ಬ್ರೇಕಿಂಗ್ ನ್ಯೂಸ್
05-04-26 10:45 pm HK News Staffer ಕರ್ನಾಟಕ
ಕೊಡಗು, ಎಪ್ರಿಲ್ 5: ಮಡಿಕೇರಿ ಬಳಿಯ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ಹೋಗಿ ಕಾಡಿನಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಟೆಕ್ಕಿ ಶರಣ್ಯ ಕೊನೆಗೂ ಪತ್ತೆಯಾಗಿದ್ದಾರೆ. ಸ್ಥಳೀಯ ಮಲೆಕುಡಿಯ ಸಮುದಾಯದ ಜನರ ಶೋಧ ಕಾರ್ಯ ಸಂದರ್ಭ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಮಹಿಳೆಯನ್ನು ಪತ್ತೆ ಮಾಡಲಾಗಿದೆ.
ಎಪ್ರಿಲ್ 2ರಂದು ಬೆಳಗ್ಗೆ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಕಾಡಿನಿಂದ ಹಿಂತಿರುಗುವಾಗ ನಾಪತ್ತೆಯಾಗಿದ್ದಳು. 36 ವರ್ಷದ ಶರಣ್ಯ ಒಬ್ಬಂಟಿಯಾಗೇ ನಾಲ್ಕು ದಿನಗಳಿಂದ ಕಾಡಿನಲ್ಲಿ ಸಿಕ್ಕಿಬಿದ್ದಿದ್ದ ಕಾರಣ ಆತಂಕ ವ್ಯಕ್ತವಾಗಿತ್ತು. ತಡಿಯಂಡಮೋಳ್ ಕರ್ನಾಟಕದ ಪಶ್ಚಿಮ ಘಟ್ಟದ ಸಾಲಿನ ಅತಿ ಎತ್ತರದ ಬೆಟ್ಟವಾಗಿದ್ದು ಪ್ರವಾಸಿಗರ ಆಕರ್ಷಕ ತಾಣವಾಗಿದೆ.

ಮಹಿಳೆ ನಾಪತ್ತೆ ಹಿನ್ನೆಲೆಯಲ್ಲಿ ಅರಣ್ಯ, ಪೊಲೀಸ್ ಇಲಾಖೆ ಮತ್ತು ಗ್ರಾಮಸ್ಥರು ಹಾಗೂ ನಕ್ಸಲ್ ನಿಗ್ರಹ ಪಡೆಯಿಂದ ನಿರಂತರ ಶೋಧ ನಡೆಸಲಾಗಿತ್ತು. ಈ ನಡುವೆ, ಸಿಎಂ ಸಿದ್ದರಾಮಯ್ಯ ಎಲ್ಲ ಸಾಮರ್ಥ್ಯ ಬಳಸಿಕೊಂಡು ಶೋಧ ಕಾರ್ಯಾಚರಣೆಗೆ ಸೂಚಿಸಿದ್ದರು. ಕೊನೆಗೂ ನಾಲ್ಕು ದಿನಗಳ ಸತತ ಹುಡುಕಾಟದ ಬಳಿಕ ಭಾನುವಾರ ಸಂಜೆ ಸ್ಥಳೀಯ ಮಲೆಕುಡಿಯ ಜನಾಂಗದ ಸದಸ್ಯರಿಗೆ ಶರಣ್ಯ ಪತ್ತೆಯಾಗಿದ್ದಾಳೆ. ಇಲ್ಲಿನ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳ ಸಂಚಾರ ಇರುವುದರಿಂದ ಮಹಿಳೆ ಕಾಡಾನೆ ದಾಳಿಗೆ ತುತ್ತಾಗಿದ್ದಾರೆಯೇ ಎಂಬ ಆತಂಕ ವ್ಯಕ್ತವಾಗಿತ್ತು. ರಾತ್ರಿ ಹಗಲು ಅನ್ನ ನೀರು ಇಲ್ಲದೆ ಬದುಕಿ ಉಳಿದಿರಬಹುದೇ ಎಂಬ ಆತಂಕವೂ ಕೇಳಿಬಂದಿತ್ತು.
ಪೊಲೀಸರು, ಅರಣ್ಯ ಸಿಬಂದಿ, ಡ್ರೋಣ್ ಶೋಧ, ನಕ್ಸಲ್ ನಿಗ್ರಹ ಪಡೆಗೂ ನಾಲ್ಕು ದಿನಗಳಿಂದ ಶರಣ್ಯ ಕಾಣಸಿಕ್ಕಿರಲಿಲ್ಲ. ಇದೀಗ ದಿಢೀರ್ ಎನ್ನುವಂತೆ ಕಾಡಿನ ಮಧ್ಯದಿಂದ ಮಲೆಕುಡಿಯ ಜನರು ಪತ್ತೆ ಮಾಡಿ ಸುರಕ್ಷಿತವಾಗಿ ಕರೆತಂದಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm