ಬ್ರೇಕಿಂಗ್ ನ್ಯೂಸ್
05-04-26 07:24 pm HK News Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 5: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಯುವತಿ ಜಿ.ಎಸ್.ಶರಣ್ಯಾ (36) ನಾಪತ್ತೆಯಾಗಿ ಮೂರು ದಿನ ಕಳೆದರೂ ಆಕೆಯ ಸುಳಿವು ಸಿಗದ ಕಾರಣ ಪತ್ತೆಗಾಗಿ ಎಲ್ಲ ರೀತಿಯ ಸಾಮರ್ಥ್ಯ ಬಳಸಿಕೊಂಡು ಶೋಧ ನಡೆಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಸಿಎಂ ಸೂಚನೆ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 40 ಸಿಬ್ಬಂದಿಯನ್ನೊಳಗೊಂಡ ನಾಲ್ಕು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ. ಅಲ್ಲದೆ, ಶೋಧಕ್ಕಾಗಿ ಡ್ರೋನ್ ಕ್ಯಾಮರಾ ಬಳಸುವಂತೆ ಅರಣ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಒಟ್ಟು ಒಂಬತ್ತು ತಂಡಗಳು ಕಾರ್ಯಾಚರಣೆ ನಡೆಸುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ದಾವಣಗೆರೆಯಲ್ಲಿ ತಿಳಿಸಿದ್ದಾರೆ. ಇದೇ ವೇಳೆ, ಕಾಡಿನಲ್ಲಿ ಶೋಧ ಕಾರ್ಯಕ್ಕೆ ನಕ್ಸಲ್ ವಿರೋಧಿ ತಂಡವನ್ನೂ ನಿಯೋಜನೆ ಮಾಡಲಾಗಿದೆ.
ಕೋಯಿಕ್ಕೋಡ್ ನಿವಾಸಿ ಹಾಗೂ ಎರ್ನಾಕುಲಂನಲ್ಲಿ ಐಟಿ ಉದ್ಯೋಗಿಯಾಗಿರುವ ಶರಣ್ಯಾ ಕಕ್ಕಬ್ಬೆಯ ಹೋಂಸ್ಟೇಯಲ್ಲಿ ಒಬ್ಬರೇ ತಂಗಿದ್ದರು. ಏಪ್ರಿಲ್ 2ರಂದು ಬೆಳಗ್ಗೆ ಚಾರಣಕ್ಕೆಂದು ಅರಣ್ಯ ಇಲಾಖೆ ಚೆಕ್ಪೋಸ್ಟ್ ಬಳಿ ಬಂದಿದ್ದ ಅವರನ್ನು ಸುರಕ್ಷತೆಯ ದೃಷ್ಟಿಯಿಂದ 15 ಜನರಿದ್ದ ಮತ್ತೊಂದು ಪ್ರವಾಸಿಗರ ತಂಡದೊಂದಿಗೆ ಕಳುಹಿಸಲಾಗಿತ್ತು. ಆದರೆ, ಮಧ್ಯಾಹ್ನ 1:30ಕ್ಕೆ ವಾಪಸ್ ಬರಬೇಕಿದ್ದ ಶರಣ್ಯಾ ಹಿಂದಿರುಗಿ ಬರದಿರುವುದು ಆತಂಕಕ್ಕೆ ಕಾರಣವಾಗಿತ್ತು.
ಹೋಂಸ್ಟೇ ಮಾಲೀಕರು ಆಕೆಗೆ ಫೋನ್ ಮಾಡಿದಾಗ ಮೊದಲು ಸಂಪರ್ಕ ಸಿಕ್ಕಿರಲಿಲ್ಲ. ನಂತರ ಕರೆ ಸ್ವೀಕರಿಸಿದ ಶರಣ್ಯಾ, ‘ದಾರಿ ತಪ್ಪಿದ್ದೇನೆ’ ಎಂದು ಗಾಬರಿಯಿಂದ ಹೇಳಿದ್ದರು. ಅಷ್ಟರಲ್ಲೇ ಫೋನ್ ಸಂಪರ್ಕ ಕಡಿತಗೊಂಡಿದ್ದು, ಆ ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಅದರ ಬೆನ್ನಲ್ಲೇ ಅರಣ್ಯ ಇಲಾಖೆ, ಪೊಲೀಸ್ ಮತ್ತು ಸ್ಥಳೀಯರು ಹುಡುಕಾಟ ನಡೆಸುತ್ತಿದ್ದರೂ ದಟ್ಟ ಅರಣ್ಯ ಮತ್ತು ಕಾಡಾನೆಗಳ ಹಾವಳಿಯಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಪ್ರಸ್ತುತ ನಕ್ಸಲ್ ನಿಗ್ರಹ ಪಡೆಯೂ ಬೆಟ್ಟದ ದುರ್ಗಮ ಹಾದಿಗಳಲ್ಲಿ ಶೋಧ ನಡೆಸುತ್ತಿದೆ. ಮೂರು ದಿನ ಕಳೆದರೂ ಶರಣ್ಯ ಪತ್ತೆಯಾಗದಿರುವುದು ಆತಂಕಕ್ಕೆ ಕಾರಣವಾಗಿದೆ. ಇದೀಗ ಕರ್ನಾಟಕ ಮತ್ತು ಕೇರಳ ಸರ್ಕಾರಗಳು ಶರಣ್ಯ ಪತ್ತೆಗೆ ಕಾರ್ಯಾಚರಣೆ ತೀವ್ರಗೊಳಿಸಲು ಮುಂದಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 03:14 pm
HK News Staffer
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm