ಬ್ರೇಕಿಂಗ್ ನ್ಯೂಸ್
02-04-26 07:44 pm HK News Staffer ಕರ್ನಾಟಕ
ನವದೆಹಲಿ, ಎಪ್ರಿಲ್ 2: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆ ಉಪ ನಾಯಕ ಸ್ಥಾನದಿಂದ ತೆಗೆದು ಹಾಕಲಾಗಿದೆ. ಚಡ್ಡಾ ಸ್ಥಾನಕ್ಕೆ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಮತ್ತು ಪಕ್ಷದ ಸಂಸದ ಡಾ. ಅಶೋಕ್ ಕುಮಾರ್ ಮಿತ್ತಲ್ ಅವರನ್ನು ಪಕ್ಷ ನೇಮಕ ಮಾಡಿದೆ.
ಇತ್ತೀಚೆಗೆ ರಾಜ್ಯಸಭೆಯಲ್ಲಿ ಸಾರ್ವಜನಿಕ ವಿಚಾರಗಳನ್ನು ಪ್ರಸ್ತಾಪಿಸಿ ದೇಶದ ಗಮನಸೆಳೆದಿದ್ದ ರಾಘವ್ ಚಡ್ಡಾ ಅವರನ್ನು ದಿಢೀರ್ ಬೆಳವಣಿಗೆಯಲ್ಲಿ ಉಪ ನಾಯಕ ಹುದ್ದೆಯಿಂದ ವಜಾಗೊಳಿಸಿದ್ದು ಪಕ್ಷದೊಳಗಿನ ಪ್ರಮುಖ ಬದಲಾವಣೆ ಎಂದು ಹೇಳಲಾಗುತ್ತಿದೆ. ಅಬಕಾರಿ ನೀತಿ ವಿಷಯದಲ್ಲಿ ಪಕ್ಷದ ಉನ್ನತ ನಾಯಕರು ಇತ್ತೀಚೆಗೆ ದೋಷಮುಕ್ತರಾಗಿದ್ದರೂ, ಛಡ್ಡಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿರಲಿಲ್ಲ. ಸಾಮಾಜಿಕ ಮಾಧ್ಯಮದಲ್ಲಿಯೂ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಛಡ್ಡಾ ಅವರ ಮೌನ ಪಕ್ಷದ ನಾಯಕರ ನಡುವಿನ ಬಿರುಕು ಎಂಬ ಮಾತು ಕೇಳಿಬಂದಿತ್ತು.
ಪಕ್ಷದ ರಾಜ್ಯಸಭೆ ಉಪ ನಾಯಕರಾಗಿ ಆಯ್ಕೆಯಾದ ಡಾ. ಅಶೋಕ್ ಕುಮಾರ್ ಮಿತ್ತಲ್, ಶಿಕ್ಷಣ ಕ್ಷೇತ್ರದ ಹಿನ್ನೆಲೆ ಹೊಂದಿರುವ ಅನುಭವಿಯಾಗಿದ್ದು 2022ರಲ್ಲಿ ಪಂಜಾಬ್ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಹಿಂದಿನ ಸಂಸತ್ ಅಧಿವೇಶನಗಳಲ್ಲಿ, ಕೃಷಿ ಮತ್ತು ಶಿಕ್ಷಣದಂತಹ ವಿಷಯಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಪಕ್ಷದ ಮೂಲಗಳ ಪ್ರಕಾರ, ರಾಘವ್ ಚಡ್ಡಾ ಅವರಿಗೆ ಸಂಸತ್ತಿನಲ್ಲಿ ಮಾತನಾಡಲು ಸಮಯ ನಿಗದಿಪಡಿಸದಂತೆ ಎಎಪಿ ರಾಜ್ಯಸಭಾ ಕಾರ್ಯದರ್ಶಿಯನ್ನು ಕೇಳಿದೆ. ಇದಲ್ಲದೆ, ಸಂಸದ ರಾಘವ್ ಚಡ್ಡಾ ಅವರ ಬದಲಿಗೆ ಸಂಸದ ಅಶೋಕ್ ಮಿತ್ತಲ್ ಅವರನ್ನು ಪಕ್ಷದ ರಾಜ್ಯಸಭಾ ಉಪ ನಾಯಕರನ್ನಾಗಿ ನೇಮಿಸುವಂತೆ ಕೋರಿ ಆಮ್ ಆದ್ಮಿ ಪಕ್ಷವು ರಾಜ್ಯಸಭಾ ಕಾರ್ಯದರ್ಶಿಗೆ ಪತ್ರವನ್ನು ಸಲ್ಲಿಸಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm