ಬ್ರೇಕಿಂಗ್ ನ್ಯೂಸ್
03-04-26 04:14 pm HK News Staffer ಕರ್ನಾಟಕ
ನವದೆಹಲಿ, ಎಪ್ರಿಲ್ 3: ಪಶ್ಚಿಮ ಏಷ್ಯಾ ಸಂಘರ್ಷದ ಸಂದರ್ಭವನ್ನು ಭಾರತ ನಿರ್ವಹಿಸಿದ ರೀತಿಯನ್ನು ವಿಪಕ್ಷ ಕಾಂಗ್ರೆಸ್ ಟೀಕಿಸುತ್ತಿದ್ದರೆ, ಪಕ್ಷದ ಹಿರಿಯ ನಾಯಕರೊಬ್ಬರು ಕೇಂದ್ರ ಸರ್ಕಾರವನ್ನು ಹಾಡಿ ಹೊಗಳುವ ಮೂಲಕ ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದಾರೆ. ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಭಾರತದ ರಾಜತಾಂತ್ರಿಕ ನಿರ್ವಹಣೆಯನ್ನು “ಪ್ರೌಢ ಮತ್ತು ನಿಪುಣ” ಎಂದು ಕೊಂಡಾಡಿದ್ದಾರೆ.
ಸರ್ಕಾರದ ನಡೆ ದೇಶವನ್ನು ಅನೇಕ “ಸಂಭಾವ್ಯ ಸವಾಲುಗಳು ಮತ್ತು ಅಪಾಯಗಳಿಂದ” ದೂರವಿರಿಸಲು ಸಹಾಯ ಮಾಡಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಭಾರತವು ಗ್ಲೋಬಲ್ ಸೌತ್ ರಾಷ್ಟ್ರಗಳು ಹಾಗೂ ತಂತ್ರಜ್ಞಾನದ ದೃಷ್ಟಿಯಿಂದ ಪ್ರಮುಖ ಸಹಭಾಗಿತ್ವ ಹೊಂದಿರುವ ದೇಶಗಳನ್ನು ಒಗ್ಗೂಡಿಸಿ, ಆ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಪುನಃ ಸ್ಥಾಪಿಸಲು ಮುಂಚೂಣಿಯಲ್ಲಿ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.
ಸಂಕಷ್ಟದ ಈ ಅವಧಿಯಲ್ಲಿ ಭಾರತದ ರಾಜತಾಂತ್ರಿಕ ಹಸ್ತಕ್ಷೇಪ ನೈಪುಣ್ಯತೆಯನ್ನು ತೋರಿಸಿದೆ, ಅನೇಕ ಸಾಧ್ಯತೆಯ ಮೈನ್ಫೀಲ್ಡ್ಗಳನ್ನು (ಅಪಾಯಕರ ಪರಿಸ್ಥಿತಿಗಳನ್ನು) ತಪ್ಪಿಸಿದೆ” ಎಂದು ಹೇಳಿದರು. ಭಾರತದ ಪ್ರತಿಕ್ರಿಯೆಗೆ ರಾಷ್ಟ್ರೀಯ ಒಗ್ಗಟ್ಟು ಮತ್ತು ದೃಢಸಂಕಲ್ಪದ ಬೆಂಬಲ ಅಗತ್ಯ. ಅನಿಶ್ಚಿತತೆ ಮತ್ತು ಅಸ್ಥಿರತೆಯಿಂದ ಕೂಡಿದ ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಎಲ್ಲಾ ಪಕ್ಷಗಳ ಸಭೆಯನ್ನು ಕರೆದಿದ್ದು, ರಾಜಕೀಯ ಪಕ್ಷಗಳ ನಾಯಕರಿಗೆ ಪರಿಸ್ಥಿತಿ ಮತ್ತು ನೀತಿ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದೆ” ಎಂದು ಅವರು ಹೇಳಿದರು. ಈ ರೀತಿಯ ರಾಷ್ಟ್ರೀಯ ಸಂವಾದ ನಿರಂತರವಾಗಿರಬೇಕು. ರಾಷ್ಟ್ರೀಯ ಹಿತಾಸಕ್ತಿಯನ್ನು ಕೇಂದ್ರವಾಗಿಟ್ಟು ಪ್ರೌಢ, ಜವಾಬ್ದಾರಿಯುತ ಪ್ರತಿಕ್ರಿಯೆ ಮತ್ತು ರಾಷ್ಟ್ರೀಯ ಏಕತೆ ಇಂದಿನ ಅವಶ್ಯಕತೆ” ಎಂದು ಕಾಂಗ್ರೆಸ್ ನಾಯಕರು ತಮ್ಮ ಹೇಳಿಕೆಯಲ್ಲಿ ಒತ್ತಿ ಹೇಳಿದರು.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm