ಬ್ರೇಕಿಂಗ್ ನ್ಯೂಸ್
02-04-26 08:07 pm HK News Staffer ಕರ್ನಾಟಕ
ವಿಜಯಪುರ, ಎಪ್ರಿಲ್ 2: ನಾನು ಮುಖ್ಯಮಂತ್ರಿಯಾಗಿ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರ ಹಾಕುತ್ತೇನೆ. ಇವರ ಬದಲಾಗಿ ಮರಾಠರು, ಬ್ರಾಹ್ಮಣರು, ಕ್ಷತ್ರಿಯರು ಸೇರಿದಂತೆ ಅನೇಕರು ಅಲ್ಪಸಂಖ್ಯಾತರು ಇದ್ದಾರೆ. ಅವರಿಗೆಲ್ಲ ಅಲ್ಪಸಂಖ್ಯಾತ ಸ್ಥಾನಮಾನ ಕೊಡುತ್ತೇನೆ ಎಂದು ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಇಂದು ಹನುಮ ಜಯಂತಿ. ಹನುಮಂತನ ಸನ್ನಿಧಾನದಲ್ಲಿ ನಿಂತು ಹೇಳುತ್ತೇನೆ. ನಾನು ಯಾವುದೇ ಕಾರಣಕ್ಕೂ ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳಿ ಅಂತಾ ಹೇಳಲ್ಲ. ಅಪ್ಪ-ಮಗನನ್ನು ಕೈಬಿಟ್ಟು ಅವರಾಗಿಯೇ ನನ್ನನ್ನು ಬಿಜೆಪಿಗೆ ಬರುವಂತೆ ಆಹ್ವಾನಿಸುತ್ತಾರೆ. ಬಳಿಕ ಸಿಎಂ ಆಗಿ ರಾಜ್ಯದಲ್ಲಿ ಯೋಗಿ ಆದಿತ್ಯನಾಥ್ ರೀತಿ ರಾಜ್ಯಭಾರ ಮಾಡುತ್ತೇನೆ. ರಾಜ್ಯದಲ್ಲಿ ಯೋಗಿ ರೀತಿ ಆಡಳಿತ ಕೊಡುತ್ತೇನೆ ಎಂದು ಹೇಳುವ ಧೈರ್ಯ ಬಿಜೆಪಿಯಲ್ಲಿ ಯಾರಿಗಾದ್ರೂ ಇದೆಯಾ.. ಅದನ್ನು ನಾನು ಮಾತ್ರ ಹೇಳಬಲ್ಲೆ ಎಂದು ಹೇಳಿದರು.
ಬಾಗಲಕೋಟೆಯ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ನನ್ನ ಆತ್ಮೀಯರು. ಅವರ ಪರ ಪ್ರಚಾರ ಮಾಡುವಂತೆ ಬಿಜೆಪಿ ಕಾರ್ಯಕರ್ತರು ನನ್ನನ್ನು ಕರೆದಿದ್ದಾರೆ. ಅದಕ್ಕಾಗಿ ನಾನು ಚರಂತಿಮಠ ಅವರ ಪರ ಪ್ರಚಾರಕ್ಕೆ ಹೋಗುತ್ತಿದ್ದೇನೆ ಎಂದರು.
2028 ರಲ್ಲಿ ಹಿಂದೂ ಸರ್ಕಾರ ಜಾರಿಗೆ ಬಂದೇ ಬರತ್ತೆ ಎಂದು ಹೇಳಿದ ಪಾಟೀಲ, ಮುಸ್ಲಿಂ ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆಗಾಗಿ ಸರ್ಕಾರದಿಂದ ಟ್ರೇನಿಂಗ್ ಕೊಡುತ್ತಾರೆ. ಮುಸ್ಲಿಂ ವಿದ್ಯಾರ್ಥಿಗಳಿಗೆ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಹಣ ಕೊಡುತ್ತಾರೆ. ಹಿಂದುಗಳಿಗೇನು ಕೊಡುತ್ತಾರೆ. ಹೀಗಾಗಿ ಈ ಚುನಾವಣೆಯಲ್ಲಿ ಹಿಂದುಗಳು ಒಗ್ಗಟ್ಟಾಗುತ್ತಾರೆ. ಕಾಂಗ್ರೆಸಿಗೆ ಬುದ್ಧಿ ಕಲಿಸುತ್ತಾರೆ. ಹಿಂದೆ ಕೆಜಿ ಹಳ್ಳಿ, ಡಿಜೆ ಹಳ್ಳಿ ಪ್ರಕರಣದಲ್ಲಿ ಪೊಲೀಸರ ಮೇಲೆ ಹಲ್ಲೆ ಆದಾಗ ಎನ್ ಕೌಂಟರ್ ಮಾಡಬೇಕಿತ್ತು. ಮುಸ್ಲಿಮರು ಮೂರು ಕಡೆ ಮೀಸಲಾತಿ ಲಾಭ ಪಡೆದುಕೊಳ್ಳುತ್ತಾರೆ. ಧರ್ಮಾಧಾರಿತ ಮೀಸಲಾತಿ ನಮ್ಮ ದೇಶದಲ್ಲಿ ಇಲ್ಲ. ಯಾವ ಜಾತಿ ಆರ್ಥಿಕವಾಗಿ, ಸಾಮಾಜಿಕ ಹಿಂದುಳಿದಿದೆ, ಅಂಥವರಿಗೆ ಸವಲತ್ತು ಕೊಡಬೇಕೆಂದು ಸಂವಿಧಾನದಲ್ಲಿ ಇದೆ ಎಂದು ಶಾಸಕ ಯತ್ನಾಳ ಹೇಳಿದರು.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm