪಂದ್ಯಕ್ಕೂ ಮುನ್ನ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳು ತಮ್ಮ ತಂಡದ ಮೇಲೆ ಇರುವ ಅಭಿಮಾನವನ್ನು ವಿಶಿಷ್ಟ ರೀತಿಯಲ್ಲಿ ವ್ಯಕ್ತಪಡಿಸಿದ್ದಾರೆ. ಗಿರಿನಗರದ ರಾಷ್ಟ್ರೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು ಅಭಿಮಾನಿಗಳು ಸಾಮೂಹಿಕವಾಗಿ ರಕ್ತದಾನ ಮಾಡಿ ತಂಡದ ಗೆಲುವಿಗಾಗಿ ಶುಭ ಹಾರೈಸಿದ್ದಾರೆ.
ಪ್ರತಿ ವರ್ಷ ಆರ್ಸಿಬಿ ಪಂದ್ಯಕ್ಕೂ ಮುನ್ನ ರಕ್ತದಾನ ಮಾಡುವ ಪದ್ಧತಿಯನ್ನು ಮುಂದುವರಿಸಿರುವ ಅಭಿಮಾನಿಗಳು, “ಈ ಬಾರಿ ಉದ್ಘಾಟನಾ ಪಂದ್ಯದಲ್ಲಿ ಜಯ ಸಾಧಿಸುವ ವಿಶ್ವಾಸವಿದೆ. ಜೊತೆಗೆ ಈ ಸೀಸನ್ನಲ್ಲಿ ಕಪ್ ನಮ್ದೇ” ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಆರ್ಸಿಬಿ ಗಾಡ್ ವಿರಾಟ್ ಕೋಹ್ಲಿಯನ್ನು ಮೈದಾನದಲ್ಲಿ ನೋಡುವುದೇ ನಮಗೆ ದೊಡ್ಡ ಸಂತೋಷ” ಎಂದು ಅಭಿಮಾನಿಗಳು ಉತ್ಸಾಹದಿಂದ ತಿಳಿಸಿದ್ದಾರೆ.
ರಕ್ತದಾನ ನಂತರ ಅಭಿಮಾನಿಗಳು ತಂಡದ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿದ್ದು, ಕಳೆದ ಬಾರಿ ನಡೆದ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದ ಅಭಿಮಾನಿಗಳನ್ನು ಸ್ಮರಿಸಿ ಗೌರವ ಸಲ್ಲಿಸಿದರು. “ಆ ಅಭಿಮಾನಿಗಳಿಗೆ ನ್ಯಾಯ ಸಿಗುವಂತೆ ತಂಡ ಆಡಬೇಕು” ಎಂಬ ಭಾವನಾತ್ಮಕ ಮನವಿ ಕೂಡ ಕೇಳಿಬಂದಿದೆ.
ಇದೇ ವೇಳೆ, 18 ವರ್ಷಗಳಿಂದ ಕ್ರಿಕೆಟ್ ಅಭಿಮಾನಿಗಳಿಗೆ ಮನರಂಜನೆ ನೀಡುತ್ತಿರುವ ಐಪಿಎಲ್ ಟೂರ್ನಿಯ 19ನೇ ಆವೃತ್ತಿಗೆ ಇಂದು ಚಾಲನೆ ಸಿಗಲಿದೆ. ಕರ್ನಾಟಕ ಕ್ರಿಕೆಟ್ನ ಹೃದಯಭೂಮಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಬೆಂಗಳೂರಿನಲ್ಲಿ 18 ವರ್ಷಗಳ ಬಳಿಕ ಈ ಗೌರವ ಸಿಕ್ಕಿದೆ. ಮೊದಲ ಪಂದ್ಯದಲ್ಲಿ ಆರ್ಸಿಬಿ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಕಾಲ್ತುಳಿತ ದುರಂತದ ಬಳಿಕ ಇದೇ ಮೊದಲ ಬಾರಿಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟೂರ್ನಿ ನಡೆಯುತ್ತಿರುವ ಹಿನ್ನೆಲೆ, ಭದ್ರತೆಗೆ ವಿಶೇಷ ಒತ್ತು ನೀಡಲಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಸುಮಾರು 2000 ಪೊಲೀಸರನ್ನು ನಿಯೋಜಿಸಲಾಗಿದ್ದು, ಬೆಂಗಳೂರು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 03:14 pm
HK News Staffer
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm