ಬ್ರೇಕಿಂಗ್ ನ್ಯೂಸ್
31-03-26 10:13 am HK News Staffer ಕರ್ನಾಟಕ
ತಿರುವನಂತಪುರಂ, ಮಾರ್ಚ್ 31: ಕೇರಳದಲ್ಲಿ ಯುಡಿಎಫ್ ಅಧಿಕಾರಕ್ಕೇರಿದರೆ ಕರ್ನಾಟಕ, ತೆಲಂಗಾಣ ರೀತಿಯಲ್ಲೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಇಂದು ಒಂದು ಹೆಜ್ಜೆ ಮುಂದೆ ಹೋಗಿದ್ದು ಕೇರಳದಲ್ಲಿ ಮಹಿಳೆಯೊಬ್ಬರು ಸಿಎಂ ಆಗುವುದನ್ನು ಬಯಸುವುದಾಗಿ ಹೇಳಿದ್ದಾರೆ.
ಪುತ್ತುಪಲ್ಲಿ ಎಂಬಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಐದು ಗ್ಯಾರಂಟಿ ಸ್ಕೀಮ್ ಜಾರಿಗೆ ತರಲಾಗುವುದು. ಮಹಿಳೆಯರಿಗೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣ, ಕಾಲೇಜು ತೆರಳುವ ವಿದ್ಯಾರ್ಥಿನಿಯರಿಗೆ ತಿಂಗಳಿಗೆ ಒಂದು ಸಾವಿರ ಗೌರವ ಧನ ನೀಡಲಾಗುವುದು ಎಂದಿದ್ದಾರೆ.
ತಮ್ಮನ್ನು ನೋಡಿ ಮಹಿಳೆಯರು ಕೈ ಬೀಸುತ್ತಿರುವುದನ್ನು ಉತ್ತೇಜಿತರಾದ ರಾಹುಲ್, ಮಹಿಳೆಯರು ರಾಜಕೀಯದಲ್ಲಿ ಇನ್ನಷ್ಟು ಸಕ್ರಿಯರಾಗಬೇಕು, ಈ ಬಾರಿ ಮಹಿಳೆ ಸಿಎಂ ಆಗುವುದನ್ನು ನೋಡಲು ಬಯಸುತ್ತೇನೆ, ಅವರ ಆಶೋತ್ತರಗಳನ್ನು ಅವರೇ ಈಡೇರಿಸಿಕೊಳ್ಳಬೇಕು, ಅದಕ್ಕಾಗಿ ಅವರೇ ಅಧಿಕಾರಕ್ಕೆ ಏರಬೇಕು ಎಂದು ಹೇಳಿದ್ದಾರೆ.
ಕೇರಳದಲ್ಲಿ ಯಾರು ಕೂಡ ಮಹಿಳೆಯರು ಸಿಎಂ ಆಗಿಲ್ಲ, ಕೆ.ಆರ್ ಗೌರಿ ಅಮ್ಮನಂಥ ಪ್ರಭಾವಿ ಮಹಿಳೆಯರು ಇಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ 92 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು 9 ಕಡೆ ಮಹಿಳೆಯರಿಗೆ ಮಣೆ ಹಾಕಿದೆ. ಮುಸ್ಲಿಂ ಲೀಗ್ ಎರಡು ಕಡೆ ಮಹಿಳೆಯರಿಗೆ ಸ್ಥಾನ ನೀಡಿದೆ. ಸಭೆ ಮುಗಿದ ಬಳಿಕ ರಾಹುಲ್ ಗಾಂಧಿ ಸೈಕಲ್ ತುಳಿಯುತ್ತಾ ರ್ಯಾಲಿ ನಡೆಸಿದರು. ಇತ್ತೀಚೆಗೆ ಮಾರ್ಚ್ 8ರಂದು ಕೇರಳದಲ್ಲಿ ಪ್ರಚಾರ ಸಭೆ ನಡೆಸಿದ್ದ ರಾಹುಲ್ ಗಾಂಧಿ, ಯುಡಿಎಫ್ ಅಧಿಕಾರಕ್ಕೆ ಬಂದಲ್ಲಿ ಐದು ಗ್ಯಾರಂಟಿ ಯೋಜನೆ ಜಾರಿಗೆ ತರುವ ಭರವಸೆ ನೀಡಿದ್ದರು. ಮಹಿಳೆಯರಿಗೆ ಸಾರಿಗೆ ಉಚಿತ ಪ್ರಯಾಣ, ಕಾಲೇಜು ಕಲಿಯುವ ಹೆಣ್ಮಕ್ಕಳಿಗೆ ತಿಂಗಳಿಗೆ ಒಂದು ಸಾವಿರ, ಬಡ ಕುಟುಂಬಗಳಿಗೆ ಮೂರು ಸಾವಿರ ಪಿಂಚಣಿ, 25 ಲಕ್ಷ ಹೆಲ್ತ್ ಇನ್ಶೂರೆನ್ಸ್, ವ್ಯವಹಾರ ಉದ್ದೇಶಕ್ಕೆ 5 ಲಕ್ಷ ವರೆಗೆ ಉಚಿತ ಸಾಲ ಸೇರಿ ಐದು ಘೋಷಣೆಗಳನ್ನು ನೀಡಿದ್ದರು.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am