ಬ್ರೇಕಿಂಗ್ ನ್ಯೂಸ್
29-03-26 10:19 am HK News Staffer ಕರ್ನಾಟಕ
ಚೆನ್ನೈ, ಮಾರ್ಚ್ 28: ತಮಿಳುನಾಡಿನಲ್ಲಿ ಬಿಜೆಪಿಗೆ ಹಂಚಿಕೆಯಾದ ಕ್ಷೇತ್ರಗಳ ವಿಚಾರದಲ್ಲಿ ಬಿಜೆಪಿ ಸ್ಟಾರ್ ಕ್ಯಾಂಪೇನರ್, ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ತೀವ್ರ ಅಸಮಾಧಾನಗೊಂಡಿದ್ದು ಈ ಸಲ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 234 ಕ್ಷೇತ್ರಗಳ ಪೈಕಿ ಎಐಎಡಿಎಂಕೆ 169 ಮತ್ತು ಬಿಜೆಪಿಗೆ 27 ಸ್ಥಾನಗಳಲ್ಲಿ ಸೀಟು ಹಂಚಿಕೆಯಾಗಿದೆ.
ಅಣ್ಣಾಮಲೈ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ಕೊಯಮತ್ತೂರಿನಲ್ಲಿ ಪಕ್ಷಕ್ಕೆ ಕೇವಲ ಒಂದು ಸ್ಥಾನವನ್ನು ನೀಡಲಾಗಿದೆ. ತಂಜಾವೂರು ಮತ್ತು ಗಂಧರ್ವಕೊಟ್ಟೈ ಪರಿಶಿಷ್ಟ ಜಾತಿಗಳಿಗೆ ಮೀಸಲಾಗಿದ್ದು ಇದನ್ನು ಬಿಜೆಪಿಗೆ ನೀಡಲಾಗಿದೆ. ಡಿಎಂಕೆ ಮತ್ತು ಅದರ ಮಿತ್ರ ಪಕ್ಷ ಸಿಪಿಎಂ 2021 ರಲ್ಲಿ ಈ ಕ್ಷೇತ್ರಗಳನ್ನು ಗೆದ್ದಿದ್ದವು. ಗಂಧರ್ವಕೊಟ್ಟೈನಲ್ಲಿ ಪರಿಚಿತ ಮುಖವನ್ನು ಕಣಕ್ಕಿಳಿಸುವುದು ಬಿಜೆಪಿಗೆ ಕಷ್ಟವಾಗಿದ್ದರೂ, ಎಐಎಡಿಎಂಕೆ ತಂಜಾವೂರನ್ನು ಸ್ವಾಧೀನಪಡಿಸಲು ಆಸಕ್ತಿ ವ್ಯಕ್ತಪಡಿಸಿದೆ.
ಸೀಟು ಹಂಚಿಕೆಯಲ್ಲಿ ಲೋಪ ಆಗಿರುವ ಬಗ್ಗೆ ಅಣ್ಣಾಮಲೈ ಬಿಜೆಪಿ ಕೇಂದ್ರ ನಾಯಕರಿಗೆ ಪತ್ರ ಬರೆದಿದ್ದಾರೆ. ಅಲ್ಲದೆ, ಕಿನ್ನಾತ್ತುಕಡವು ನಂತಹ ಕ್ಷೇತ್ರಗಳು ಬಿಜೆಪಿ ಪ್ರಾಬಲ್ಯ ಹೊಂದಿದ್ದರೂ, ಅದನ್ನು ಎಐಎಡಿಎಂಕೆ ಪಕ್ಷಕ್ಕೆ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊಯಮತ್ತೂರು ನಗರ ಉತ್ತರ ಕ್ಷೇತ್ರ ಸಂಸತ್ ವ್ಯಾಪ್ತಿಯ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುತ್ತದೆ. ಅಣ್ಣಾಮಲೈ ಸಿಂಗನಲ್ಲೂರು ಅಥವಾ ಕಾವುಂಡಂಪಾಳಯಂನಿಂದ ಸ್ಪರ್ಧಿಸಲು ಆಕಾಂಕ್ಷೆ ಹೊಂದಿದ್ದರೂ, ಇವೆರಡನ್ನೂ ಬಿಜೆಪಿ ಪಕ್ಷಕ್ಕೆ ಹಂಚಿಕೆ ಮಾಡಲಾಗಿಲ್ಲ. ಸೀಟು ಹಂಚಿಕೆಯಲ್ಲಿ ಏಕಪಕ್ಷೀಯವಾಗಿ ನಡೆದುಕೊಂಡಿದ್ದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಕಿನ್ನಾತ್ತುಕಡವು ಕ್ಷೇತ್ರದಲ್ಲಿ ಪ್ರತಿಭಟನೆಯನ್ನೂ ನಡೆಸಿದ್ದಾರೆ.
ಇದೇ ವೇಳೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಅಧ್ಯಕ್ಷತೆಯಲ್ಲಿ ಗುರುವಾರ ಚೆನ್ನೈನ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಭೆ ನಡೆದರೂ, ಅಣ್ಣಾಮಲೈ ದೂರ ಉಳಿದಿದ್ದರು. ಚುನಾವಣೆಗೆ ಸಂಬಂಧಿಸಿದ ಇತರ ವಿಷಯಗಳ ಕುರಿತು ಚರ್ಚಿಸಲು ಸಭೆ ಕರೆಯಲಾಗಿತ್ತು, ಆದರೆ ಅಣ್ಣಾಮಲೈ ಸಭೆಯಲ್ಲಿ ಭಾಗವಹಿಸಲಿಲ್ಲ. ಬಿಜೆಪಿ ಒಂದೆರಡು ದಿನಗಳಲ್ಲಿ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಆದರೆ ಸುದ್ದಿಗಾರರೊಂದಿಗೆ ಮಾತನಾಡಿದ ವನತಿ, ಅಣ್ಣಾಮಲೈ ಚುನಾವಣೆಯಲ್ಲಿ ಸ್ಪರ್ಧಿಸಿ ವಿಧಾನಸಭೆ ಪ್ರವೇಶಿಸುತ್ತಾರೆ ಎಂದು ಹೇಳಿದ್ದಾರೆ.
ಅಣ್ಣಾಮಲೈ 2021 ರ ವಿಧಾನಸಭಾ ಚುನಾವಣೆಯಲ್ಲಿ ಅರವಕುರಿಚಿಯಿಂದ ಮತ್ತು 2024 ರ ಲೋಕಸಭಾ ಚುನಾವಣೆಯಲ್ಲಿ ಕೊಯಮತ್ತೂರು ಸಂಸತ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm