ಬ್ರೇಕಿಂಗ್ ನ್ಯೂಸ್
31-03-26 10:13 am HK News Staffer ಕರ್ನಾಟಕ
ತಿರುವನಂತಪುರಂ, ಮಾರ್ಚ್ 31: ಕೇರಳದಲ್ಲಿ ಯುಡಿಎಫ್ ಅಧಿಕಾರಕ್ಕೇರಿದರೆ ಕರ್ನಾಟಕ, ತೆಲಂಗಾಣ ರೀತಿಯಲ್ಲೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಇಂದು ಒಂದು ಹೆಜ್ಜೆ ಮುಂದೆ ಹೋಗಿದ್ದು ಕೇರಳದಲ್ಲಿ ಮಹಿಳೆಯೊಬ್ಬರು ಸಿಎಂ ಆಗುವುದನ್ನು ಬಯಸುವುದಾಗಿ ಹೇಳಿದ್ದಾರೆ.
ಪುತ್ತುಪಲ್ಲಿ ಎಂಬಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಐದು ಗ್ಯಾರಂಟಿ ಸ್ಕೀಮ್ ಜಾರಿಗೆ ತರಲಾಗುವುದು. ಮಹಿಳೆಯರಿಗೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣ, ಕಾಲೇಜು ತೆರಳುವ ವಿದ್ಯಾರ್ಥಿನಿಯರಿಗೆ ತಿಂಗಳಿಗೆ ಒಂದು ಸಾವಿರ ಗೌರವ ಧನ ನೀಡಲಾಗುವುದು ಎಂದಿದ್ದಾರೆ.
ತಮ್ಮನ್ನು ನೋಡಿ ಮಹಿಳೆಯರು ಕೈ ಬೀಸುತ್ತಿರುವುದನ್ನು ಉತ್ತೇಜಿತರಾದ ರಾಹುಲ್, ಮಹಿಳೆಯರು ರಾಜಕೀಯದಲ್ಲಿ ಇನ್ನಷ್ಟು ಸಕ್ರಿಯರಾಗಬೇಕು, ಈ ಬಾರಿ ಮಹಿಳೆ ಸಿಎಂ ಆಗುವುದನ್ನು ನೋಡಲು ಬಯಸುತ್ತೇನೆ, ಅವರ ಆಶೋತ್ತರಗಳನ್ನು ಅವರೇ ಈಡೇರಿಸಿಕೊಳ್ಳಬೇಕು, ಅದಕ್ಕಾಗಿ ಅವರೇ ಅಧಿಕಾರಕ್ಕೆ ಏರಬೇಕು ಎಂದು ಹೇಳಿದ್ದಾರೆ.
ಕೇರಳದಲ್ಲಿ ಯಾರು ಕೂಡ ಮಹಿಳೆಯರು ಸಿಎಂ ಆಗಿಲ್ಲ, ಕೆ.ಆರ್ ಗೌರಿ ಅಮ್ಮನಂಥ ಪ್ರಭಾವಿ ಮಹಿಳೆಯರು ಇಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ 92 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು 9 ಕಡೆ ಮಹಿಳೆಯರಿಗೆ ಮಣೆ ಹಾಕಿದೆ. ಮುಸ್ಲಿಂ ಲೀಗ್ ಎರಡು ಕಡೆ ಮಹಿಳೆಯರಿಗೆ ಸ್ಥಾನ ನೀಡಿದೆ. ಸಭೆ ಮುಗಿದ ಬಳಿಕ ರಾಹುಲ್ ಗಾಂಧಿ ಸೈಕಲ್ ತುಳಿಯುತ್ತಾ ರ್ಯಾಲಿ ನಡೆಸಿದರು. ಇತ್ತೀಚೆಗೆ ಮಾರ್ಚ್ 8ರಂದು ಕೇರಳದಲ್ಲಿ ಪ್ರಚಾರ ಸಭೆ ನಡೆಸಿದ್ದ ರಾಹುಲ್ ಗಾಂಧಿ, ಯುಡಿಎಫ್ ಅಧಿಕಾರಕ್ಕೆ ಬಂದಲ್ಲಿ ಐದು ಗ್ಯಾರಂಟಿ ಯೋಜನೆ ಜಾರಿಗೆ ತರುವ ಭರವಸೆ ನೀಡಿದ್ದರು. ಮಹಿಳೆಯರಿಗೆ ಸಾರಿಗೆ ಉಚಿತ ಪ್ರಯಾಣ, ಕಾಲೇಜು ಕಲಿಯುವ ಹೆಣ್ಮಕ್ಕಳಿಗೆ ತಿಂಗಳಿಗೆ ಒಂದು ಸಾವಿರ, ಬಡ ಕುಟುಂಬಗಳಿಗೆ ಮೂರು ಸಾವಿರ ಪಿಂಚಣಿ, 25 ಲಕ್ಷ ಹೆಲ್ತ್ ಇನ್ಶೂರೆನ್ಸ್, ವ್ಯವಹಾರ ಉದ್ದೇಶಕ್ಕೆ 5 ಲಕ್ಷ ವರೆಗೆ ಉಚಿತ ಸಾಲ ಸೇರಿ ಐದು ಘೋಷಣೆಗಳನ್ನು ನೀಡಿದ್ದರು.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm