ಬ್ರೇಕಿಂಗ್ ನ್ಯೂಸ್
02-04-26 07:44 pm HK News Staffer ಕರ್ನಾಟಕ
ನವದೆಹಲಿ, ಎಪ್ರಿಲ್ 2: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆ ಉಪ ನಾಯಕ ಸ್ಥಾನದಿಂದ ತೆಗೆದು ಹಾಕಲಾಗಿದೆ. ಚಡ್ಡಾ ಸ್ಥಾನಕ್ಕೆ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಮತ್ತು ಪಕ್ಷದ ಸಂಸದ ಡಾ. ಅಶೋಕ್ ಕುಮಾರ್ ಮಿತ್ತಲ್ ಅವರನ್ನು ಪಕ್ಷ ನೇಮಕ ಮಾಡಿದೆ.
ಇತ್ತೀಚೆಗೆ ರಾಜ್ಯಸಭೆಯಲ್ಲಿ ಸಾರ್ವಜನಿಕ ವಿಚಾರಗಳನ್ನು ಪ್ರಸ್ತಾಪಿಸಿ ದೇಶದ ಗಮನಸೆಳೆದಿದ್ದ ರಾಘವ್ ಚಡ್ಡಾ ಅವರನ್ನು ದಿಢೀರ್ ಬೆಳವಣಿಗೆಯಲ್ಲಿ ಉಪ ನಾಯಕ ಹುದ್ದೆಯಿಂದ ವಜಾಗೊಳಿಸಿದ್ದು ಪಕ್ಷದೊಳಗಿನ ಪ್ರಮುಖ ಬದಲಾವಣೆ ಎಂದು ಹೇಳಲಾಗುತ್ತಿದೆ. ಅಬಕಾರಿ ನೀತಿ ವಿಷಯದಲ್ಲಿ ಪಕ್ಷದ ಉನ್ನತ ನಾಯಕರು ಇತ್ತೀಚೆಗೆ ದೋಷಮುಕ್ತರಾಗಿದ್ದರೂ, ಛಡ್ಡಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿರಲಿಲ್ಲ. ಸಾಮಾಜಿಕ ಮಾಧ್ಯಮದಲ್ಲಿಯೂ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಛಡ್ಡಾ ಅವರ ಮೌನ ಪಕ್ಷದ ನಾಯಕರ ನಡುವಿನ ಬಿರುಕು ಎಂಬ ಮಾತು ಕೇಳಿಬಂದಿತ್ತು.
ಪಕ್ಷದ ರಾಜ್ಯಸಭೆ ಉಪ ನಾಯಕರಾಗಿ ಆಯ್ಕೆಯಾದ ಡಾ. ಅಶೋಕ್ ಕುಮಾರ್ ಮಿತ್ತಲ್, ಶಿಕ್ಷಣ ಕ್ಷೇತ್ರದ ಹಿನ್ನೆಲೆ ಹೊಂದಿರುವ ಅನುಭವಿಯಾಗಿದ್ದು 2022ರಲ್ಲಿ ಪಂಜಾಬ್ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಹಿಂದಿನ ಸಂಸತ್ ಅಧಿವೇಶನಗಳಲ್ಲಿ, ಕೃಷಿ ಮತ್ತು ಶಿಕ್ಷಣದಂತಹ ವಿಷಯಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಪಕ್ಷದ ಮೂಲಗಳ ಪ್ರಕಾರ, ರಾಘವ್ ಚಡ್ಡಾ ಅವರಿಗೆ ಸಂಸತ್ತಿನಲ್ಲಿ ಮಾತನಾಡಲು ಸಮಯ ನಿಗದಿಪಡಿಸದಂತೆ ಎಎಪಿ ರಾಜ್ಯಸಭಾ ಕಾರ್ಯದರ್ಶಿಯನ್ನು ಕೇಳಿದೆ. ಇದಲ್ಲದೆ, ಸಂಸದ ರಾಘವ್ ಚಡ್ಡಾ ಅವರ ಬದಲಿಗೆ ಸಂಸದ ಅಶೋಕ್ ಮಿತ್ತಲ್ ಅವರನ್ನು ಪಕ್ಷದ ರಾಜ್ಯಸಭಾ ಉಪ ನಾಯಕರನ್ನಾಗಿ ನೇಮಿಸುವಂತೆ ಕೋರಿ ಆಮ್ ಆದ್ಮಿ ಪಕ್ಷವು ರಾಜ್ಯಸಭಾ ಕಾರ್ಯದರ್ಶಿಗೆ ಪತ್ರವನ್ನು ಸಲ್ಲಿಸಿದೆ.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm