ಬ್ರೇಕಿಂಗ್ ನ್ಯೂಸ್
02-04-26 02:46 pm HK News Staffer ಕರ್ನಾಟಕ
ಜಾರ್ಖಂಡ್, ಏಪ್ರಿಲ್ 02: ಮಗನ ಅನಾರೋಗ್ಯ ಗುಣಪಡಿಸಲು ಮೂಢನಂಬಿಕೆಗೆ ಒಳಗಾಗಿ ತಾಯಿ ತಾನು ಹೆತ್ತ ಮಗಳನ್ನೇ ಬಲಿಕೊಟ್ಟ ಭೀಕರ ಘಟನೆ ಜಾರ್ಖಂಡ್ನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ತಾಯಿ, ಆಕೆಯ ಪ್ರಿಯಕರ ಹಾಗೂ ಮಾಂತ್ರಿಕ ಎಂದು ಹೇಳಿಕೊಂಡಿದ್ದ ಮಹಿಳೆ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಮಾರ್ಚ್ 24ರ ರಾತ್ರಿ ಕುಸುಂಭ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆ ದಿನ ರಾಮನವಮಿ ಮೆರವಣಿಗೆ ನಡೆಯುತ್ತಿದ್ದ ವೇಳೆ ಬಾಲಕಿ ಕಾಣೆಯಾಗಿದ್ದಳು. ಮರುದಿನ ಬೆಳಗ್ಗೆ ಸ್ಥಳೀಯ ಶಾಲೆಯ ಹಿಂಭಾಗದ ಬಿದಿರಿನ ತೋಪಿನಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಆರಂಭದಲ್ಲಿ ತಾಯಿ ನೀಡಿದ ದೂರಿನ ಆಧಾರದ ಮೇಲೆ ಇತರರ ವಿರುದ್ಧ ಪ್ರಕರಣ ದಾಖಲಿಸಲಾಯಿತಾದರೂ, ತನಿಖೆ ಮುಂದುವರಿದಂತೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಜಾರ್ಖಂಡ್ ಪೊಲೀಸ್ ಮಹಾನಿರ್ದೇಶಕರ ಸೂಚನೆಯ ಮೇರೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಯಿತು. ತನಿಖೆಯಲ್ಲಿ ತಾಯಿಯೇ ಈ ಕೃತ್ಯದ ಮೂಲ ಕಾರಣ ಎಂಬುದು ಬಹಿರಂಗವಾಯಿತು. ‘ಭಗ್ತಿನ್’ ಎಂದು ಕರೆಯಲ್ಪಡುವ ಶಾಂತಿ ದೇವಿ ಎಂಬ ಮಹಿಳೆ, ಮಗನ ರೋಗ ಗುಣವಾಗಲು ನರಬಲಿ ನೀಡಬೇಕೆಂದು ಹೇಳಿದ್ದಾಳೆ. ಇದನ್ನು ನಂಬಿದ ತಾಯಿ ಕಳೆದ ಮೂರು ತಿಂಗಳಿಂದ ಆಕೆಯ ಸಂಪರ್ಕದಲ್ಲಿದ್ದಳು.
ಪೂಜೆಯ ನೆಪದಲ್ಲಿ ತಾಯಿ ತನ್ನ ಪ್ರಿಯಕರ ಭೀಮ್ ರಾಮ್ ಜೊತೆ ಬಾಲಕಿಯನ್ನು ಮಹಿಳೆಯ ಮನೆಗೆ ಕರೆದುಕೊಂಡು ಹೋಗಿದ್ದು, ನಂತರ ಹತ್ತಿರದ ಬಿದಿರಿನ ತೋಪಿಗೆ ಕರೆದೊಯ್ದು ಹತ್ಯೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭೀಮ್ ರಾಮ್ ಬಾಲಕಿಯನ್ನು ಕತ್ತು ಹಿಸುಕಿ ಕೊಂದಿದ್ದರೆ, ತಾಯಿ ಮಗುವಿನ ಕಾಲುಗಳನ್ನು ಹಿಡಿದಿದ್ದಾಳೆ ಎಂದು ಆರೋಪಿಸಲಾಗಿದೆ.
ಬಾಲಕಿಯ ಗುಪ್ತಾಂಗಗಳೊಳಗೆ ಮರದ ಕೋಲನ್ನು ಹಾಕಿದ್ದಾರೆ. ಭೀಮ್ ರಾಮ್ ಆಕೆಯ ತಲೆಗೆ ಹೊಡೆದು ರಕ್ತವನ್ನು ತೆಗೆದುಕೊಂಡಿದ್ದಾನೆ. ನಂತರ ಶವವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಸದ್ಯ ಪೊಲೀಸರು ಮೂವರನ್ನೂ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೂಢನಂಬಿಕೆ ಮತ್ತು ಕುರುಡು ಆಚರಣೆಗಳಿಂದ ಉಂಟಾಗುವ ಅಪಾಯಗಳಿಗೆ ಈ ಘಟನೆ ಭೀಕರ ಉದಾಹರಣೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm