ಬ್ರೇಕಿಂಗ್ ನ್ಯೂಸ್
04-01-21 01:20 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಜ.4 : ರಾತ್ರಿ ರಿಸೆಪ್ಷನ್ ವೇಳೆಗೆ ಹಾಜರಿದ್ದ ವರ ಬೆಳಿಗ್ಗೆ ಮುಹೂರ್ತದ ಹೊತ್ತಲ್ಲಿ ನಾಪತ್ತೆಯಾಗಿದ್ದ. ಮದುವೆ ಮಂಟಪದಲ್ಲಿ ಸಿದ್ದವಾಗಿ ನಿಂತಿದ್ದ ಯುವತಿ ಗೋಳಿಡುವಂತಾಗಿತ್ತು. ಗೋಳು ಕೇಳಿದ ಬೆಂಗಳೂರಿನ ಬಿಎಂಟಿಸಿ ಬಸ್ ಕಂಡಕ್ಟರ್ ಯುವತಿಗೆ ತಾಳಿಕಟ್ಟಿ ಬಾಳು ನೀಡಿದ್ದಾನೆ.
ಇಲ್ಲಿನ ತರೀಕೆರೆ ತಾಲೂಕಿನ ದೋರನಾಳು ಗ್ರಾಮದ ಅಶೋಕ್ ಮತ್ತು ನವೀನ್ ಎಂಬ ಸಹೋದರರಿಬ್ಬರಿಗೆ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯಿಂದ ಹುಡುಗಿ ನಿಶ್ಚಯವಾಗಿತ್ತು. ಅದರಂತೆ ಹಿಂದಿನ ದಿನ ರಾತ್ರಿ ರಿಸೆಪ್ಷನ್ ನಡೆದಿತ್ತು. ರಾತ್ರಿ ಇದ್ದ ವರ ನವೀನ್ ಬೆಳಗ್ಗೆ ಮುಹೂರ್ತದ ಹೊತ್ತಿನಲ್ಲೇ ನಾಪತ್ತೆಯಾಗಿದ್ದ.
ವಿಷಯ ತಿಳಿಯುತ್ತಿದ್ದಂತೆ ಸೇರಿದ್ದ ಜನರೆಲ್ಲ ದಿಕ್ಕು ತೋಚದೆ ಮಾತಾಡುತ್ತಿದ್ದರು. ಇದೇ ವೇಳೆ, ಮದುವೆಗೆ ಬಂದಿದ್ದ ಬೆಂಗಳೂರಿನ ಬಿಎಂಟಿಸಿ ಕಂಡಕ್ಟರ್ ಚಂದ್ರು ಎಂಬವರು ಯುವತಿಯನ್ನು ವರಿಸಲು ಮುಂದಾಗಿದ್ದಾರೆ. ಮದುವೆಗೆ ಸಿದ್ಧಳಾಗಿ ಮಂಟಪವೇರಿದ್ದ ಸಿಂಧು ಎಂಬ ಯುವತಿಯನ್ನು ಕೊನೇ ಕ್ಷಣದಲ್ಲಿ ತಾಳಿಕಟ್ಟಿ ಅಚ್ಚರಿ ಮೂಡಿಸಿದ್ದಾರೆ.

ನವೀನ್ ಬೇರೆ ಹುಡುಗಿಯನ್ನು ಪ್ರೀತಿಸುತ್ತಿದ್ದ. ನನ್ನನ್ನು ಬಿಟ್ಟು ಬೇರೆ ಹುಡುಗಿಯನ್ನು ಮದುವೆಯಾದರೆ ಮದುವೆ ಮಂಟಪಕ್ಕೆ ಬಂದು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನವೀನ್ ಗೆಳತಿ ಬೆದರಿಕೆ ಹಾಕಿದ್ದಳು. ಇದರಿಂದ ಮರ್ಯಾದೆ ಮತ್ತು ಗೌರವ ಮಣ್ಣು ಪಾಲಾಗುತ್ತದೆ ಎಂದು ನವೀನ್ ದಿಢೀರ್ ನಾಪತ್ತೆಯಾಗಿದ್ದ. ಅಲ್ಲದೆ, ಪ್ರೀತಿಸುತ್ತಿದ್ದ ಯುವತಿಯನ್ನು ತುಮಕೂರಿಗೆ ಬರಲು ತಿಳಿಸಿ ಮದುವೆ ಮಂಟಪದಿಂದಲೇ ಪರಾರಿಯಾಗಿದ್ದ ಎಂದು ತಿಳಿದು ಬಂದಿದೆ.
ಇದರಿಂದ ಮಧುಮಗಳಾಗಿ ಸಿಂಗಾರಗೊಂಡಿದ್ದ ಸಿಂಧು ಮಂಟಪದಲ್ಲಿ ಕಣ್ಣಿರು ಹಾಕುವಂತಾಗಿತ್ತು. ಆಕೆಯ ಹೆತ್ತವರು, ಸಂಬಂಧಿಕರೆಲ್ಲ ಗೋಳಿಡುವುದನ್ನು ನೋಡಿದ ಯುವಕ ಚಂದ್ರು, ತಾನೇ ಯಾಕೆ ಮದುವೆಯಾಗಬಾರದೆಂದು ಮುಂದೆ ಬಂದಿದ್ದಾನೆ. ಇನ್ನೇನು ಹಸೆಮಣೆ ಏರುವ ಹೊತ್ತಲ್ಲಿ ಆತಂಕಕ್ಕೆ ಒಳಗಾಗಿದ್ದ ಸಿಂಧುಗೆ ಚಂದ್ರು ಹೊಸ ಬದುಕು ನೀಡಿದ್ದಾನೆ. ಸಿಂಧು ಬಾಳಲ್ಲಿ ಚಂದ್ರು ಹೊಸ ಬೆಳಕು ನೀಡಿದ್ದು ಸೇರಿದ್ದ ಜನರಲ್ಲಿ ಸಂತಸ ಮೂಡಿಸಿತ್ತು.
Groom went missing on the day of Wedding in Chikmagalur but surprisingly a BMTC conductor bestowed life to the girl by winning the hearts of the people.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm