ಬ್ರೇಕಿಂಗ್ ನ್ಯೂಸ್
02-04-26 09:31 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 02: ಲೋಕಾಯುಕ್ತ ಎಡಿಜಿಪಿ ಮತ್ತು ಎಸ್ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್ ಮತ್ತು ಅವರ ಕುಟುಂಬದ ಮೇಲೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆದರಿಕೆ ಹಾಕಿರುವ ಪ್ರಕರಣವು ರಾಜಿ ಸಂಧಾನ ಹಂತಕ್ಕೆ ಬಂದು ನಿಂತಿದೆ. ಹೈಕೋರ್ಟ್ ನ್ಯಾಯಾಧೀಶರ ಸಲಹೆಯಂತೆ ಇಬ್ಬರ ಪರ ವಕೀಲರು ರಾಜಿ ಮಾತುಕತೆಗೆ ಒಪ್ಪಿದ್ದು, ಮಧ್ಯಸ್ಥಿಕೆದಾರರ ನೇಮಕ ಮತ್ತು ಸಭೆ ದಿನಾಂಕವನ್ನು ಏಪ್ರಿಲ್ 30ಕ್ಕೆ ನಿಗದಿ ಮಾಡಲಾಗಿದೆ.
ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರು ಸಾಯಿ ಮಿನರಲ್ಸ್ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡುವ ಸಂದರ್ಭದಲ್ಲಿ ನಿಯಮ ಉಲ್ಲಂಘನೆ ಮಾಡಿರುವುದಾಗಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಇದಕ್ಕೆ ಪ್ರತಿಯಾಗಿ ನಿಖಿಲ್ ಕುಮಾರಸ್ವಾಮಿ ಮತ್ತು ಶಾಸಕ ಸುರೇಶ್ ಬಾಬು ಕೆಲವೊಂದು ಆರೋಪಗಳನ್ನು ಚಂದ್ರಶೇಖರ್ ವಿರುದ್ಧ ಮಾಡಿದ್ದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.
ಈ ಬಗ್ಗೆ ಚಂದ್ರಶೇಖರ್ ಅವರು ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿ, ತಮ್ಮ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ಬೆದರಿಕೆ ಹಾಕುತ್ತಿರುವುದಾಗಿ ಆರೋಪಿಸಿದ್ದರು. ಪೊಲೀಸರು ಭಾರತೀಯ ದಂಡ ಸಂಹಿತೆ ಸೆಕ್ಷನ್ 223 ಮತ್ತು 224 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಬಳಿಕ ಕುಮಾರಸ್ವಾಮಿ ಕಡೆಯಿಂದ ಹೈಕೋರ್ಟ್ ಮೆಟ್ಟಿಲೇರಿದ್ದಲ್ಲದೆ, ತಮ್ಮ ಮೇಲಿನ ಪ್ರಕರಣವನ್ನು ರದ್ದುಪಡಿಸಲು ಕೇಳಿಕೊಂಡಿದ್ದರು.
ಪ್ರಕರಣವನ್ನು ಪರಿಶೀಲಿಸಿದ ಹೈಕೋರ್ಟ್ ನ್ಯಾಯಾಧೀಶರು, ಇಬ್ಬರ ಪ್ರತಿಷ್ಠೆಯ ಕಾರಣಕ್ಕೆ ನೀಡಿರುವ ದೂರು ಎಂದು ಪರಿಗಣಿಸಿ ರಾಜಿ ಸಂಧಾನದ ಮೂಲಕ ವಿವಾದ ಬಗೆಹರಿಸಿಕೊಳ್ಳುವಂತೆ ಸೂಚಿಸಿದ್ದರು. ಈಗ ಎರಡೂ ಕಡೆಯ ವಕೀಲರು ರಾಜಿ ಸಂಧಾನ ಮಾತುಕತೆಗೆ ಸಮ್ಮತಿಸಿದ್ದು, ಹೈಕೋರ್ಟ್ ರಾಜಿ ಸಂಧಾನಕ್ಕೆ ಏಪ್ರಿಲ್ 30ಕ್ಕೆ ದಿನಾಂಕ ಫಿಕ್ಸ್ ಮಾಡಿದೆ. ವಿವಾದವು ರಾಜ್ಯದ ಗಮನ ಸೆಳೆದಿದ್ದು, ರಾಜಕಾರಣಿಗಳು ಮತ್ತು ಐಪಿಎಸ್ ಅಧಿಕಾರಿ ನಡುವಿನ ಜಟಾಪಟಿ ನಗೆಪಾಟಲಿಗೆ ಕಾರಣವಾಗಿತ್ತು.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm