ಬ್ರೇಕಿಂಗ್ ನ್ಯೂಸ್
31-03-26 10:13 am HK News Staffer ಕರ್ನಾಟಕ
ತಿರುವನಂತಪುರಂ, ಮಾರ್ಚ್ 31: ಕೇರಳದಲ್ಲಿ ಯುಡಿಎಫ್ ಅಧಿಕಾರಕ್ಕೇರಿದರೆ ಕರ್ನಾಟಕ, ತೆಲಂಗಾಣ ರೀತಿಯಲ್ಲೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಇಂದು ಒಂದು ಹೆಜ್ಜೆ ಮುಂದೆ ಹೋಗಿದ್ದು ಕೇರಳದಲ್ಲಿ ಮಹಿಳೆಯೊಬ್ಬರು ಸಿಎಂ ಆಗುವುದನ್ನು ಬಯಸುವುದಾಗಿ ಹೇಳಿದ್ದಾರೆ.
ಪುತ್ತುಪಲ್ಲಿ ಎಂಬಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಐದು ಗ್ಯಾರಂಟಿ ಸ್ಕೀಮ್ ಜಾರಿಗೆ ತರಲಾಗುವುದು. ಮಹಿಳೆಯರಿಗೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣ, ಕಾಲೇಜು ತೆರಳುವ ವಿದ್ಯಾರ್ಥಿನಿಯರಿಗೆ ತಿಂಗಳಿಗೆ ಒಂದು ಸಾವಿರ ಗೌರವ ಧನ ನೀಡಲಾಗುವುದು ಎಂದಿದ್ದಾರೆ.
ತಮ್ಮನ್ನು ನೋಡಿ ಮಹಿಳೆಯರು ಕೈ ಬೀಸುತ್ತಿರುವುದನ್ನು ಉತ್ತೇಜಿತರಾದ ರಾಹುಲ್, ಮಹಿಳೆಯರು ರಾಜಕೀಯದಲ್ಲಿ ಇನ್ನಷ್ಟು ಸಕ್ರಿಯರಾಗಬೇಕು, ಈ ಬಾರಿ ಮಹಿಳೆ ಸಿಎಂ ಆಗುವುದನ್ನು ನೋಡಲು ಬಯಸುತ್ತೇನೆ, ಅವರ ಆಶೋತ್ತರಗಳನ್ನು ಅವರೇ ಈಡೇರಿಸಿಕೊಳ್ಳಬೇಕು, ಅದಕ್ಕಾಗಿ ಅವರೇ ಅಧಿಕಾರಕ್ಕೆ ಏರಬೇಕು ಎಂದು ಹೇಳಿದ್ದಾರೆ.
ಕೇರಳದಲ್ಲಿ ಯಾರು ಕೂಡ ಮಹಿಳೆಯರು ಸಿಎಂ ಆಗಿಲ್ಲ, ಕೆ.ಆರ್ ಗೌರಿ ಅಮ್ಮನಂಥ ಪ್ರಭಾವಿ ಮಹಿಳೆಯರು ಇಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ 92 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು 9 ಕಡೆ ಮಹಿಳೆಯರಿಗೆ ಮಣೆ ಹಾಕಿದೆ. ಮುಸ್ಲಿಂ ಲೀಗ್ ಎರಡು ಕಡೆ ಮಹಿಳೆಯರಿಗೆ ಸ್ಥಾನ ನೀಡಿದೆ. ಸಭೆ ಮುಗಿದ ಬಳಿಕ ರಾಹುಲ್ ಗಾಂಧಿ ಸೈಕಲ್ ತುಳಿಯುತ್ತಾ ರ್ಯಾಲಿ ನಡೆಸಿದರು. ಇತ್ತೀಚೆಗೆ ಮಾರ್ಚ್ 8ರಂದು ಕೇರಳದಲ್ಲಿ ಪ್ರಚಾರ ಸಭೆ ನಡೆಸಿದ್ದ ರಾಹುಲ್ ಗಾಂಧಿ, ಯುಡಿಎಫ್ ಅಧಿಕಾರಕ್ಕೆ ಬಂದಲ್ಲಿ ಐದು ಗ್ಯಾರಂಟಿ ಯೋಜನೆ ಜಾರಿಗೆ ತರುವ ಭರವಸೆ ನೀಡಿದ್ದರು. ಮಹಿಳೆಯರಿಗೆ ಸಾರಿಗೆ ಉಚಿತ ಪ್ರಯಾಣ, ಕಾಲೇಜು ಕಲಿಯುವ ಹೆಣ್ಮಕ್ಕಳಿಗೆ ತಿಂಗಳಿಗೆ ಒಂದು ಸಾವಿರ, ಬಡ ಕುಟುಂಬಗಳಿಗೆ ಮೂರು ಸಾವಿರ ಪಿಂಚಣಿ, 25 ಲಕ್ಷ ಹೆಲ್ತ್ ಇನ್ಶೂರೆನ್ಸ್, ವ್ಯವಹಾರ ಉದ್ದೇಶಕ್ಕೆ 5 ಲಕ್ಷ ವರೆಗೆ ಉಚಿತ ಸಾಲ ಸೇರಿ ಐದು ಘೋಷಣೆಗಳನ್ನು ನೀಡಿದ್ದರು.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm