ಬ್ರೇಕಿಂಗ್ ನ್ಯೂಸ್
04-04-26 07:33 pm HK News Staffer ಕರ್ನಾಟಕ
ನವದೆಹಲಿ, ಎಪ್ರಿಲ್ 4: ಟೋಲ್ ಬೂತ್ಗಳಲ್ಲಿ ನಗದು ಪಾವತಿಯನ್ನು ಸ್ಥಗಿತಗೊಳಿಸುವ ಕುರಿತಂತೆ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಗುರುವಾರ ಅಧಿಸೂಚನೆ ಹೊರಡಿಸಿದೆ. ಏಪ್ರಿಲ್ 10ರಿಂದ ಜಾರಿಗೆ ಬರಲಿದ್ದು ಟೋಲ್ ಪ್ಲಾಜಾಗಳಲ್ಲಿ ವಾಹನ ಸಾಲು ಮತ್ತು ಪ್ರಯಾಣಿಕ-ಸಿಬ್ಬಂದಿ ನಡುವಿನ ಸಂಘರ್ಷವನ್ನು ತಡೆಯಲು ಉದ್ದೇಶಿಸಿದೆ.
ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್ಪ್ರೆಸ್ ವೇಗಳಲ್ಲಿ ಪ್ರಯಾಣಿಸುವ ಎಲ್ಲಾ ವಾಹನಗಳು ನಗದು ಬದಲು ಫಾಸ್ಟ್ ಟ್ಯಾಗ್ ಅಥವಾ ಯುಪಿಐ ಮೂಲಕ ಮಾತ್ರವೇ ಶುಲ್ಕ ಪಾವತಿಸಬೇಕು. ಈಗಾಗಲೇ ಸರ್ಕಾರಿ ಇಲಾಖೆಗಳು, ಸಂಸ್ಥೆಗಳು ಮತ್ತು ಕಚೇರಿ ಉದ್ಯೋಗಿಗಳಿಗೆ ವಾರ್ಷಿಕ ಫಾಸ್ಟ್ಟ್ಯಾಗ್ ಪಡೆಯುವಂತೆ ಸೂಚಿಸಲಾಗಿದೆ. ವಿನಾಯ್ತಿ ವರ್ಗದಲ್ಲಿ ಬರುವ ಎಲ್ಲಾ ವಾಹನಗಳು ಸಹ ಈ ನಿಯಮವನ್ನು ಪಾಲಿಸಬೇಕಾಗುತ್ತದೆ. ಖಾಸಗಿ ವಾಹನಗಳಿಗೆ ವಾರ್ಷಿಕ ಫಾಸ್ಟ್ಟ್ಯಾಗ್ ಶುಲ್ಕ 3075 ರೂ. ಆಗಿದ್ದು, 200 ಟೋಲ್ ಪ್ಲಾಜಾಗಳಲ್ಲಿ ಪ್ರಯಾಣ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಫಾಸ್ಟ್ಟ್ಯಾಗ್ ಇಲ್ಲದ ವಾಹನಗಳಿಗೆ ಟೋಲ್ ಶುಲ್ಕವನ್ನು ಯುಪಿಐ ಮೂಲಕ ಪಾವತಿಸುವ ವ್ಯವಸ್ಥೆ ಇದ್ದರೂ, ಪಾವತಿ ನಿರಾಕರಿಸಿದರೆ ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಾವಳಿಯ 14ನೇ ನಿಯಮದ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಅಗತ್ಯವಿದ್ದರೆ ಟೋಲ್ ಪ್ಲಾಜಾಗಳ ಪ್ರವೇಶ ನಿರ್ಬಂಧಿಸುವ ಹಕ್ಕು ಮತ್ತು ರಾಷ್ಟ್ರೀಯ ಹೆದ್ದಾರಿ ಸೆಕ್ಷನ್ನಿಂದ ವಾಹನವನ್ನು ತೆರವುಗೊಳಿಸುವ ಕ್ರಮವೂ ಕೈಗೊಳ್ಳಬಹುದು.
ಸಂಚಾರ ಸುಗಮ, ವ್ಯವಸ್ಥೆಯ ದಕ್ಷ ನಿರ್ವಹಣೆ ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಕೇಂದ್ರೀಕರಿಸಿ ಹೊರಡಿಸಲಾದ ಈ ಹೊಸ ನಿಯಮವು, ಫಾಸ್ಟ್ ಟ್ಯಾಗ್ ಮತ್ತು ಯುಪಿಐ ಪಾವತಿಯನ್ನು ಹೆಚ್ಚಿಸುವ ಮೂಲಕ, ರಾಷ್ಟ್ರೀಯ ಹೆದ್ದಾರಿ ಸೌಲಭ್ಯಗಳನ್ನು ಮುಂದಿನ ಹಂತದಲ್ಲಿ ಸುಧಾರಿಸಲು ಸಹಾಯಕವಾಗಲಿದೆ.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm