ಬ್ರೇಕಿಂಗ್ ನ್ಯೂಸ್
03-04-26 04:14 pm HK News Staffer ಕರ್ನಾಟಕ
ನವದೆಹಲಿ, ಎಪ್ರಿಲ್ 3: ಪಶ್ಚಿಮ ಏಷ್ಯಾ ಸಂಘರ್ಷದ ಸಂದರ್ಭವನ್ನು ಭಾರತ ನಿರ್ವಹಿಸಿದ ರೀತಿಯನ್ನು ವಿಪಕ್ಷ ಕಾಂಗ್ರೆಸ್ ಟೀಕಿಸುತ್ತಿದ್ದರೆ, ಪಕ್ಷದ ಹಿರಿಯ ನಾಯಕರೊಬ್ಬರು ಕೇಂದ್ರ ಸರ್ಕಾರವನ್ನು ಹಾಡಿ ಹೊಗಳುವ ಮೂಲಕ ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದಾರೆ. ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಭಾರತದ ರಾಜತಾಂತ್ರಿಕ ನಿರ್ವಹಣೆಯನ್ನು “ಪ್ರೌಢ ಮತ್ತು ನಿಪುಣ” ಎಂದು ಕೊಂಡಾಡಿದ್ದಾರೆ.
ಸರ್ಕಾರದ ನಡೆ ದೇಶವನ್ನು ಅನೇಕ “ಸಂಭಾವ್ಯ ಸವಾಲುಗಳು ಮತ್ತು ಅಪಾಯಗಳಿಂದ” ದೂರವಿರಿಸಲು ಸಹಾಯ ಮಾಡಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಭಾರತವು ಗ್ಲೋಬಲ್ ಸೌತ್ ರಾಷ್ಟ್ರಗಳು ಹಾಗೂ ತಂತ್ರಜ್ಞಾನದ ದೃಷ್ಟಿಯಿಂದ ಪ್ರಮುಖ ಸಹಭಾಗಿತ್ವ ಹೊಂದಿರುವ ದೇಶಗಳನ್ನು ಒಗ್ಗೂಡಿಸಿ, ಆ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಪುನಃ ಸ್ಥಾಪಿಸಲು ಮುಂಚೂಣಿಯಲ್ಲಿ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.
ಸಂಕಷ್ಟದ ಈ ಅವಧಿಯಲ್ಲಿ ಭಾರತದ ರಾಜತಾಂತ್ರಿಕ ಹಸ್ತಕ್ಷೇಪ ನೈಪುಣ್ಯತೆಯನ್ನು ತೋರಿಸಿದೆ, ಅನೇಕ ಸಾಧ್ಯತೆಯ ಮೈನ್ಫೀಲ್ಡ್ಗಳನ್ನು (ಅಪಾಯಕರ ಪರಿಸ್ಥಿತಿಗಳನ್ನು) ತಪ್ಪಿಸಿದೆ” ಎಂದು ಹೇಳಿದರು. ಭಾರತದ ಪ್ರತಿಕ್ರಿಯೆಗೆ ರಾಷ್ಟ್ರೀಯ ಒಗ್ಗಟ್ಟು ಮತ್ತು ದೃಢಸಂಕಲ್ಪದ ಬೆಂಬಲ ಅಗತ್ಯ. ಅನಿಶ್ಚಿತತೆ ಮತ್ತು ಅಸ್ಥಿರತೆಯಿಂದ ಕೂಡಿದ ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಎಲ್ಲಾ ಪಕ್ಷಗಳ ಸಭೆಯನ್ನು ಕರೆದಿದ್ದು, ರಾಜಕೀಯ ಪಕ್ಷಗಳ ನಾಯಕರಿಗೆ ಪರಿಸ್ಥಿತಿ ಮತ್ತು ನೀತಿ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದೆ” ಎಂದು ಅವರು ಹೇಳಿದರು. ಈ ರೀತಿಯ ರಾಷ್ಟ್ರೀಯ ಸಂವಾದ ನಿರಂತರವಾಗಿರಬೇಕು. ರಾಷ್ಟ್ರೀಯ ಹಿತಾಸಕ್ತಿಯನ್ನು ಕೇಂದ್ರವಾಗಿಟ್ಟು ಪ್ರೌಢ, ಜವಾಬ್ದಾರಿಯುತ ಪ್ರತಿಕ್ರಿಯೆ ಮತ್ತು ರಾಷ್ಟ್ರೀಯ ಏಕತೆ ಇಂದಿನ ಅವಶ್ಯಕತೆ” ಎಂದು ಕಾಂಗ್ರೆಸ್ ನಾಯಕರು ತಮ್ಮ ಹೇಳಿಕೆಯಲ್ಲಿ ಒತ್ತಿ ಹೇಳಿದರು.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am