ಬ್ರೇಕಿಂಗ್ ನ್ಯೂಸ್
05-04-26 07:24 pm HK News Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 5: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಯುವತಿ ಜಿ.ಎಸ್.ಶರಣ್ಯಾ (36) ನಾಪತ್ತೆಯಾಗಿ ಮೂರು ದಿನ ಕಳೆದರೂ ಆಕೆಯ ಸುಳಿವು ಸಿಗದ ಕಾರಣ ಪತ್ತೆಗಾಗಿ ಎಲ್ಲ ರೀತಿಯ ಸಾಮರ್ಥ್ಯ ಬಳಸಿಕೊಂಡು ಶೋಧ ನಡೆಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಸಿಎಂ ಸೂಚನೆ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 40 ಸಿಬ್ಬಂದಿಯನ್ನೊಳಗೊಂಡ ನಾಲ್ಕು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ. ಅಲ್ಲದೆ, ಶೋಧಕ್ಕಾಗಿ ಡ್ರೋನ್ ಕ್ಯಾಮರಾ ಬಳಸುವಂತೆ ಅರಣ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಒಟ್ಟು ಒಂಬತ್ತು ತಂಡಗಳು ಕಾರ್ಯಾಚರಣೆ ನಡೆಸುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ದಾವಣಗೆರೆಯಲ್ಲಿ ತಿಳಿಸಿದ್ದಾರೆ. ಇದೇ ವೇಳೆ, ಕಾಡಿನಲ್ಲಿ ಶೋಧ ಕಾರ್ಯಕ್ಕೆ ನಕ್ಸಲ್ ವಿರೋಧಿ ತಂಡವನ್ನೂ ನಿಯೋಜನೆ ಮಾಡಲಾಗಿದೆ.
ಕೋಯಿಕ್ಕೋಡ್ ನಿವಾಸಿ ಹಾಗೂ ಎರ್ನಾಕುಲಂನಲ್ಲಿ ಐಟಿ ಉದ್ಯೋಗಿಯಾಗಿರುವ ಶರಣ್ಯಾ ಕಕ್ಕಬ್ಬೆಯ ಹೋಂಸ್ಟೇಯಲ್ಲಿ ಒಬ್ಬರೇ ತಂಗಿದ್ದರು. ಏಪ್ರಿಲ್ 2ರಂದು ಬೆಳಗ್ಗೆ ಚಾರಣಕ್ಕೆಂದು ಅರಣ್ಯ ಇಲಾಖೆ ಚೆಕ್ಪೋಸ್ಟ್ ಬಳಿ ಬಂದಿದ್ದ ಅವರನ್ನು ಸುರಕ್ಷತೆಯ ದೃಷ್ಟಿಯಿಂದ 15 ಜನರಿದ್ದ ಮತ್ತೊಂದು ಪ್ರವಾಸಿಗರ ತಂಡದೊಂದಿಗೆ ಕಳುಹಿಸಲಾಗಿತ್ತು. ಆದರೆ, ಮಧ್ಯಾಹ್ನ 1:30ಕ್ಕೆ ವಾಪಸ್ ಬರಬೇಕಿದ್ದ ಶರಣ್ಯಾ ಹಿಂದಿರುಗಿ ಬರದಿರುವುದು ಆತಂಕಕ್ಕೆ ಕಾರಣವಾಗಿತ್ತು.
ಹೋಂಸ್ಟೇ ಮಾಲೀಕರು ಆಕೆಗೆ ಫೋನ್ ಮಾಡಿದಾಗ ಮೊದಲು ಸಂಪರ್ಕ ಸಿಕ್ಕಿರಲಿಲ್ಲ. ನಂತರ ಕರೆ ಸ್ವೀಕರಿಸಿದ ಶರಣ್ಯಾ, ‘ದಾರಿ ತಪ್ಪಿದ್ದೇನೆ’ ಎಂದು ಗಾಬರಿಯಿಂದ ಹೇಳಿದ್ದರು. ಅಷ್ಟರಲ್ಲೇ ಫೋನ್ ಸಂಪರ್ಕ ಕಡಿತಗೊಂಡಿದ್ದು, ಆ ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಅದರ ಬೆನ್ನಲ್ಲೇ ಅರಣ್ಯ ಇಲಾಖೆ, ಪೊಲೀಸ್ ಮತ್ತು ಸ್ಥಳೀಯರು ಹುಡುಕಾಟ ನಡೆಸುತ್ತಿದ್ದರೂ ದಟ್ಟ ಅರಣ್ಯ ಮತ್ತು ಕಾಡಾನೆಗಳ ಹಾವಳಿಯಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಪ್ರಸ್ತುತ ನಕ್ಸಲ್ ನಿಗ್ರಹ ಪಡೆಯೂ ಬೆಟ್ಟದ ದುರ್ಗಮ ಹಾದಿಗಳಲ್ಲಿ ಶೋಧ ನಡೆಸುತ್ತಿದೆ. ಮೂರು ದಿನ ಕಳೆದರೂ ಶರಣ್ಯ ಪತ್ತೆಯಾಗದಿರುವುದು ಆತಂಕಕ್ಕೆ ಕಾರಣವಾಗಿದೆ. ಇದೀಗ ಕರ್ನಾಟಕ ಮತ್ತು ಕೇರಳ ಸರ್ಕಾರಗಳು ಶರಣ್ಯ ಪತ್ತೆಗೆ ಕಾರ್ಯಾಚರಣೆ ತೀವ್ರಗೊಳಿಸಲು ಮುಂದಾಗಿದೆ.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm