ಬ್ರೇಕಿಂಗ್ ನ್ಯೂಸ್
02-04-26 07:44 pm HK News Staffer ಕರ್ನಾಟಕ
ನವದೆಹಲಿ, ಎಪ್ರಿಲ್ 2: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆ ಉಪ ನಾಯಕ ಸ್ಥಾನದಿಂದ ತೆಗೆದು ಹಾಕಲಾಗಿದೆ. ಚಡ್ಡಾ ಸ್ಥಾನಕ್ಕೆ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಮತ್ತು ಪಕ್ಷದ ಸಂಸದ ಡಾ. ಅಶೋಕ್ ಕುಮಾರ್ ಮಿತ್ತಲ್ ಅವರನ್ನು ಪಕ್ಷ ನೇಮಕ ಮಾಡಿದೆ.
ಇತ್ತೀಚೆಗೆ ರಾಜ್ಯಸಭೆಯಲ್ಲಿ ಸಾರ್ವಜನಿಕ ವಿಚಾರಗಳನ್ನು ಪ್ರಸ್ತಾಪಿಸಿ ದೇಶದ ಗಮನಸೆಳೆದಿದ್ದ ರಾಘವ್ ಚಡ್ಡಾ ಅವರನ್ನು ದಿಢೀರ್ ಬೆಳವಣಿಗೆಯಲ್ಲಿ ಉಪ ನಾಯಕ ಹುದ್ದೆಯಿಂದ ವಜಾಗೊಳಿಸಿದ್ದು ಪಕ್ಷದೊಳಗಿನ ಪ್ರಮುಖ ಬದಲಾವಣೆ ಎಂದು ಹೇಳಲಾಗುತ್ತಿದೆ. ಅಬಕಾರಿ ನೀತಿ ವಿಷಯದಲ್ಲಿ ಪಕ್ಷದ ಉನ್ನತ ನಾಯಕರು ಇತ್ತೀಚೆಗೆ ದೋಷಮುಕ್ತರಾಗಿದ್ದರೂ, ಛಡ್ಡಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿರಲಿಲ್ಲ. ಸಾಮಾಜಿಕ ಮಾಧ್ಯಮದಲ್ಲಿಯೂ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಛಡ್ಡಾ ಅವರ ಮೌನ ಪಕ್ಷದ ನಾಯಕರ ನಡುವಿನ ಬಿರುಕು ಎಂಬ ಮಾತು ಕೇಳಿಬಂದಿತ್ತು.
ಪಕ್ಷದ ರಾಜ್ಯಸಭೆ ಉಪ ನಾಯಕರಾಗಿ ಆಯ್ಕೆಯಾದ ಡಾ. ಅಶೋಕ್ ಕುಮಾರ್ ಮಿತ್ತಲ್, ಶಿಕ್ಷಣ ಕ್ಷೇತ್ರದ ಹಿನ್ನೆಲೆ ಹೊಂದಿರುವ ಅನುಭವಿಯಾಗಿದ್ದು 2022ರಲ್ಲಿ ಪಂಜಾಬ್ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಹಿಂದಿನ ಸಂಸತ್ ಅಧಿವೇಶನಗಳಲ್ಲಿ, ಕೃಷಿ ಮತ್ತು ಶಿಕ್ಷಣದಂತಹ ವಿಷಯಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಪಕ್ಷದ ಮೂಲಗಳ ಪ್ರಕಾರ, ರಾಘವ್ ಚಡ್ಡಾ ಅವರಿಗೆ ಸಂಸತ್ತಿನಲ್ಲಿ ಮಾತನಾಡಲು ಸಮಯ ನಿಗದಿಪಡಿಸದಂತೆ ಎಎಪಿ ರಾಜ್ಯಸಭಾ ಕಾರ್ಯದರ್ಶಿಯನ್ನು ಕೇಳಿದೆ. ಇದಲ್ಲದೆ, ಸಂಸದ ರಾಘವ್ ಚಡ್ಡಾ ಅವರ ಬದಲಿಗೆ ಸಂಸದ ಅಶೋಕ್ ಮಿತ್ತಲ್ ಅವರನ್ನು ಪಕ್ಷದ ರಾಜ್ಯಸಭಾ ಉಪ ನಾಯಕರನ್ನಾಗಿ ನೇಮಿಸುವಂತೆ ಕೋರಿ ಆಮ್ ಆದ್ಮಿ ಪಕ್ಷವು ರಾಜ್ಯಸಭಾ ಕಾರ್ಯದರ್ಶಿಗೆ ಪತ್ರವನ್ನು ಸಲ್ಲಿಸಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 03:14 pm
HK News Staffer
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm