ಬ್ರೇಕಿಂಗ್ ನ್ಯೂಸ್
31-03-26 10:13 am HK News Staffer ಕರ್ನಾಟಕ
ತಿರುವನಂತಪುರಂ, ಮಾರ್ಚ್ 31: ಕೇರಳದಲ್ಲಿ ಯುಡಿಎಫ್ ಅಧಿಕಾರಕ್ಕೇರಿದರೆ ಕರ್ನಾಟಕ, ತೆಲಂಗಾಣ ರೀತಿಯಲ್ಲೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಇಂದು ಒಂದು ಹೆಜ್ಜೆ ಮುಂದೆ ಹೋಗಿದ್ದು ಕೇರಳದಲ್ಲಿ ಮಹಿಳೆಯೊಬ್ಬರು ಸಿಎಂ ಆಗುವುದನ್ನು ಬಯಸುವುದಾಗಿ ಹೇಳಿದ್ದಾರೆ.
ಪುತ್ತುಪಲ್ಲಿ ಎಂಬಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಐದು ಗ್ಯಾರಂಟಿ ಸ್ಕೀಮ್ ಜಾರಿಗೆ ತರಲಾಗುವುದು. ಮಹಿಳೆಯರಿಗೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣ, ಕಾಲೇಜು ತೆರಳುವ ವಿದ್ಯಾರ್ಥಿನಿಯರಿಗೆ ತಿಂಗಳಿಗೆ ಒಂದು ಸಾವಿರ ಗೌರವ ಧನ ನೀಡಲಾಗುವುದು ಎಂದಿದ್ದಾರೆ.
ತಮ್ಮನ್ನು ನೋಡಿ ಮಹಿಳೆಯರು ಕೈ ಬೀಸುತ್ತಿರುವುದನ್ನು ಉತ್ತೇಜಿತರಾದ ರಾಹುಲ್, ಮಹಿಳೆಯರು ರಾಜಕೀಯದಲ್ಲಿ ಇನ್ನಷ್ಟು ಸಕ್ರಿಯರಾಗಬೇಕು, ಈ ಬಾರಿ ಮಹಿಳೆ ಸಿಎಂ ಆಗುವುದನ್ನು ನೋಡಲು ಬಯಸುತ್ತೇನೆ, ಅವರ ಆಶೋತ್ತರಗಳನ್ನು ಅವರೇ ಈಡೇರಿಸಿಕೊಳ್ಳಬೇಕು, ಅದಕ್ಕಾಗಿ ಅವರೇ ಅಧಿಕಾರಕ್ಕೆ ಏರಬೇಕು ಎಂದು ಹೇಳಿದ್ದಾರೆ.
ಕೇರಳದಲ್ಲಿ ಯಾರು ಕೂಡ ಮಹಿಳೆಯರು ಸಿಎಂ ಆಗಿಲ್ಲ, ಕೆ.ಆರ್ ಗೌರಿ ಅಮ್ಮನಂಥ ಪ್ರಭಾವಿ ಮಹಿಳೆಯರು ಇಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ 92 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು 9 ಕಡೆ ಮಹಿಳೆಯರಿಗೆ ಮಣೆ ಹಾಕಿದೆ. ಮುಸ್ಲಿಂ ಲೀಗ್ ಎರಡು ಕಡೆ ಮಹಿಳೆಯರಿಗೆ ಸ್ಥಾನ ನೀಡಿದೆ. ಸಭೆ ಮುಗಿದ ಬಳಿಕ ರಾಹುಲ್ ಗಾಂಧಿ ಸೈಕಲ್ ತುಳಿಯುತ್ತಾ ರ್ಯಾಲಿ ನಡೆಸಿದರು. ಇತ್ತೀಚೆಗೆ ಮಾರ್ಚ್ 8ರಂದು ಕೇರಳದಲ್ಲಿ ಪ್ರಚಾರ ಸಭೆ ನಡೆಸಿದ್ದ ರಾಹುಲ್ ಗಾಂಧಿ, ಯುಡಿಎಫ್ ಅಧಿಕಾರಕ್ಕೆ ಬಂದಲ್ಲಿ ಐದು ಗ್ಯಾರಂಟಿ ಯೋಜನೆ ಜಾರಿಗೆ ತರುವ ಭರವಸೆ ನೀಡಿದ್ದರು. ಮಹಿಳೆಯರಿಗೆ ಸಾರಿಗೆ ಉಚಿತ ಪ್ರಯಾಣ, ಕಾಲೇಜು ಕಲಿಯುವ ಹೆಣ್ಮಕ್ಕಳಿಗೆ ತಿಂಗಳಿಗೆ ಒಂದು ಸಾವಿರ, ಬಡ ಕುಟುಂಬಗಳಿಗೆ ಮೂರು ಸಾವಿರ ಪಿಂಚಣಿ, 25 ಲಕ್ಷ ಹೆಲ್ತ್ ಇನ್ಶೂರೆನ್ಸ್, ವ್ಯವಹಾರ ಉದ್ದೇಶಕ್ಕೆ 5 ಲಕ್ಷ ವರೆಗೆ ಉಚಿತ ಸಾಲ ಸೇರಿ ಐದು ಘೋಷಣೆಗಳನ್ನು ನೀಡಿದ್ದರು.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm