ಬ್ರೇಕಿಂಗ್ ನ್ಯೂಸ್
02-04-26 02:46 pm HK News Staffer ಕರ್ನಾಟಕ
ಜಾರ್ಖಂಡ್, ಏಪ್ರಿಲ್ 02: ಮಗನ ಅನಾರೋಗ್ಯ ಗುಣಪಡಿಸಲು ಮೂಢನಂಬಿಕೆಗೆ ಒಳಗಾಗಿ ತಾಯಿ ತಾನು ಹೆತ್ತ ಮಗಳನ್ನೇ ಬಲಿಕೊಟ್ಟ ಭೀಕರ ಘಟನೆ ಜಾರ್ಖಂಡ್ನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ತಾಯಿ, ಆಕೆಯ ಪ್ರಿಯಕರ ಹಾಗೂ ಮಾಂತ್ರಿಕ ಎಂದು ಹೇಳಿಕೊಂಡಿದ್ದ ಮಹಿಳೆ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಮಾರ್ಚ್ 24ರ ರಾತ್ರಿ ಕುಸುಂಭ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆ ದಿನ ರಾಮನವಮಿ ಮೆರವಣಿಗೆ ನಡೆಯುತ್ತಿದ್ದ ವೇಳೆ ಬಾಲಕಿ ಕಾಣೆಯಾಗಿದ್ದಳು. ಮರುದಿನ ಬೆಳಗ್ಗೆ ಸ್ಥಳೀಯ ಶಾಲೆಯ ಹಿಂಭಾಗದ ಬಿದಿರಿನ ತೋಪಿನಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಆರಂಭದಲ್ಲಿ ತಾಯಿ ನೀಡಿದ ದೂರಿನ ಆಧಾರದ ಮೇಲೆ ಇತರರ ವಿರುದ್ಧ ಪ್ರಕರಣ ದಾಖಲಿಸಲಾಯಿತಾದರೂ, ತನಿಖೆ ಮುಂದುವರಿದಂತೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಜಾರ್ಖಂಡ್ ಪೊಲೀಸ್ ಮಹಾನಿರ್ದೇಶಕರ ಸೂಚನೆಯ ಮೇರೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಯಿತು. ತನಿಖೆಯಲ್ಲಿ ತಾಯಿಯೇ ಈ ಕೃತ್ಯದ ಮೂಲ ಕಾರಣ ಎಂಬುದು ಬಹಿರಂಗವಾಯಿತು. ‘ಭಗ್ತಿನ್’ ಎಂದು ಕರೆಯಲ್ಪಡುವ ಶಾಂತಿ ದೇವಿ ಎಂಬ ಮಹಿಳೆ, ಮಗನ ರೋಗ ಗುಣವಾಗಲು ನರಬಲಿ ನೀಡಬೇಕೆಂದು ಹೇಳಿದ್ದಾಳೆ. ಇದನ್ನು ನಂಬಿದ ತಾಯಿ ಕಳೆದ ಮೂರು ತಿಂಗಳಿಂದ ಆಕೆಯ ಸಂಪರ್ಕದಲ್ಲಿದ್ದಳು.
ಪೂಜೆಯ ನೆಪದಲ್ಲಿ ತಾಯಿ ತನ್ನ ಪ್ರಿಯಕರ ಭೀಮ್ ರಾಮ್ ಜೊತೆ ಬಾಲಕಿಯನ್ನು ಮಹಿಳೆಯ ಮನೆಗೆ ಕರೆದುಕೊಂಡು ಹೋಗಿದ್ದು, ನಂತರ ಹತ್ತಿರದ ಬಿದಿರಿನ ತೋಪಿಗೆ ಕರೆದೊಯ್ದು ಹತ್ಯೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭೀಮ್ ರಾಮ್ ಬಾಲಕಿಯನ್ನು ಕತ್ತು ಹಿಸುಕಿ ಕೊಂದಿದ್ದರೆ, ತಾಯಿ ಮಗುವಿನ ಕಾಲುಗಳನ್ನು ಹಿಡಿದಿದ್ದಾಳೆ ಎಂದು ಆರೋಪಿಸಲಾಗಿದೆ.
ಬಾಲಕಿಯ ಗುಪ್ತಾಂಗಗಳೊಳಗೆ ಮರದ ಕೋಲನ್ನು ಹಾಕಿದ್ದಾರೆ. ಭೀಮ್ ರಾಮ್ ಆಕೆಯ ತಲೆಗೆ ಹೊಡೆದು ರಕ್ತವನ್ನು ತೆಗೆದುಕೊಂಡಿದ್ದಾನೆ. ನಂತರ ಶವವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಸದ್ಯ ಪೊಲೀಸರು ಮೂವರನ್ನೂ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೂಢನಂಬಿಕೆ ಮತ್ತು ಕುರುಡು ಆಚರಣೆಗಳಿಂದ ಉಂಟಾಗುವ ಅಪಾಯಗಳಿಗೆ ಈ ಘಟನೆ ಭೀಕರ ಉದಾಹರಣೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
02-04-26 03:56 pm
HK News Staffer
ಮಗನ ರೋಗ ಗುಣಪಡಿಸಲು ಸ್ವಂತ ಮಗಳನ್ನೇ ಕೊಂದ ತಾಯಿ! ಮ...
02-04-26 02:46 pm
ಕೈಚೀಲ ಖರೀದಿಯಲ್ಲಿ ಅವ್ಯವಹಾರ; ಐಎಎಸ್ ಅಧಿಕಾರಿ ರೋಹಿ...
01-04-26 10:51 pm
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm