ಬ್ರೇಕಿಂಗ್ ನ್ಯೂಸ್
03-04-26 04:14 pm HK News Staffer ಕರ್ನಾಟಕ
ನವದೆಹಲಿ, ಎಪ್ರಿಲ್ 3: ಪಶ್ಚಿಮ ಏಷ್ಯಾ ಸಂಘರ್ಷದ ಸಂದರ್ಭವನ್ನು ಭಾರತ ನಿರ್ವಹಿಸಿದ ರೀತಿಯನ್ನು ವಿಪಕ್ಷ ಕಾಂಗ್ರೆಸ್ ಟೀಕಿಸುತ್ತಿದ್ದರೆ, ಪಕ್ಷದ ಹಿರಿಯ ನಾಯಕರೊಬ್ಬರು ಕೇಂದ್ರ ಸರ್ಕಾರವನ್ನು ಹಾಡಿ ಹೊಗಳುವ ಮೂಲಕ ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದಾರೆ. ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಭಾರತದ ರಾಜತಾಂತ್ರಿಕ ನಿರ್ವಹಣೆಯನ್ನು “ಪ್ರೌಢ ಮತ್ತು ನಿಪುಣ” ಎಂದು ಕೊಂಡಾಡಿದ್ದಾರೆ.
ಸರ್ಕಾರದ ನಡೆ ದೇಶವನ್ನು ಅನೇಕ “ಸಂಭಾವ್ಯ ಸವಾಲುಗಳು ಮತ್ತು ಅಪಾಯಗಳಿಂದ” ದೂರವಿರಿಸಲು ಸಹಾಯ ಮಾಡಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಭಾರತವು ಗ್ಲೋಬಲ್ ಸೌತ್ ರಾಷ್ಟ್ರಗಳು ಹಾಗೂ ತಂತ್ರಜ್ಞಾನದ ದೃಷ್ಟಿಯಿಂದ ಪ್ರಮುಖ ಸಹಭಾಗಿತ್ವ ಹೊಂದಿರುವ ದೇಶಗಳನ್ನು ಒಗ್ಗೂಡಿಸಿ, ಆ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಪುನಃ ಸ್ಥಾಪಿಸಲು ಮುಂಚೂಣಿಯಲ್ಲಿ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.
ಸಂಕಷ್ಟದ ಈ ಅವಧಿಯಲ್ಲಿ ಭಾರತದ ರಾಜತಾಂತ್ರಿಕ ಹಸ್ತಕ್ಷೇಪ ನೈಪುಣ್ಯತೆಯನ್ನು ತೋರಿಸಿದೆ, ಅನೇಕ ಸಾಧ್ಯತೆಯ ಮೈನ್ಫೀಲ್ಡ್ಗಳನ್ನು (ಅಪಾಯಕರ ಪರಿಸ್ಥಿತಿಗಳನ್ನು) ತಪ್ಪಿಸಿದೆ” ಎಂದು ಹೇಳಿದರು. ಭಾರತದ ಪ್ರತಿಕ್ರಿಯೆಗೆ ರಾಷ್ಟ್ರೀಯ ಒಗ್ಗಟ್ಟು ಮತ್ತು ದೃಢಸಂಕಲ್ಪದ ಬೆಂಬಲ ಅಗತ್ಯ. ಅನಿಶ್ಚಿತತೆ ಮತ್ತು ಅಸ್ಥಿರತೆಯಿಂದ ಕೂಡಿದ ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಎಲ್ಲಾ ಪಕ್ಷಗಳ ಸಭೆಯನ್ನು ಕರೆದಿದ್ದು, ರಾಜಕೀಯ ಪಕ್ಷಗಳ ನಾಯಕರಿಗೆ ಪರಿಸ್ಥಿತಿ ಮತ್ತು ನೀತಿ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದೆ” ಎಂದು ಅವರು ಹೇಳಿದರು. ಈ ರೀತಿಯ ರಾಷ್ಟ್ರೀಯ ಸಂವಾದ ನಿರಂತರವಾಗಿರಬೇಕು. ರಾಷ್ಟ್ರೀಯ ಹಿತಾಸಕ್ತಿಯನ್ನು ಕೇಂದ್ರವಾಗಿಟ್ಟು ಪ್ರೌಢ, ಜವಾಬ್ದಾರಿಯುತ ಪ್ರತಿಕ್ರಿಯೆ ಮತ್ತು ರಾಷ್ಟ್ರೀಯ ಏಕತೆ ಇಂದಿನ ಅವಶ್ಯಕತೆ” ಎಂದು ಕಾಂಗ್ರೆಸ್ ನಾಯಕರು ತಮ್ಮ ಹೇಳಿಕೆಯಲ್ಲಿ ಒತ್ತಿ ಹೇಳಿದರು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm