ಬ್ರೇಕಿಂಗ್ ನ್ಯೂಸ್
04-04-26 07:33 pm HK News Staffer ಕರ್ನಾಟಕ
ನವದೆಹಲಿ, ಎಪ್ರಿಲ್ 4: ಟೋಲ್ ಬೂತ್ಗಳಲ್ಲಿ ನಗದು ಪಾವತಿಯನ್ನು ಸ್ಥಗಿತಗೊಳಿಸುವ ಕುರಿತಂತೆ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಗುರುವಾರ ಅಧಿಸೂಚನೆ ಹೊರಡಿಸಿದೆ. ಏಪ್ರಿಲ್ 10ರಿಂದ ಜಾರಿಗೆ ಬರಲಿದ್ದು ಟೋಲ್ ಪ್ಲಾಜಾಗಳಲ್ಲಿ ವಾಹನ ಸಾಲು ಮತ್ತು ಪ್ರಯಾಣಿಕ-ಸಿಬ್ಬಂದಿ ನಡುವಿನ ಸಂಘರ್ಷವನ್ನು ತಡೆಯಲು ಉದ್ದೇಶಿಸಿದೆ.
ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್ಪ್ರೆಸ್ ವೇಗಳಲ್ಲಿ ಪ್ರಯಾಣಿಸುವ ಎಲ್ಲಾ ವಾಹನಗಳು ನಗದು ಬದಲು ಫಾಸ್ಟ್ ಟ್ಯಾಗ್ ಅಥವಾ ಯುಪಿಐ ಮೂಲಕ ಮಾತ್ರವೇ ಶುಲ್ಕ ಪಾವತಿಸಬೇಕು. ಈಗಾಗಲೇ ಸರ್ಕಾರಿ ಇಲಾಖೆಗಳು, ಸಂಸ್ಥೆಗಳು ಮತ್ತು ಕಚೇರಿ ಉದ್ಯೋಗಿಗಳಿಗೆ ವಾರ್ಷಿಕ ಫಾಸ್ಟ್ಟ್ಯಾಗ್ ಪಡೆಯುವಂತೆ ಸೂಚಿಸಲಾಗಿದೆ. ವಿನಾಯ್ತಿ ವರ್ಗದಲ್ಲಿ ಬರುವ ಎಲ್ಲಾ ವಾಹನಗಳು ಸಹ ಈ ನಿಯಮವನ್ನು ಪಾಲಿಸಬೇಕಾಗುತ್ತದೆ. ಖಾಸಗಿ ವಾಹನಗಳಿಗೆ ವಾರ್ಷಿಕ ಫಾಸ್ಟ್ಟ್ಯಾಗ್ ಶುಲ್ಕ 3075 ರೂ. ಆಗಿದ್ದು, 200 ಟೋಲ್ ಪ್ಲಾಜಾಗಳಲ್ಲಿ ಪ್ರಯಾಣ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಫಾಸ್ಟ್ಟ್ಯಾಗ್ ಇಲ್ಲದ ವಾಹನಗಳಿಗೆ ಟೋಲ್ ಶುಲ್ಕವನ್ನು ಯುಪಿಐ ಮೂಲಕ ಪಾವತಿಸುವ ವ್ಯವಸ್ಥೆ ಇದ್ದರೂ, ಪಾವತಿ ನಿರಾಕರಿಸಿದರೆ ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಾವಳಿಯ 14ನೇ ನಿಯಮದ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಅಗತ್ಯವಿದ್ದರೆ ಟೋಲ್ ಪ್ಲಾಜಾಗಳ ಪ್ರವೇಶ ನಿರ್ಬಂಧಿಸುವ ಹಕ್ಕು ಮತ್ತು ರಾಷ್ಟ್ರೀಯ ಹೆದ್ದಾರಿ ಸೆಕ್ಷನ್ನಿಂದ ವಾಹನವನ್ನು ತೆರವುಗೊಳಿಸುವ ಕ್ರಮವೂ ಕೈಗೊಳ್ಳಬಹುದು.
ಸಂಚಾರ ಸುಗಮ, ವ್ಯವಸ್ಥೆಯ ದಕ್ಷ ನಿರ್ವಹಣೆ ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಕೇಂದ್ರೀಕರಿಸಿ ಹೊರಡಿಸಲಾದ ಈ ಹೊಸ ನಿಯಮವು, ಫಾಸ್ಟ್ ಟ್ಯಾಗ್ ಮತ್ತು ಯುಪಿಐ ಪಾವತಿಯನ್ನು ಹೆಚ್ಚಿಸುವ ಮೂಲಕ, ರಾಷ್ಟ್ರೀಯ ಹೆದ್ದಾರಿ ಸೌಲಭ್ಯಗಳನ್ನು ಮುಂದಿನ ಹಂತದಲ್ಲಿ ಸುಧಾರಿಸಲು ಸಹಾಯಕವಾಗಲಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 03:14 pm
HK News Staffer
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm