ಬ್ರೇಕಿಂಗ್ ನ್ಯೂಸ್
04-04-26 07:33 pm HK News Staffer ಕರ್ನಾಟಕ
ನವದೆಹಲಿ, ಎಪ್ರಿಲ್ 4: ಟೋಲ್ ಬೂತ್ಗಳಲ್ಲಿ ನಗದು ಪಾವತಿಯನ್ನು ಸ್ಥಗಿತಗೊಳಿಸುವ ಕುರಿತಂತೆ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಗುರುವಾರ ಅಧಿಸೂಚನೆ ಹೊರಡಿಸಿದೆ. ಏಪ್ರಿಲ್ 10ರಿಂದ ಜಾರಿಗೆ ಬರಲಿದ್ದು ಟೋಲ್ ಪ್ಲಾಜಾಗಳಲ್ಲಿ ವಾಹನ ಸಾಲು ಮತ್ತು ಪ್ರಯಾಣಿಕ-ಸಿಬ್ಬಂದಿ ನಡುವಿನ ಸಂಘರ್ಷವನ್ನು ತಡೆಯಲು ಉದ್ದೇಶಿಸಿದೆ.
ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್ಪ್ರೆಸ್ ವೇಗಳಲ್ಲಿ ಪ್ರಯಾಣಿಸುವ ಎಲ್ಲಾ ವಾಹನಗಳು ನಗದು ಬದಲು ಫಾಸ್ಟ್ ಟ್ಯಾಗ್ ಅಥವಾ ಯುಪಿಐ ಮೂಲಕ ಮಾತ್ರವೇ ಶುಲ್ಕ ಪಾವತಿಸಬೇಕು. ಈಗಾಗಲೇ ಸರ್ಕಾರಿ ಇಲಾಖೆಗಳು, ಸಂಸ್ಥೆಗಳು ಮತ್ತು ಕಚೇರಿ ಉದ್ಯೋಗಿಗಳಿಗೆ ವಾರ್ಷಿಕ ಫಾಸ್ಟ್ಟ್ಯಾಗ್ ಪಡೆಯುವಂತೆ ಸೂಚಿಸಲಾಗಿದೆ. ವಿನಾಯ್ತಿ ವರ್ಗದಲ್ಲಿ ಬರುವ ಎಲ್ಲಾ ವಾಹನಗಳು ಸಹ ಈ ನಿಯಮವನ್ನು ಪಾಲಿಸಬೇಕಾಗುತ್ತದೆ. ಖಾಸಗಿ ವಾಹನಗಳಿಗೆ ವಾರ್ಷಿಕ ಫಾಸ್ಟ್ಟ್ಯಾಗ್ ಶುಲ್ಕ 3075 ರೂ. ಆಗಿದ್ದು, 200 ಟೋಲ್ ಪ್ಲಾಜಾಗಳಲ್ಲಿ ಪ್ರಯಾಣ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಫಾಸ್ಟ್ಟ್ಯಾಗ್ ಇಲ್ಲದ ವಾಹನಗಳಿಗೆ ಟೋಲ್ ಶುಲ್ಕವನ್ನು ಯುಪಿಐ ಮೂಲಕ ಪಾವತಿಸುವ ವ್ಯವಸ್ಥೆ ಇದ್ದರೂ, ಪಾವತಿ ನಿರಾಕರಿಸಿದರೆ ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಾವಳಿಯ 14ನೇ ನಿಯಮದ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಅಗತ್ಯವಿದ್ದರೆ ಟೋಲ್ ಪ್ಲಾಜಾಗಳ ಪ್ರವೇಶ ನಿರ್ಬಂಧಿಸುವ ಹಕ್ಕು ಮತ್ತು ರಾಷ್ಟ್ರೀಯ ಹೆದ್ದಾರಿ ಸೆಕ್ಷನ್ನಿಂದ ವಾಹನವನ್ನು ತೆರವುಗೊಳಿಸುವ ಕ್ರಮವೂ ಕೈಗೊಳ್ಳಬಹುದು.
ಸಂಚಾರ ಸುಗಮ, ವ್ಯವಸ್ಥೆಯ ದಕ್ಷ ನಿರ್ವಹಣೆ ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಕೇಂದ್ರೀಕರಿಸಿ ಹೊರಡಿಸಲಾದ ಈ ಹೊಸ ನಿಯಮವು, ಫಾಸ್ಟ್ ಟ್ಯಾಗ್ ಮತ್ತು ಯುಪಿಐ ಪಾವತಿಯನ್ನು ಹೆಚ್ಚಿಸುವ ಮೂಲಕ, ರಾಷ್ಟ್ರೀಯ ಹೆದ್ದಾರಿ ಸೌಲಭ್ಯಗಳನ್ನು ಮುಂದಿನ ಹಂತದಲ್ಲಿ ಸುಧಾರಿಸಲು ಸಹಾಯಕವಾಗಲಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm