ಬ್ರೇಕಿಂಗ್ ನ್ಯೂಸ್
29-03-26 10:19 am HK News Staffer ಕರ್ನಾಟಕ
ಚೆನ್ನೈ, ಮಾರ್ಚ್ 28: ತಮಿಳುನಾಡಿನಲ್ಲಿ ಬಿಜೆಪಿಗೆ ಹಂಚಿಕೆಯಾದ ಕ್ಷೇತ್ರಗಳ ವಿಚಾರದಲ್ಲಿ ಬಿಜೆಪಿ ಸ್ಟಾರ್ ಕ್ಯಾಂಪೇನರ್, ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ತೀವ್ರ ಅಸಮಾಧಾನಗೊಂಡಿದ್ದು ಈ ಸಲ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 234 ಕ್ಷೇತ್ರಗಳ ಪೈಕಿ ಎಐಎಡಿಎಂಕೆ 169 ಮತ್ತು ಬಿಜೆಪಿಗೆ 27 ಸ್ಥಾನಗಳಲ್ಲಿ ಸೀಟು ಹಂಚಿಕೆಯಾಗಿದೆ.
ಅಣ್ಣಾಮಲೈ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ಕೊಯಮತ್ತೂರಿನಲ್ಲಿ ಪಕ್ಷಕ್ಕೆ ಕೇವಲ ಒಂದು ಸ್ಥಾನವನ್ನು ನೀಡಲಾಗಿದೆ. ತಂಜಾವೂರು ಮತ್ತು ಗಂಧರ್ವಕೊಟ್ಟೈ ಪರಿಶಿಷ್ಟ ಜಾತಿಗಳಿಗೆ ಮೀಸಲಾಗಿದ್ದು ಇದನ್ನು ಬಿಜೆಪಿಗೆ ನೀಡಲಾಗಿದೆ. ಡಿಎಂಕೆ ಮತ್ತು ಅದರ ಮಿತ್ರ ಪಕ್ಷ ಸಿಪಿಎಂ 2021 ರಲ್ಲಿ ಈ ಕ್ಷೇತ್ರಗಳನ್ನು ಗೆದ್ದಿದ್ದವು. ಗಂಧರ್ವಕೊಟ್ಟೈನಲ್ಲಿ ಪರಿಚಿತ ಮುಖವನ್ನು ಕಣಕ್ಕಿಳಿಸುವುದು ಬಿಜೆಪಿಗೆ ಕಷ್ಟವಾಗಿದ್ದರೂ, ಎಐಎಡಿಎಂಕೆ ತಂಜಾವೂರನ್ನು ಸ್ವಾಧೀನಪಡಿಸಲು ಆಸಕ್ತಿ ವ್ಯಕ್ತಪಡಿಸಿದೆ.
ಸೀಟು ಹಂಚಿಕೆಯಲ್ಲಿ ಲೋಪ ಆಗಿರುವ ಬಗ್ಗೆ ಅಣ್ಣಾಮಲೈ ಬಿಜೆಪಿ ಕೇಂದ್ರ ನಾಯಕರಿಗೆ ಪತ್ರ ಬರೆದಿದ್ದಾರೆ. ಅಲ್ಲದೆ, ಕಿನ್ನಾತ್ತುಕಡವು ನಂತಹ ಕ್ಷೇತ್ರಗಳು ಬಿಜೆಪಿ ಪ್ರಾಬಲ್ಯ ಹೊಂದಿದ್ದರೂ, ಅದನ್ನು ಎಐಎಡಿಎಂಕೆ ಪಕ್ಷಕ್ಕೆ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊಯಮತ್ತೂರು ನಗರ ಉತ್ತರ ಕ್ಷೇತ್ರ ಸಂಸತ್ ವ್ಯಾಪ್ತಿಯ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುತ್ತದೆ. ಅಣ್ಣಾಮಲೈ ಸಿಂಗನಲ್ಲೂರು ಅಥವಾ ಕಾವುಂಡಂಪಾಳಯಂನಿಂದ ಸ್ಪರ್ಧಿಸಲು ಆಕಾಂಕ್ಷೆ ಹೊಂದಿದ್ದರೂ, ಇವೆರಡನ್ನೂ ಬಿಜೆಪಿ ಪಕ್ಷಕ್ಕೆ ಹಂಚಿಕೆ ಮಾಡಲಾಗಿಲ್ಲ. ಸೀಟು ಹಂಚಿಕೆಯಲ್ಲಿ ಏಕಪಕ್ಷೀಯವಾಗಿ ನಡೆದುಕೊಂಡಿದ್ದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಕಿನ್ನಾತ್ತುಕಡವು ಕ್ಷೇತ್ರದಲ್ಲಿ ಪ್ರತಿಭಟನೆಯನ್ನೂ ನಡೆಸಿದ್ದಾರೆ.
ಇದೇ ವೇಳೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಅಧ್ಯಕ್ಷತೆಯಲ್ಲಿ ಗುರುವಾರ ಚೆನ್ನೈನ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಭೆ ನಡೆದರೂ, ಅಣ್ಣಾಮಲೈ ದೂರ ಉಳಿದಿದ್ದರು. ಚುನಾವಣೆಗೆ ಸಂಬಂಧಿಸಿದ ಇತರ ವಿಷಯಗಳ ಕುರಿತು ಚರ್ಚಿಸಲು ಸಭೆ ಕರೆಯಲಾಗಿತ್ತು, ಆದರೆ ಅಣ್ಣಾಮಲೈ ಸಭೆಯಲ್ಲಿ ಭಾಗವಹಿಸಲಿಲ್ಲ. ಬಿಜೆಪಿ ಒಂದೆರಡು ದಿನಗಳಲ್ಲಿ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಆದರೆ ಸುದ್ದಿಗಾರರೊಂದಿಗೆ ಮಾತನಾಡಿದ ವನತಿ, ಅಣ್ಣಾಮಲೈ ಚುನಾವಣೆಯಲ್ಲಿ ಸ್ಪರ್ಧಿಸಿ ವಿಧಾನಸಭೆ ಪ್ರವೇಶಿಸುತ್ತಾರೆ ಎಂದು ಹೇಳಿದ್ದಾರೆ.
ಅಣ್ಣಾಮಲೈ 2021 ರ ವಿಧಾನಸಭಾ ಚುನಾವಣೆಯಲ್ಲಿ ಅರವಕುರಿಚಿಯಿಂದ ಮತ್ತು 2024 ರ ಲೋಕಸಭಾ ಚುನಾವಣೆಯಲ್ಲಿ ಕೊಯಮತ್ತೂರು ಸಂಸತ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm