ಬ್ರೇಕಿಂಗ್ ನ್ಯೂಸ್
05-04-26 10:45 pm HK News Staffer ಕರ್ನಾಟಕ
ಕೊಡಗು, ಎಪ್ರಿಲ್ 5: ಮಡಿಕೇರಿ ಬಳಿಯ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ಹೋಗಿ ಕಾಡಿನಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಟೆಕ್ಕಿ ಶರಣ್ಯ ಕೊನೆಗೂ ಪತ್ತೆಯಾಗಿದ್ದಾರೆ. ಸ್ಥಳೀಯ ಮಲೆಕುಡಿಯ ಸಮುದಾಯದ ಜನರ ಶೋಧ ಕಾರ್ಯ ಸಂದರ್ಭ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಮಹಿಳೆಯನ್ನು ಪತ್ತೆ ಮಾಡಲಾಗಿದೆ.
ಎಪ್ರಿಲ್ 2ರಂದು ಬೆಳಗ್ಗೆ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಕಾಡಿನಿಂದ ಹಿಂತಿರುಗುವಾಗ ನಾಪತ್ತೆಯಾಗಿದ್ದಳು. 36 ವರ್ಷದ ಶರಣ್ಯ ಒಬ್ಬಂಟಿಯಾಗೇ ನಾಲ್ಕು ದಿನಗಳಿಂದ ಕಾಡಿನಲ್ಲಿ ಸಿಕ್ಕಿಬಿದ್ದಿದ್ದ ಕಾರಣ ಆತಂಕ ವ್ಯಕ್ತವಾಗಿತ್ತು. ತಡಿಯಂಡಮೋಳ್ ಕರ್ನಾಟಕದ ಪಶ್ಚಿಮ ಘಟ್ಟದ ಸಾಲಿನ ಅತಿ ಎತ್ತರದ ಬೆಟ್ಟವಾಗಿದ್ದು ಪ್ರವಾಸಿಗರ ಆಕರ್ಷಕ ತಾಣವಾಗಿದೆ.

ಮಹಿಳೆ ನಾಪತ್ತೆ ಹಿನ್ನೆಲೆಯಲ್ಲಿ ಅರಣ್ಯ, ಪೊಲೀಸ್ ಇಲಾಖೆ ಮತ್ತು ಗ್ರಾಮಸ್ಥರು ಹಾಗೂ ನಕ್ಸಲ್ ನಿಗ್ರಹ ಪಡೆಯಿಂದ ನಿರಂತರ ಶೋಧ ನಡೆಸಲಾಗಿತ್ತು. ಈ ನಡುವೆ, ಸಿಎಂ ಸಿದ್ದರಾಮಯ್ಯ ಎಲ್ಲ ಸಾಮರ್ಥ್ಯ ಬಳಸಿಕೊಂಡು ಶೋಧ ಕಾರ್ಯಾಚರಣೆಗೆ ಸೂಚಿಸಿದ್ದರು. ಕೊನೆಗೂ ನಾಲ್ಕು ದಿನಗಳ ಸತತ ಹುಡುಕಾಟದ ಬಳಿಕ ಭಾನುವಾರ ಸಂಜೆ ಸ್ಥಳೀಯ ಮಲೆಕುಡಿಯ ಜನಾಂಗದ ಸದಸ್ಯರಿಗೆ ಶರಣ್ಯ ಪತ್ತೆಯಾಗಿದ್ದಾಳೆ. ಇಲ್ಲಿನ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳ ಸಂಚಾರ ಇರುವುದರಿಂದ ಮಹಿಳೆ ಕಾಡಾನೆ ದಾಳಿಗೆ ತುತ್ತಾಗಿದ್ದಾರೆಯೇ ಎಂಬ ಆತಂಕ ವ್ಯಕ್ತವಾಗಿತ್ತು. ರಾತ್ರಿ ಹಗಲು ಅನ್ನ ನೀರು ಇಲ್ಲದೆ ಬದುಕಿ ಉಳಿದಿರಬಹುದೇ ಎಂಬ ಆತಂಕವೂ ಕೇಳಿಬಂದಿತ್ತು.
ಪೊಲೀಸರು, ಅರಣ್ಯ ಸಿಬಂದಿ, ಡ್ರೋಣ್ ಶೋಧ, ನಕ್ಸಲ್ ನಿಗ್ರಹ ಪಡೆಗೂ ನಾಲ್ಕು ದಿನಗಳಿಂದ ಶರಣ್ಯ ಕಾಣಸಿಕ್ಕಿರಲಿಲ್ಲ. ಇದೀಗ ದಿಢೀರ್ ಎನ್ನುವಂತೆ ಕಾಡಿನ ಮಧ್ಯದಿಂದ ಮಲೆಕುಡಿಯ ಜನರು ಪತ್ತೆ ಮಾಡಿ ಸುರಕ್ಷಿತವಾಗಿ ಕರೆತಂದಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 03:14 pm
HK News Staffer
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm