ಬ್ರೇಕಿಂಗ್ ನ್ಯೂಸ್
05-04-26 07:24 pm HK News Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 5: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಯುವತಿ ಜಿ.ಎಸ್.ಶರಣ್ಯಾ (36) ನಾಪತ್ತೆಯಾಗಿ ಮೂರು ದಿನ ಕಳೆದರೂ ಆಕೆಯ ಸುಳಿವು ಸಿಗದ ಕಾರಣ ಪತ್ತೆಗಾಗಿ ಎಲ್ಲ ರೀತಿಯ ಸಾಮರ್ಥ್ಯ ಬಳಸಿಕೊಂಡು ಶೋಧ ನಡೆಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಸಿಎಂ ಸೂಚನೆ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 40 ಸಿಬ್ಬಂದಿಯನ್ನೊಳಗೊಂಡ ನಾಲ್ಕು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ. ಅಲ್ಲದೆ, ಶೋಧಕ್ಕಾಗಿ ಡ್ರೋನ್ ಕ್ಯಾಮರಾ ಬಳಸುವಂತೆ ಅರಣ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಒಟ್ಟು ಒಂಬತ್ತು ತಂಡಗಳು ಕಾರ್ಯಾಚರಣೆ ನಡೆಸುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ದಾವಣಗೆರೆಯಲ್ಲಿ ತಿಳಿಸಿದ್ದಾರೆ. ಇದೇ ವೇಳೆ, ಕಾಡಿನಲ್ಲಿ ಶೋಧ ಕಾರ್ಯಕ್ಕೆ ನಕ್ಸಲ್ ವಿರೋಧಿ ತಂಡವನ್ನೂ ನಿಯೋಜನೆ ಮಾಡಲಾಗಿದೆ.
ಕೋಯಿಕ್ಕೋಡ್ ನಿವಾಸಿ ಹಾಗೂ ಎರ್ನಾಕುಲಂನಲ್ಲಿ ಐಟಿ ಉದ್ಯೋಗಿಯಾಗಿರುವ ಶರಣ್ಯಾ ಕಕ್ಕಬ್ಬೆಯ ಹೋಂಸ್ಟೇಯಲ್ಲಿ ಒಬ್ಬರೇ ತಂಗಿದ್ದರು. ಏಪ್ರಿಲ್ 2ರಂದು ಬೆಳಗ್ಗೆ ಚಾರಣಕ್ಕೆಂದು ಅರಣ್ಯ ಇಲಾಖೆ ಚೆಕ್ಪೋಸ್ಟ್ ಬಳಿ ಬಂದಿದ್ದ ಅವರನ್ನು ಸುರಕ್ಷತೆಯ ದೃಷ್ಟಿಯಿಂದ 15 ಜನರಿದ್ದ ಮತ್ತೊಂದು ಪ್ರವಾಸಿಗರ ತಂಡದೊಂದಿಗೆ ಕಳುಹಿಸಲಾಗಿತ್ತು. ಆದರೆ, ಮಧ್ಯಾಹ್ನ 1:30ಕ್ಕೆ ವಾಪಸ್ ಬರಬೇಕಿದ್ದ ಶರಣ್ಯಾ ಹಿಂದಿರುಗಿ ಬರದಿರುವುದು ಆತಂಕಕ್ಕೆ ಕಾರಣವಾಗಿತ್ತು.
ಹೋಂಸ್ಟೇ ಮಾಲೀಕರು ಆಕೆಗೆ ಫೋನ್ ಮಾಡಿದಾಗ ಮೊದಲು ಸಂಪರ್ಕ ಸಿಕ್ಕಿರಲಿಲ್ಲ. ನಂತರ ಕರೆ ಸ್ವೀಕರಿಸಿದ ಶರಣ್ಯಾ, ‘ದಾರಿ ತಪ್ಪಿದ್ದೇನೆ’ ಎಂದು ಗಾಬರಿಯಿಂದ ಹೇಳಿದ್ದರು. ಅಷ್ಟರಲ್ಲೇ ಫೋನ್ ಸಂಪರ್ಕ ಕಡಿತಗೊಂಡಿದ್ದು, ಆ ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಅದರ ಬೆನ್ನಲ್ಲೇ ಅರಣ್ಯ ಇಲಾಖೆ, ಪೊಲೀಸ್ ಮತ್ತು ಸ್ಥಳೀಯರು ಹುಡುಕಾಟ ನಡೆಸುತ್ತಿದ್ದರೂ ದಟ್ಟ ಅರಣ್ಯ ಮತ್ತು ಕಾಡಾನೆಗಳ ಹಾವಳಿಯಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಪ್ರಸ್ತುತ ನಕ್ಸಲ್ ನಿಗ್ರಹ ಪಡೆಯೂ ಬೆಟ್ಟದ ದುರ್ಗಮ ಹಾದಿಗಳಲ್ಲಿ ಶೋಧ ನಡೆಸುತ್ತಿದೆ. ಮೂರು ದಿನ ಕಳೆದರೂ ಶರಣ್ಯ ಪತ್ತೆಯಾಗದಿರುವುದು ಆತಂಕಕ್ಕೆ ಕಾರಣವಾಗಿದೆ. ಇದೀಗ ಕರ್ನಾಟಕ ಮತ್ತು ಕೇರಳ ಸರ್ಕಾರಗಳು ಶರಣ್ಯ ಪತ್ತೆಗೆ ಕಾರ್ಯಾಚರಣೆ ತೀವ್ರಗೊಳಿಸಲು ಮುಂದಾಗಿದೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am