ಬ್ರೇಕಿಂಗ್ ನ್ಯೂಸ್
02-04-26 07:44 pm HK News Staffer ಕರ್ನಾಟಕ
ನವದೆಹಲಿ, ಎಪ್ರಿಲ್ 2: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆ ಉಪ ನಾಯಕ ಸ್ಥಾನದಿಂದ ತೆಗೆದು ಹಾಕಲಾಗಿದೆ. ಚಡ್ಡಾ ಸ್ಥಾನಕ್ಕೆ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಮತ್ತು ಪಕ್ಷದ ಸಂಸದ ಡಾ. ಅಶೋಕ್ ಕುಮಾರ್ ಮಿತ್ತಲ್ ಅವರನ್ನು ಪಕ್ಷ ನೇಮಕ ಮಾಡಿದೆ.
ಇತ್ತೀಚೆಗೆ ರಾಜ್ಯಸಭೆಯಲ್ಲಿ ಸಾರ್ವಜನಿಕ ವಿಚಾರಗಳನ್ನು ಪ್ರಸ್ತಾಪಿಸಿ ದೇಶದ ಗಮನಸೆಳೆದಿದ್ದ ರಾಘವ್ ಚಡ್ಡಾ ಅವರನ್ನು ದಿಢೀರ್ ಬೆಳವಣಿಗೆಯಲ್ಲಿ ಉಪ ನಾಯಕ ಹುದ್ದೆಯಿಂದ ವಜಾಗೊಳಿಸಿದ್ದು ಪಕ್ಷದೊಳಗಿನ ಪ್ರಮುಖ ಬದಲಾವಣೆ ಎಂದು ಹೇಳಲಾಗುತ್ತಿದೆ. ಅಬಕಾರಿ ನೀತಿ ವಿಷಯದಲ್ಲಿ ಪಕ್ಷದ ಉನ್ನತ ನಾಯಕರು ಇತ್ತೀಚೆಗೆ ದೋಷಮುಕ್ತರಾಗಿದ್ದರೂ, ಛಡ್ಡಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿರಲಿಲ್ಲ. ಸಾಮಾಜಿಕ ಮಾಧ್ಯಮದಲ್ಲಿಯೂ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಛಡ್ಡಾ ಅವರ ಮೌನ ಪಕ್ಷದ ನಾಯಕರ ನಡುವಿನ ಬಿರುಕು ಎಂಬ ಮಾತು ಕೇಳಿಬಂದಿತ್ತು.
ಪಕ್ಷದ ರಾಜ್ಯಸಭೆ ಉಪ ನಾಯಕರಾಗಿ ಆಯ್ಕೆಯಾದ ಡಾ. ಅಶೋಕ್ ಕುಮಾರ್ ಮಿತ್ತಲ್, ಶಿಕ್ಷಣ ಕ್ಷೇತ್ರದ ಹಿನ್ನೆಲೆ ಹೊಂದಿರುವ ಅನುಭವಿಯಾಗಿದ್ದು 2022ರಲ್ಲಿ ಪಂಜಾಬ್ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಹಿಂದಿನ ಸಂಸತ್ ಅಧಿವೇಶನಗಳಲ್ಲಿ, ಕೃಷಿ ಮತ್ತು ಶಿಕ್ಷಣದಂತಹ ವಿಷಯಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಪಕ್ಷದ ಮೂಲಗಳ ಪ್ರಕಾರ, ರಾಘವ್ ಚಡ್ಡಾ ಅವರಿಗೆ ಸಂಸತ್ತಿನಲ್ಲಿ ಮಾತನಾಡಲು ಸಮಯ ನಿಗದಿಪಡಿಸದಂತೆ ಎಎಪಿ ರಾಜ್ಯಸಭಾ ಕಾರ್ಯದರ್ಶಿಯನ್ನು ಕೇಳಿದೆ. ಇದಲ್ಲದೆ, ಸಂಸದ ರಾಘವ್ ಚಡ್ಡಾ ಅವರ ಬದಲಿಗೆ ಸಂಸದ ಅಶೋಕ್ ಮಿತ್ತಲ್ ಅವರನ್ನು ಪಕ್ಷದ ರಾಜ್ಯಸಭಾ ಉಪ ನಾಯಕರನ್ನಾಗಿ ನೇಮಿಸುವಂತೆ ಕೋರಿ ಆಮ್ ಆದ್ಮಿ ಪಕ್ಷವು ರಾಜ್ಯಸಭಾ ಕಾರ್ಯದರ್ಶಿಗೆ ಪತ್ರವನ್ನು ಸಲ್ಲಿಸಿದೆ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm