ಬ್ರೇಕಿಂಗ್ ನ್ಯೂಸ್
02-04-26 08:07 pm HK News Staffer ಕರ್ನಾಟಕ
ವಿಜಯಪುರ, ಎಪ್ರಿಲ್ 2: ನಾನು ಮುಖ್ಯಮಂತ್ರಿಯಾಗಿ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರ ಹಾಕುತ್ತೇನೆ. ಇವರ ಬದಲಾಗಿ ಮರಾಠರು, ಬ್ರಾಹ್ಮಣರು, ಕ್ಷತ್ರಿಯರು ಸೇರಿದಂತೆ ಅನೇಕರು ಅಲ್ಪಸಂಖ್ಯಾತರು ಇದ್ದಾರೆ. ಅವರಿಗೆಲ್ಲ ಅಲ್ಪಸಂಖ್ಯಾತ ಸ್ಥಾನಮಾನ ಕೊಡುತ್ತೇನೆ ಎಂದು ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಇಂದು ಹನುಮ ಜಯಂತಿ. ಹನುಮಂತನ ಸನ್ನಿಧಾನದಲ್ಲಿ ನಿಂತು ಹೇಳುತ್ತೇನೆ. ನಾನು ಯಾವುದೇ ಕಾರಣಕ್ಕೂ ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳಿ ಅಂತಾ ಹೇಳಲ್ಲ. ಅಪ್ಪ-ಮಗನನ್ನು ಕೈಬಿಟ್ಟು ಅವರಾಗಿಯೇ ನನ್ನನ್ನು ಬಿಜೆಪಿಗೆ ಬರುವಂತೆ ಆಹ್ವಾನಿಸುತ್ತಾರೆ. ಬಳಿಕ ಸಿಎಂ ಆಗಿ ರಾಜ್ಯದಲ್ಲಿ ಯೋಗಿ ಆದಿತ್ಯನಾಥ್ ರೀತಿ ರಾಜ್ಯಭಾರ ಮಾಡುತ್ತೇನೆ. ರಾಜ್ಯದಲ್ಲಿ ಯೋಗಿ ರೀತಿ ಆಡಳಿತ ಕೊಡುತ್ತೇನೆ ಎಂದು ಹೇಳುವ ಧೈರ್ಯ ಬಿಜೆಪಿಯಲ್ಲಿ ಯಾರಿಗಾದ್ರೂ ಇದೆಯಾ.. ಅದನ್ನು ನಾನು ಮಾತ್ರ ಹೇಳಬಲ್ಲೆ ಎಂದು ಹೇಳಿದರು.
ಬಾಗಲಕೋಟೆಯ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ನನ್ನ ಆತ್ಮೀಯರು. ಅವರ ಪರ ಪ್ರಚಾರ ಮಾಡುವಂತೆ ಬಿಜೆಪಿ ಕಾರ್ಯಕರ್ತರು ನನ್ನನ್ನು ಕರೆದಿದ್ದಾರೆ. ಅದಕ್ಕಾಗಿ ನಾನು ಚರಂತಿಮಠ ಅವರ ಪರ ಪ್ರಚಾರಕ್ಕೆ ಹೋಗುತ್ತಿದ್ದೇನೆ ಎಂದರು.
2028 ರಲ್ಲಿ ಹಿಂದೂ ಸರ್ಕಾರ ಜಾರಿಗೆ ಬಂದೇ ಬರತ್ತೆ ಎಂದು ಹೇಳಿದ ಪಾಟೀಲ, ಮುಸ್ಲಿಂ ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆಗಾಗಿ ಸರ್ಕಾರದಿಂದ ಟ್ರೇನಿಂಗ್ ಕೊಡುತ್ತಾರೆ. ಮುಸ್ಲಿಂ ವಿದ್ಯಾರ್ಥಿಗಳಿಗೆ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಹಣ ಕೊಡುತ್ತಾರೆ. ಹಿಂದುಗಳಿಗೇನು ಕೊಡುತ್ತಾರೆ. ಹೀಗಾಗಿ ಈ ಚುನಾವಣೆಯಲ್ಲಿ ಹಿಂದುಗಳು ಒಗ್ಗಟ್ಟಾಗುತ್ತಾರೆ. ಕಾಂಗ್ರೆಸಿಗೆ ಬುದ್ಧಿ ಕಲಿಸುತ್ತಾರೆ. ಹಿಂದೆ ಕೆಜಿ ಹಳ್ಳಿ, ಡಿಜೆ ಹಳ್ಳಿ ಪ್ರಕರಣದಲ್ಲಿ ಪೊಲೀಸರ ಮೇಲೆ ಹಲ್ಲೆ ಆದಾಗ ಎನ್ ಕೌಂಟರ್ ಮಾಡಬೇಕಿತ್ತು. ಮುಸ್ಲಿಮರು ಮೂರು ಕಡೆ ಮೀಸಲಾತಿ ಲಾಭ ಪಡೆದುಕೊಳ್ಳುತ್ತಾರೆ. ಧರ್ಮಾಧಾರಿತ ಮೀಸಲಾತಿ ನಮ್ಮ ದೇಶದಲ್ಲಿ ಇಲ್ಲ. ಯಾವ ಜಾತಿ ಆರ್ಥಿಕವಾಗಿ, ಸಾಮಾಜಿಕ ಹಿಂದುಳಿದಿದೆ, ಅಂಥವರಿಗೆ ಸವಲತ್ತು ಕೊಡಬೇಕೆಂದು ಸಂವಿಧಾನದಲ್ಲಿ ಇದೆ ಎಂದು ಶಾಸಕ ಯತ್ನಾಳ ಹೇಳಿದರು.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 03:14 pm
HK News Staffer
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm