ಬ್ರೇಕಿಂಗ್ ನ್ಯೂಸ್
31-03-26 10:13 am HK News Staffer ಕರ್ನಾಟಕ
ತಿರುವನಂತಪುರಂ, ಮಾರ್ಚ್ 31: ಕೇರಳದಲ್ಲಿ ಯುಡಿಎಫ್ ಅಧಿಕಾರಕ್ಕೇರಿದರೆ ಕರ್ನಾಟಕ, ತೆಲಂಗಾಣ ರೀತಿಯಲ್ಲೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಇಂದು ಒಂದು ಹೆಜ್ಜೆ ಮುಂದೆ ಹೋಗಿದ್ದು ಕೇರಳದಲ್ಲಿ ಮಹಿಳೆಯೊಬ್ಬರು ಸಿಎಂ ಆಗುವುದನ್ನು ಬಯಸುವುದಾಗಿ ಹೇಳಿದ್ದಾರೆ.
ಪುತ್ತುಪಲ್ಲಿ ಎಂಬಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಐದು ಗ್ಯಾರಂಟಿ ಸ್ಕೀಮ್ ಜಾರಿಗೆ ತರಲಾಗುವುದು. ಮಹಿಳೆಯರಿಗೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣ, ಕಾಲೇಜು ತೆರಳುವ ವಿದ್ಯಾರ್ಥಿನಿಯರಿಗೆ ತಿಂಗಳಿಗೆ ಒಂದು ಸಾವಿರ ಗೌರವ ಧನ ನೀಡಲಾಗುವುದು ಎಂದಿದ್ದಾರೆ.
ತಮ್ಮನ್ನು ನೋಡಿ ಮಹಿಳೆಯರು ಕೈ ಬೀಸುತ್ತಿರುವುದನ್ನು ಉತ್ತೇಜಿತರಾದ ರಾಹುಲ್, ಮಹಿಳೆಯರು ರಾಜಕೀಯದಲ್ಲಿ ಇನ್ನಷ್ಟು ಸಕ್ರಿಯರಾಗಬೇಕು, ಈ ಬಾರಿ ಮಹಿಳೆ ಸಿಎಂ ಆಗುವುದನ್ನು ನೋಡಲು ಬಯಸುತ್ತೇನೆ, ಅವರ ಆಶೋತ್ತರಗಳನ್ನು ಅವರೇ ಈಡೇರಿಸಿಕೊಳ್ಳಬೇಕು, ಅದಕ್ಕಾಗಿ ಅವರೇ ಅಧಿಕಾರಕ್ಕೆ ಏರಬೇಕು ಎಂದು ಹೇಳಿದ್ದಾರೆ.
ಕೇರಳದಲ್ಲಿ ಯಾರು ಕೂಡ ಮಹಿಳೆಯರು ಸಿಎಂ ಆಗಿಲ್ಲ, ಕೆ.ಆರ್ ಗೌರಿ ಅಮ್ಮನಂಥ ಪ್ರಭಾವಿ ಮಹಿಳೆಯರು ಇಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ 92 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು 9 ಕಡೆ ಮಹಿಳೆಯರಿಗೆ ಮಣೆ ಹಾಕಿದೆ. ಮುಸ್ಲಿಂ ಲೀಗ್ ಎರಡು ಕಡೆ ಮಹಿಳೆಯರಿಗೆ ಸ್ಥಾನ ನೀಡಿದೆ. ಸಭೆ ಮುಗಿದ ಬಳಿಕ ರಾಹುಲ್ ಗಾಂಧಿ ಸೈಕಲ್ ತುಳಿಯುತ್ತಾ ರ್ಯಾಲಿ ನಡೆಸಿದರು. ಇತ್ತೀಚೆಗೆ ಮಾರ್ಚ್ 8ರಂದು ಕೇರಳದಲ್ಲಿ ಪ್ರಚಾರ ಸಭೆ ನಡೆಸಿದ್ದ ರಾಹುಲ್ ಗಾಂಧಿ, ಯುಡಿಎಫ್ ಅಧಿಕಾರಕ್ಕೆ ಬಂದಲ್ಲಿ ಐದು ಗ್ಯಾರಂಟಿ ಯೋಜನೆ ಜಾರಿಗೆ ತರುವ ಭರವಸೆ ನೀಡಿದ್ದರು. ಮಹಿಳೆಯರಿಗೆ ಸಾರಿಗೆ ಉಚಿತ ಪ್ರಯಾಣ, ಕಾಲೇಜು ಕಲಿಯುವ ಹೆಣ್ಮಕ್ಕಳಿಗೆ ತಿಂಗಳಿಗೆ ಒಂದು ಸಾವಿರ, ಬಡ ಕುಟುಂಬಗಳಿಗೆ ಮೂರು ಸಾವಿರ ಪಿಂಚಣಿ, 25 ಲಕ್ಷ ಹೆಲ್ತ್ ಇನ್ಶೂರೆನ್ಸ್, ವ್ಯವಹಾರ ಉದ್ದೇಶಕ್ಕೆ 5 ಲಕ್ಷ ವರೆಗೆ ಉಚಿತ ಸಾಲ ಸೇರಿ ಐದು ಘೋಷಣೆಗಳನ್ನು ನೀಡಿದ್ದರು.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 03:14 pm
HK News Staffer
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm