ಬ್ರೇಕಿಂಗ್ ನ್ಯೂಸ್
02-04-26 08:07 pm HK News Staffer ಕರ್ನಾಟಕ
ವಿಜಯಪುರ, ಎಪ್ರಿಲ್ 2: ನಾನು ಮುಖ್ಯಮಂತ್ರಿಯಾಗಿ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರ ಹಾಕುತ್ತೇನೆ. ಇವರ ಬದಲಾಗಿ ಮರಾಠರು, ಬ್ರಾಹ್ಮಣರು, ಕ್ಷತ್ರಿಯರು ಸೇರಿದಂತೆ ಅನೇಕರು ಅಲ್ಪಸಂಖ್ಯಾತರು ಇದ್ದಾರೆ. ಅವರಿಗೆಲ್ಲ ಅಲ್ಪಸಂಖ್ಯಾತ ಸ್ಥಾನಮಾನ ಕೊಡುತ್ತೇನೆ ಎಂದು ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಇಂದು ಹನುಮ ಜಯಂತಿ. ಹನುಮಂತನ ಸನ್ನಿಧಾನದಲ್ಲಿ ನಿಂತು ಹೇಳುತ್ತೇನೆ. ನಾನು ಯಾವುದೇ ಕಾರಣಕ್ಕೂ ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳಿ ಅಂತಾ ಹೇಳಲ್ಲ. ಅಪ್ಪ-ಮಗನನ್ನು ಕೈಬಿಟ್ಟು ಅವರಾಗಿಯೇ ನನ್ನನ್ನು ಬಿಜೆಪಿಗೆ ಬರುವಂತೆ ಆಹ್ವಾನಿಸುತ್ತಾರೆ. ಬಳಿಕ ಸಿಎಂ ಆಗಿ ರಾಜ್ಯದಲ್ಲಿ ಯೋಗಿ ಆದಿತ್ಯನಾಥ್ ರೀತಿ ರಾಜ್ಯಭಾರ ಮಾಡುತ್ತೇನೆ. ರಾಜ್ಯದಲ್ಲಿ ಯೋಗಿ ರೀತಿ ಆಡಳಿತ ಕೊಡುತ್ತೇನೆ ಎಂದು ಹೇಳುವ ಧೈರ್ಯ ಬಿಜೆಪಿಯಲ್ಲಿ ಯಾರಿಗಾದ್ರೂ ಇದೆಯಾ.. ಅದನ್ನು ನಾನು ಮಾತ್ರ ಹೇಳಬಲ್ಲೆ ಎಂದು ಹೇಳಿದರು.
ಬಾಗಲಕೋಟೆಯ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ನನ್ನ ಆತ್ಮೀಯರು. ಅವರ ಪರ ಪ್ರಚಾರ ಮಾಡುವಂತೆ ಬಿಜೆಪಿ ಕಾರ್ಯಕರ್ತರು ನನ್ನನ್ನು ಕರೆದಿದ್ದಾರೆ. ಅದಕ್ಕಾಗಿ ನಾನು ಚರಂತಿಮಠ ಅವರ ಪರ ಪ್ರಚಾರಕ್ಕೆ ಹೋಗುತ್ತಿದ್ದೇನೆ ಎಂದರು.
2028 ರಲ್ಲಿ ಹಿಂದೂ ಸರ್ಕಾರ ಜಾರಿಗೆ ಬಂದೇ ಬರತ್ತೆ ಎಂದು ಹೇಳಿದ ಪಾಟೀಲ, ಮುಸ್ಲಿಂ ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆಗಾಗಿ ಸರ್ಕಾರದಿಂದ ಟ್ರೇನಿಂಗ್ ಕೊಡುತ್ತಾರೆ. ಮುಸ್ಲಿಂ ವಿದ್ಯಾರ್ಥಿಗಳಿಗೆ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಹಣ ಕೊಡುತ್ತಾರೆ. ಹಿಂದುಗಳಿಗೇನು ಕೊಡುತ್ತಾರೆ. ಹೀಗಾಗಿ ಈ ಚುನಾವಣೆಯಲ್ಲಿ ಹಿಂದುಗಳು ಒಗ್ಗಟ್ಟಾಗುತ್ತಾರೆ. ಕಾಂಗ್ರೆಸಿಗೆ ಬುದ್ಧಿ ಕಲಿಸುತ್ತಾರೆ. ಹಿಂದೆ ಕೆಜಿ ಹಳ್ಳಿ, ಡಿಜೆ ಹಳ್ಳಿ ಪ್ರಕರಣದಲ್ಲಿ ಪೊಲೀಸರ ಮೇಲೆ ಹಲ್ಲೆ ಆದಾಗ ಎನ್ ಕೌಂಟರ್ ಮಾಡಬೇಕಿತ್ತು. ಮುಸ್ಲಿಮರು ಮೂರು ಕಡೆ ಮೀಸಲಾತಿ ಲಾಭ ಪಡೆದುಕೊಳ್ಳುತ್ತಾರೆ. ಧರ್ಮಾಧಾರಿತ ಮೀಸಲಾತಿ ನಮ್ಮ ದೇಶದಲ್ಲಿ ಇಲ್ಲ. ಯಾವ ಜಾತಿ ಆರ್ಥಿಕವಾಗಿ, ಸಾಮಾಜಿಕ ಹಿಂದುಳಿದಿದೆ, ಅಂಥವರಿಗೆ ಸವಲತ್ತು ಕೊಡಬೇಕೆಂದು ಸಂವಿಧಾನದಲ್ಲಿ ಇದೆ ಎಂದು ಶಾಸಕ ಯತ್ನಾಳ ಹೇಳಿದರು.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm